Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. Breaking News: ಕುಲಭೂಷಣ್ ಜಾಧವ್...

Breaking News: ಕುಲಭೂಷಣ್ ಜಾಧವ್ ಮರಣದಂಡನೆ ಶಿಕ್ಷೆಗೆ ತಡೆ ಹೇರಿದ ಅಂತರ್‌ರಾಷ್ಟ್ರೀಯ ನ್ಯಾಯಾಲಯ

ಶಿಕ್ಷೆಯನ್ನು ಪುನರ್‌ಪರಿಶೀಲಿಸುವಂತೆ ಪಾಕ್‌ಗೆ ನಿರ್ದೇಶ

ವಾರ್ತಾಭಾರತಿವಾರ್ತಾಭಾರತಿ17 July 2019 6:43 PM IST
share
Breaking News: ಕುಲಭೂಷಣ್ ಜಾಧವ್ ಮರಣದಂಡನೆ ಶಿಕ್ಷೆಗೆ ತಡೆ ಹೇರಿದ ಅಂತರ್‌ರಾಷ್ಟ್ರೀಯ ನ್ಯಾಯಾಲಯ

ಹೊಸದಿಲ್ಲಿ,ಜು.17: ಪಾಕಿಸ್ತಾನದಿಂದ ಬೇಹುಗಾರಿಕೆ ಆರೋಪ ಹೊರಿಸಲ್ಪಟ್ಟಿರುವ ಭಾರತದ ನಿವೃತ್ತ ನೌಕಾಪಡೆ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಮರಣ ದಂಡನೆಗೆ ಬುಧವಾರ ತಡೆಯಾಜ್ಞೆಯನ್ನು ನೀಡಿರುವ ಹೇಗ್‌ನ ಅಂತರರಾಷ್ಟ್ರೀಯ ನ್ಯಾಯಾಲಯವು,ಅವರ ದೋಷನಿರ್ಣಯವನ್ನು ಪರಿಣಾಮಕಾರಿಯಾಗಿ ಪುನರ್‌ಪರಿಶೀಲಿಸುವಂತೆ ಮತ್ತು ಪುನರ್‌ಪರಿಗಣಿಸುವಂತೆ ಪಾಕಿಸ್ತಾನಕ್ಕೆ ನಿರ್ದೇಶಿಸಿದೆ. ಅಲ್ಲಿಯವರೆಗೆ ಜಾಧವ್ ಅವರ ಮರಣ ದಂಡನೆ ಅಮಾನತಿನಲ್ಲಿರುತ್ತದೆ ಎಂದು ಅದು ಸ್ಪಷ್ಟಪಡಿಸಿದೆ.

 ಬಹಿರಂಗ ಬೈಠಕ್‌ನಲ್ಲಿ ಭಾರತದ ಪರವಾಗಿ ತೀರ್ಪನ್ನು ಪ್ರಕಟಿಸಿದ ನ್ಯಾಯಾಲಯವು ಜಾಧವ್ ಅವರು ರಾಜತಾಂತ್ರಿಕ ನೆರವನ್ನು ಪಡೆಯಲು ಅವಕಾಶ ಕಲ್ಪಿಸಿದೆ. ಪೀಠದಲ್ಲಿದ್ದ 16 ನ್ಯಾಯಾಧೀಶರ ಪೈಕಿ 15 ಜನರು ಭಾರತದ ಪರವಾಗಿ ತೀರ್ಪು ನೀಡಿದ್ದರು. ಆದರೆ ಜಾಧವ್ ಅವರನ್ನು ದೋಷನಿರ್ಣಯಕ್ಕೆ ಒಳಪಡಿಸಿರುವ ಪಾಕಿಸ್ತಾನದ ಮಿಲಿಟರಿ ನ್ಯಾಯಾಲಯದ ತೀರ್ಪಿನ ರದ್ದತಿ,ಅವರ ಬಿಡುಗಡೆ ಮತ್ತು ಸ್ವದೇಶಕ್ಕೆ ಸುರಕ್ಷಿತವಾಗಿ ಮರಳುವಿಕೆ ಸೇರಿದಂತೆ ಭಾರತವು ಕೋರಿದ್ದ ಹೆಚ್ಚಿನ ಪರಿಹಾರಗಳನ್ನು ನ್ಯಾಯಾಲಯವು ತಿರಸ್ಕರಿಸಿದೆ.

 ಬಲವಂತದ ತಪ್ಪೊಪ್ಪಿಗೆಯ ಆಧಾರದಲ್ಲಿ ಜಾಧವ್ ಅವರ ‘ವಿಚಾರಣೆ ಪ್ರಹಸನ ’ವನ್ನು ಪ್ರಶ್ನಿಸಿದ್ದ ಭಾರತವು,ಶಿಕ್ಷೆಯನ್ನು ರದ್ದುಗೊಳಿಸುವಂತೆ ಮತ್ತು ಭಾರತದ ರಾಜತಾಂತ್ರಿಕ ನೆರವಿಗೆ ಅವಕಾಶ ನೀಡುವಂತೆ ಪಾಕಿಸ್ತಾನಕ್ಕೆ ಆದೇಶಿಸುವಂತೆ ಅಂತರರಾಷ್ಟ್ರೀಯ ನ್ಯಾಯಾಲಯವನ್ನು ಕೋರಿಕೊಂಡಿತ್ತು.

2016,ಮಾರ್ಚ್‌ನಲ್ಲಿ ಜಾಧವ್ (49)ರನ್ನು ಬಂಧಿಸಿದ್ದ ಪಾಕಿಸ್ತಾನವು ಅವರ ಮೇಲೆ ಬೇಹುಗಾರಿಕೆ ಆರೋಪವನ್ನು ಹೊರಿಸಿತ್ತು. ಈ ಆರೋಪವನ್ನು ಭಾರತವು ತಳ್ಳಿಹಾಕಿತ್ತು. ಒಂದು ವರ್ಷದ ಬಳಿಕ ಪಾಕಿಸ್ತಾನದ ಮಿಲಿಟರಿ ನ್ಯಾಯಾಲಯವು ಅವರಿಗೆ ಮರಣ ದಂಡನೆಯನ್ನು ವಿಧಿಸಿತ್ತು. ಒಂದು ತಿಂಗಳ ಬಳಿಕ ಭಾರತವು ಪಾಕಿಸ್ತಾನವನ್ನು ಅಂತರರಾಷ್ಟ್ರೀಯ ನ್ಯಾಯಾಲಯಕ್ಕೆ ಎಳೆದಿತ್ತು ಮತ್ತು ಮೇ,2017ರಲ್ಲಿ ಮರಣ ದಂಡನೆ ಜಾರಿಗೆ ತಡೆಯಾಜ್ಞೆ ನೀಡಲಾಗಿತ್ತು.

 ಇರಾನ್‌ನಿಂದ ತನ್ನ ದೇಶವನ್ನು ಪ್ರವೇಶಿಸಿದ್ದ ಜಾಧವ್ ಅವರನ್ನು 2016,ಮಾ.3ರಂದು ಬಲೂಚಿಸ್ತಾನ ಪ್ರಾಂತ್ಯದಲ್ಲಿ ತನ್ನ ಭದ್ರತಾ ಪಡೆಗಳು ಬಂಧಿಸಿದ್ದವು ಎಂದು ಪಾಕಿಸ್ತಾನವು ಹೇಳಿಕೊಂಡಿತ್ತು.

ಜಾಧವ್ ಅವರು ನೌಕಾಪಡೆಯಿಂದ ನಿವೃತ್ತಗೊಂಡ ಬಳಿಕ ಇರಾನ್‌ನಲ್ಲಿ ಉದ್ಯಮಾಸಕ್ತಿಗಳನ್ನು ಹೊಂದಿದ್ದರು ಮತ್ತು ಅಲ್ಲಿಂದ ಅವರನ್ನು ಅಪಹರಿಸಲಾಗಿತ್ತು ಎಂದು ಭಾರತವು ಆರೋಪಿಸಿತ್ತು.

ಪಾಕಿಸ್ತಾನವು ಜಾಧವ್ ಅವರಿಗೆ ರಾಜತಾಂತ್ರಿಕ ನೆರವನ್ನು ನಿರಾಕರಿಸುವ ಮೂಲಕ ವಿಯೆನ್ನಾ ನಿರ್ಣಯವನ್ನು ಉಲ್ಲಂಘಿಸಿದೆ ಎಂಂದು ಭಾರತವು ಅಂತರರಾಷ್ಟ್ರೀಯ ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಆರೋಪಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X