Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರಿ ಸೇವೆಯ ಆಸೆಗೆ ಬಿದ್ದರೆ ಭವಿಷ್ಯವೇ...

ಸರಕಾರಿ ಸೇವೆಯ ಆಸೆಗೆ ಬಿದ್ದರೆ ಭವಿಷ್ಯವೇ ಹಾಳು: ನ್ಯಾ.ವಿಶ್ವನಾಥ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ17 July 2019 10:18 PM IST
share
ಸರಕಾರಿ ಸೇವೆಯ ಆಸೆಗೆ ಬಿದ್ದರೆ ಭವಿಷ್ಯವೇ ಹಾಳು: ನ್ಯಾ.ವಿಶ್ವನಾಥ ಶೆಟ್ಟಿ

ಬೆಂಗಳೂರು, ಜು.17: ಉನ್ನತ ಶಿಕ್ಷಣ ಪಡೆದ ಅನೇಕರು, ಸರಕಾರಿ ಕೆಲಸವೇ ಬೇಕೆಂದು ಸಣ್ಣ ಹುದ್ದೆಗಳನ್ನು ಆಯ್ಕೆ ಮಾಡಿಕೊಂಡರೆ ಭವಿಷ್ಯವೇ ಹಾಳಾಗುವುದು ನಿಶ್ಚಯ ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಹೇಳಿದರು.

ಬುಧವಾರ ನಗರದ ಮಲ್ಲೇಶ್ವರಂನ 8ನೆ ಮುಖ್ಯರಸ್ತೆಯ ಚಿತ್ರಾಪುರ ಭವನದಲ್ಲಿ ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆ ಆಯೋಜಿಸಿದ್ದ, ಉಚಿತ ಕಂಪ್ಯೂಟರ್ ತರಬೇತಿಗಳ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪೊಲೀಸ್ ಪೇದೆ, ವಿವಿಧ ಇಲಾಖೆಗಳ ಡಿ-ದರ್ಜೆ ಸೇರಿದಂತೆ ಸಣ್ಣಪುಟ್ಟ ಹುದ್ದೆಗಳಲ್ಲಿ ಸ್ನಾತಕೋತ್ತರ, ಪಿಎಚ್‌ಡಿ ಗಳಿಸಿದ ಅನೇಕರು ಭರ್ತಿ ಆಗಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಉದ್ಯೋಗ ಭದ್ರತೆ ನೆಪ ಇಟ್ಟುಕೊಂಡು, ಉತ್ತಮ ಭವಿಷ್ಯ ಕೈಬಿಡುವುದು ಸರಿಯೂ ಅಲ್ಲ. ಈ ಬಗ್ಗೆ ಶಿಕ್ಷಣದ ಜಾಗೃತಿ ಬರಬೇಕು ಎಂದರು.

ಬದುಕಿನಲ್ಲಿ ಗುರಿ ಅಥವಾ ಸ್ವಾವಲಂಬನೆ ಸಾಧಿಸಬೇಕಾದರೆ ಸತತ ಪರಿಶ್ರಮ ಹಾಗೂ ತಾಳ್ಮೆಯು ಮಹತ್ವ ಪೂರ್ಣವಾಗಿರುತ್ತದೆ. ನಮ್ಮ ದೇಶದಲ್ಲಿ ಎಲ್ಲರಿಗೂ ಸರಕಾರಿ ಉದ್ಯೋಗ ದೊರಕಲು ಸಾಧ್ಯವಿಲ್ಲ. ಆದರೆ, ಪ್ರತಿಯೊಬ್ಬರೂ ಕೂಡ ಸ್ವಾವಲಂಬಿಯಾಗಿ ಸ್ವಯಂ ಉದ್ಯೋಗ ಕೈಗೊಳ್ಳಲು ಅವಕಾಶಗಳಿದ್ದು ಯುವಜನರು ಇವುಗಳನ್ನು ಸದ್ಭಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಲು ಚಿಂತನೆ ನಡೆಸುವ ಅಗತ್ಯತೆ ಇದೆ ಎಂದು ತಿಳಿಸಿದರು.

ತರಬೇತಿ ಸಂಸ್ಥೆಯ ನಿರ್ದೇಶಕ ಎಂ.ವಿ.ಶೇಷಾದ್ರಿ ಮಾತನಾಡಿ, ಇದುವರೆಗೂ ಬರೋಬ್ಬರಿ 8.40ಲಕ್ಷ ಮಂದಿ ವಿವಿಧ ತರಬೇತಿ ಪಡೆದಿದ್ದಾರೆ. ಪ್ರತಿ ವಾರ್ಷಿಕ ಸಾಲಿನಲ್ಲಿಯೂ ಹಲವು ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸುತ್ತಿದ್ದು, ಇದರಿಂದ ಗ್ರಾಮೀಣ ಭಾಗದ ಯುವಕ-ಯುವತಿಯರಿಗೆ ಅನುಕೂಲ ಆಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಪಿ.ಪಿ.ತಂಗವೇಲು ಸೇರಿದಂತೆ ಪ್ರಮುಖರಿದ್ದರು.

ವೇತನ ಹೆಚ್ಚಿಲ್ಲ

ಕೆಲವರು ಲೋಕಾಯುಕ್ತರಿಗೆ ವೇತನ, ಆದಾಯ ಹೆಚ್ಚಿರುತ್ತದೆ ಎಂದು ಭಾವಿಸಿಕೊಂಡಿದ್ದಾರೆ. ಆದರೆ, ವಾಸ್ತವವಾಗಿ ನಾನು ವಕೀಲನಾಗಿದ್ದರೆ ಹೆಚ್ಚಿನ ವೇತನ ಬರುತಿತ್ತು.

-ಪಿ.ವಿಶ್ವನಾಥ ಶೆಟ್ಟಿ ಲೋಕಾಯುಕ್ತ ನ್ಯಾಯಮೂರ್ತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X