Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕುಲಭೂಷಣ್ ಪ್ರಕರಣ: ಕಾನೂನು ಸಮರದಲ್ಲಿ...

ಕುಲಭೂಷಣ್ ಪ್ರಕರಣ: ಕಾನೂನು ಸಮರದಲ್ಲಿ ಭಾರತ ಜಯಿಸಿದ್ದು ಹೇಗೆ ಗೊತ್ತೆ?

ವಾರ್ತಾಭಾರತಿವಾರ್ತಾಭಾರತಿ18 July 2019 9:56 AM IST
share
ಕುಲಭೂಷಣ್ ಪ್ರಕರಣ: ಕಾನೂನು ಸಮರದಲ್ಲಿ ಭಾರತ ಜಯಿಸಿದ್ದು ಹೇಗೆ ಗೊತ್ತೆ?

ಹೊಸದಿಲ್ಲಿ, ಜು.18: ಪಾಕಿಸ್ತಾನದ ಸೇನಾ ನ್ಯಾಯಾಲಯ ಕುಲಭೂಷಣ್ ಜಾಧವ್ ಅವರಿಗೆ ಮರಣ ದಂಡನೆ ವಿಧಿಸಿ ತೀರ್ಪು ನೀಡಿದಾಗ 2017ರಲ್ಲಿ ಭಾರತಕ್ಕೆ ಅಂತಾರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗುವುದು ಬಿಟ್ಟರೆ ಯಾವ ಅವಕಾಶವೂ ಇರಲಿಲ್ಲ. ಜಾಧವ್ ಸಾಮಾನ್ಯ ಪ್ರಜೆಯಾಗಿದ್ದು, ಅವರನ್ನು ಸಶಸ್ತ್ರ ಗುಂಪು ಅಪಹರಿಸಿ ಪಾಕಿಸ್ತಾನಕ್ಕೆ ಕರೆದೊಯ್ದಿದೆ. ಬಲೂಚಿಸ್ತಾನದ ಸಮಸ್ಯೆಗಳ ಬಗ್ಗೆ ಭಾರತದ ಮೇಲೆ ಗೂಬೆ ಕೂರಿಸಲು ಪಾಕಿಸ್ತಾನ ಈ ವಿಷಯವನ್ನು ಬಳಸಿಕೊಳ್ಳುತ್ತಿದೆ ಎನ್ನುವುದು ಭಾರತದ ವಾದವಾಗಿತ್ತು.

ಜಾಧವ್ ಅವರಿಗೆ ತಮ್ಮ ಆಯ್ಕೆಯ ಕಾನೂನು ಸಲಹೆಗಾರರ ಮೂಲಕ ಸಮರ್ಥಿಸಿಕೊಳ್ಳುವ ಹಕ್ಕನ್ನು ನಿರಾಕರಿಸಲಾಗಿದೆ ಎಂದು ಭಾರತ ಹೇಳಿತ್ತು. ಅವರನ್ನು ಬಂಧನದಲ್ಲಿರಿಸಿ ತಪ್ಪೊಪ್ಪಿಗೆ ಹೇಳಿಕೆ ಬರೆಸಿಕೊಂಡು ಈ ಆಧಾರದಲ್ಲಿ ಅವರಿಗೆ ಮರಣ ದಂಡನೆ ವಿಧಿಸಲಾಗಿತ್ತು ಎಂದು ಭಾರತ ಪ್ರತಿಪಾದಿಸಿತ್ತು.

ರಾಜತಾಂತ್ರಿಕ ಸಂಬಂಧ ಕುರಿತ ವಿಯೆನ್ನಾ ಒಪ್ಪಂದದ 36(1)(ಬಿ) ವಿಧಿಯನ್ನು ಪಾಕಿಸ್ತಾನ ಉಲ್ಲಂಘಿಸಿದೆ ಎಂಬ ಆಧಾರದಲ್ಲಿ ಭಾರತ ತನ್ನ ವಾದ ಮಂಡಿಸಿತ್ತು. ಇದರ ಅನ್ವಯ, ಭಾರತೀಯ ಪ್ರಜೆಯನ್ನು ಬಂಧಿಸಿದ ಬಗ್ಗೆ ಪಾಕಿಸ್ತಾನ ತಕ್ಷಣ ಭಾರತಕ್ಕೆ ಮಾಹಿತಿ ನೀಡಬೇಕಿತ್ತು.

ಜಾಧವ್ ಅವರನ್ನು 2016ರ ಮಾರ್ಚ್ 3ರಂದು ಬಂಧಿಸಲಾಗಿದೆ ಎಂದು ಪಾಕಿಸ್ತಾನ ಘೋಷಿಸಿತ್ತು. ಆದರೆ 2016ರ ಮಾರ್ಚ್ 25ರಂದು ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ಭಾರತೀಯ ಹೈಕಮಿಷನ್‌ಗೆ ಈ ಮಾಹಿತಿ ನೀಡಿದ್ದರು. ಜಾಧವ್ ಬಂಧನದ ವಿಷಯವನ್ನು ಮೂರು ವಾರದಷ್ಟು ವಿಳಂಬ ಮಾಡಿ ಏಕೆ ಭಾರತಕ್ಕೆ ತಿಳಿಸಲಾಗಿದೆ ಎಂಬ ಬಗ್ಗೆ ಪಾಕಿಸ್ತಾನ ಯಾವ ವಿವರಣೆಯನ್ನೂ ನೀಡಿಲ್ಲ ಎನ್ನುವುದು ಭಾರತದ ವಾದ. ಈ ಮೂಲಕ ಭಾರತೀಯ ಅಧಿಕಾರಿಗಳು ಜಾಧವ್ ಅವರನ್ನು ಭೇಟಿ ಮಾಡುವ ಅವಕಾಶ ತಪ್ಪಿತ್ತು. ಇದು ವಿಯೆನ್ನಾ ಒಪ್ಪಂದದ ಸ್ಪಷ್ಟ ಉಲ್ಲಂಘನೆ.

ಜತೆಗೆ ಜಾಧವ್ ತಪ್ಪೊಪ್ಪಿಗೆ ಹೇಳಿಕೆಯ ಆಧಾರದಲ್ಲಿ ಅವರಿಗೆ ಶಿಕ್ಷೆ ವಿಧಿಸಲಾಗಿತ್ತು. ಆದರೆ ಜಾಧವ್‌ಗೆ ತಮ್ಮ ಪರ ವಾದ ಮಂಡಿಸಲು ಸೂಕ್ತ ಕಾನೂನಾತ್ಮಕ ಅವಕಾಶ ನೀಡಲಿಲ್ಲ ಎಂದೂ ಭಾರತೀಯ ಅಧಿಕಾರಿಗಳು ಹೇಳಿದ್ದರು. ವಿಯೆನ್ನಾ ಒಪ್ಪಂದ ಹಾಗೂ ಅಂತಾರಾಷ್ಟ್ರೀಯ ಕಾನೂನುಗಳ ಪ್ರಕಾರ ಇದು ಪಾಕಿಸ್ತಾನದ ಕಡೆಯಿಂದ ಆಗಿರುವ ಲೋಪ. 2008ರಲ್ಲಿ ಮಾಡಿಕೊಂಡಿರುವ ದ್ವಿಪಕ್ಷೀಯ ಒಪ್ಪಂದವು ವಿಯೆನ್ನಾ ಒಪ್ಪಂದವನ್ನು ಮೀರಿದ್ದು ಎಂಬ ವಾದವನ್ನು ಪಾಕಿಸ್ತಾನ ಮುಂದಿಟ್ಟಿತ್ತು.

ಇದು ಬೇಹುಗಾರಿಕೆ ಪ್ರಕರಣವಾಗಿರುವುದರಿಂದ ವಿಯೆನ್ನಾ ಒಪ್ಪಂದದ ಪ್ರಕಾರ ಆರೋಪಿಗೆ ಸಮರ್ಥಿಸಿಕೊಳ್ಳಲು ಅವಕಾಶ ನೀಡಬೇಕಿಲ್ಲ ಎಂಬ ಪಾಕಿಸ್ತಾನದ ವಾದವನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ಮನ್ನಿಸದೇ ಇರುವುದರಿಂದ ಭಾರತಕ್ಕೆ ಜಯ ಸಾಧ್ಯವಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X