Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಣಕಲ್ ಸರಕಾರಿ ಉರ್ದು ಶಾಲೆಯಲ್ಲಿ...

ಬಣಕಲ್ ಸರಕಾರಿ ಉರ್ದು ಶಾಲೆಯಲ್ಲಿ ಮೂಲಸೌಕರ್ಯದ ಕೊರತೆ: ಊಟದ ಹಾಲ್‌ನಲ್ಲಿ ಮಕ್ಕಳಿಗೆ ಶಿಕ್ಷಣ !

►ಬೀಳುವ ಸ್ಥಿತಿಯಲ್ಲಿ ಶಾಲೆಯ ಮೇಲ್ಛಾವಣಿ ►ಪುರಾತನ ನೆಲಬೆಂಚುಗಳಲ್ಲೇ ಮಕ್ಕಳ ಕಲಿಕೆ

ವಾರ್ತಾಭಾರತಿವಾರ್ತಾಭಾರತಿ16 July 2019 11:58 PM IST
share
ಬಣಕಲ್ ಸರಕಾರಿ ಉರ್ದು ಶಾಲೆಯಲ್ಲಿ ಮೂಲಸೌಕರ್ಯದ ಕೊರತೆ: ಊಟದ ಹಾಲ್‌ನಲ್ಲಿ ಮಕ್ಕಳಿಗೆ ಶಿಕ್ಷಣ !

ಬಣಕಲ್, ಜು.16: ಇಲ್ಲಿನ ಚರ್ಚ್ ರಸ್ತೆಯಲ್ಲಿರುವ ಸರಕಾರಿ ಉರ್ದು ಪ್ರಾಥಮಿಕ ಶಾಲೆಯ ಮೇಲ್ಛಾವಣಿ ದುಸ್ತಿತಿಯಲ್ಲಿದ್ದು, ಮಕ್ಕಳ ಹಾಜರಾತಿ ಹೆಚ್ಚಿದ್ದರೂ ಕೊಠಡಿಗಳ ಕೊರತೆಯಿಂದ ಊಟದ ಹಾಲ್, ಶಾಲಾ ಕಚೇರಿಯಲ್ಲಿ ತರಗತಿ ನಡೆಸುವ ಅವ್ಯವಸ್ಥೆ ಎದುರಾಗಿದೆ ಎಂದು ಶಾಲೆಯ ಸಮಿತಿಯ ಅಧ್ಯಕ್ಷ ಮುಹಮ್ಮದ್ ಇದ್ರೀಸ್ ದೂರಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಯು ಆರು ದಶಕಗಳ ಹಿಂದೆ ಸ್ಥಾಪನೆಯಾಗಿ 64 ಮಕ್ಕಳಿದ್ದರು. ಪ್ರಸ್ತುತ ಈ ಶಾಲೆಯಲ್ಲಿ ಶಾಲಾ ಸಮಿತಿಯ ಸಹಕಾರದಿಂದ 160 ಮಕ್ಕಳು ಎಲ್‌ಕೆಜಿಯಿಂದ ಏಳನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ಶಾಲೆಯಲ್ಲಿ ಕೊಠಡಿಗಳ ಕೊರತೆಯಿಂದ ಶಾಲಾ ಕಚೇರಿ ಹಾಗೂ ಊಟದ ಹಾಲ್‌ನಲ್ಲಿ ಮಕ್ಕಳಿಗೆ ಶಿಕ್ಷಣ ನೀಡುವ ದುಃಸ್ಥಿತಿ ಎದುರಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಕೆಲವು ತರಗತಿಗಳಿಗೆ ಕೊಠಡಿ ಕೊರತೆಯಿಂದ ಕಂಬೈಂಡ್ ಮಾಡಿ ಶಿಕ್ಷಕರು ಪಾಠ ಮಾಡುತ್ತಿದ್ದಾರೆ. ಇನ್ನು ಮಕ್ಕಳ ಸಂಖ್ಯೆ ಹೆಚ್ಚಿದ್ದರೂ ಶೌಚಾಲಯದ ಕೊರತೆ ಎದುರಾಗಿದೆ. ಶೌಚಾಲಯದ ಬಾಗಿಲುಗಳು ಮಳೆಯಿಂದ ಹಾನಿಯಾಗಿವೆ. ಈ ಶೌಚಾಲಯಗಳು ಎರಡು ದಶಕಗಳ ಹಿಂದೆ ರಾಜೀವ್ ಗಾಂಧಿ ಯೋಜನೆಯಡಿ ನಿರ್ಮಾಣವಾಗಿದ್ದು ಮಕ್ಕಳಿಗೆ ಸಮರ್ಪಕವಾದ ಶೌಚಾಲಯದ ವ್ಯವಸ್ಥೆ ಇಲ್ಲದಿರುವುದು ಪೋಷಕರ ಆಕ್ರೋಶಕ್ಕೂ ಕಾರಣವಾಗಿದೆ ಎಂದು ಅವರು ಅಸಹಾಯಕತೆ ವ್ಯಕ್ತಪಡಿಸಿದರು.

ಸರಕಾರಿ ಶಾಲೆಗಳು ಮಕ್ಕಳಿಲ್ಲದೇ ಮುಚ್ಚುತ್ತಿರುವ ಘಟನೆಗಳೇ ಹೆಚ್ಚಿವೆ. ಇಲ್ಲಿ ಮೌಲ್ಯವರ್ಧಿತ ಶಿಕ್ಷಣ, ಶಾಲಾ ಸಮಿತಿಯ ಸಹಕಾರದಿಂದ ಮಕ್ಕಳನ್ನು ಶಾಲೆಗೆ ಸೆಳೆಯಲಾಗುತ್ತಿದೆ. ಆದರೆ ಕೊಠಡಿಗಳ ಅವ್ಯವಸ್ಥೆಯಿಂದ ಮಕ್ಕಳು ಶಿಕ್ಷಣ ಪಡೆಯಲು ಹೈರಾಣರಾಗಬೇಕಿದೆ ಎಂದು ಮುಹಮ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಲೆಯಲ್ಲಿ ಸರಕಾರದಿಂದ ಮಣೆ ತರಹದ ಕೆಲವು ಪುರಾತನ ನೆಲಬೆಂಚುಗಳಿದ್ದು, ಅವುಗಳೂ ಹಾಳಾಗಿವೆ. ಮಕ್ಕಳ ಸಂಖ್ಯೆ ಹೆಚ್ಚಿರುವುದರಿಂದ ಬೆಂಚುಗಳ ಕೊರತೆಯೂ ಉಂಟಾಗಿದೆ. ಶಾಲಾ ಮೇಲ್ಚಾವಣಿಯ ಮರದ ಜಂತಿ ಮಳೆಗೆ ಮುರಿದಿದ್ದು ಕಟ್ಟಡದ ಸ್ಥಿತಿಯೂ ಶಿಕ್ಷಣಕ್ಕೆ ಯೋಗ್ಯವಾಗಿಲ್ಲ ಎಂಬಂತಾಗಿದೆ ಎಂದು ಅವರು ಹೇಳಿದರು. ಸಂಬಂಧಪಟ್ಟ ಅಧಿಕಾರಿಗಳು ಶಾಲೆಯ ಸೌಲಭ್ಯದ ಅವ್ಯವಸ್ಥೆಯ ಬಗ್ಗೆ ಕೊಠಡಿಗಳ ಕೊರತೆಯ ಬಗ್ಗೆ ಶೀಘ್ರವೇ ಗಮನ ಹರಿಸಿ ಶಾಲೆಗೆ ಉತ್ತಮ ಕೊಠಡಿಗಳ ವ್ಯವಸ್ಥೆ ಮಾಡಿಕೊಡಬೇಕೆಂದು ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X