Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಶ್ನೆಗೆ ಉತ್ತರಿಸಿ, ಇಲ್ಲವೇ ನಿಷೇಧ...

ಪ್ರಶ್ನೆಗೆ ಉತ್ತರಿಸಿ, ಇಲ್ಲವೇ ನಿಷೇಧ ಎದುರಿಸಿ: ‘ಟಿಕ್-ಟಾಕ್’, ‘ಹಲೋ’ಗೆ ಕೇಂದ್ರ ಎಚ್ಚರಿಕೆ

ಕಾರಣವೇನು ಗೊತ್ತಾ?

ವಾರ್ತಾಭಾರತಿವಾರ್ತಾಭಾರತಿ18 July 2019 7:51 PM IST
share
ಪ್ರಶ್ನೆಗೆ ಉತ್ತರಿಸಿ, ಇಲ್ಲವೇ ನಿಷೇಧ ಎದುರಿಸಿ: ‘ಟಿಕ್-ಟಾಕ್’, ‘ಹಲೋ’ಗೆ ಕೇಂದ್ರ ಎಚ್ಚರಿಕೆ

ಹೊಸದಿಲ್ಲಿ, ಜು. 18: ತನ್ನ 21 ಪ್ರಶ್ನೆಗಳ ಸೆಟ್‌ಗೆ ಜುಲೈ 22ರ ಒಳಗೆ ಸೂಕ್ತ ಪ್ರತ್ಯುತ್ತರ ನೀಡದೇ ಇದ್ದರೆ ಆ್ಯಪ್‌ಗಳನ್ನು ನಿಷೇಧಿಸಲಾಗುವುದು ಎಂದು ಎಚ್ಚರಿಸಿ ಕೇಂದ್ರ ಸರಕಾರ ಸಾಮಾಜಿಕ ಮಾಧ್ಯಮ ವೇದಿಕೆಯಾದ ‘ಟಿಕ್-ಟಾಕ್’ ಹಾಗೂ ‘ಹಲೋ’ಗೆ ನೋಟಿಸು ಜಾರಿ ಮಾಡಿದೆ.

ಈ ಎರಡು ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ದೇಶ ವಿರೋಧಿ ಚಟುವಟಿಕೆಗಳಿಗೆ ಬಳಸಲಾಗುತ್ತದೆ ಎಂದು ಆರೆಸ್ಸೆಸ್ ನ ಅಂಗಸಂಸ್ಥೆಯಾದ ಸ್ವದೇಶಿ ಜಾಗರಣ್ ಮಂಚ್ ಪ್ರಧಾನ ನರೇಂದ್ರ ಮೋದಿ ಅವರಿಗೆ ದೂರು ನೀಡಿದ ಬಳಿಕ ಇಲೆಕ್ಟ್ರಾನಿಕ್ಸ್ ಹಾಗೂ ಐಟಿ ಸಚಿವಾಲಯ ಈ ಕ್ರಮ ಕೈಗೊಂಡಿದೆ. ಈ ವೇದಿಕೆಗಳು ದೇಶ ವಿರೋಧಿ ಚಟುವಟಿಕೆಗಳ ಜಾಲವಾಗುತ್ತಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯೆಯನ್ನು ಎಲೆಕ್ಟ್ರಾನಿಕ್ಸ್ ಹಾಗೂ ಐಟಿ ಸಚಿವಾಲಯ ಟಿಕ್‌ ಟಾಕ್ ಹಾಗೂ ಹಲೋ ಅಲ್ಲಿ ಕೇಳಿದೆ. ಅಲ್ಲದೆ, ಭಾರತೀಯ ಬಳಕೆದಾರರ ದತ್ತಾಂಶವನ್ನು ಇತರ ಯಾವುದೇ ಸರಕಾರಕ್ಕಾಗಲಿ, ಮೂರನೇ ವ್ಯಕ್ತಿ ಅಥವಾ ಖಾಸಗಿ ಸಂಸ್ಥೆಗಳಿಗಾಗಲಿ ವರ್ಗಾವಣೆ ಮಾಡುತ್ತಿಲ್ಲ ಎಂದು ಸೂಚಿಸಿದೆ.

ಅಲ್ಲದೆ, ಭವಿಷ್ಯದಲ್ಲಿ ಕೂಡ ವರ್ಗಾವಣೆ ಮಾಡುವುದಿಲ್ಲ ಎಂದು ಭರವಸೆ ನೀಡುವಂತೆ ಎಲೆಕ್ಟ್ರಾನಿಕ್ಸ್ ಹಾಗೂ ಐಟಿ ಸಚಿವಾಲಯ ನಿರ್ದೇಶಿಸಿದೆ ಎಂದು ಮೂಲಗಳು ತಿಳಿಸಿವೆ.

ನಕಲಿ ಸುದ್ದಿಗಳ ಪರಿಶೀಲನೆ ಹಾಗೂ ಅಂತಹ ಸುದ್ದಿಗಳ ಬಗ್ಗೆ ಭಾರತೀಯ ಕಾನೂನು ಅಡಿಯಲ್ಲಿ ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೂಡ ಅದು ಕೋರಿದೆ. ಸಮಾಜಿಕ ಜಾಲ ತಾಣಗಳಲ್ಲಿ 11 ಸಾವಿರ ತಿರುಚಿದ ರಾಜಕೀಯ ಜಾಹೀರಾತುಗಳನ್ನು ಪ್ರಕಟಿಸಲು ಇತರ ಸಾಮಾಜಿಕ ಮಾದ್ಯಮ ವೇದಿಕೆಗಳಿಗೆ ದೊಡ್ಡ ಮೊತ್ತ ಪಾವತಿಸಿದ ಆರೋಪದ ಬಗ್ಗೆ ಪ್ರತಿಕ್ರಿಯಿಸುವಂತೆ ಕೂಡ ‘ಹಲೋ’ಗೆ ಸಚಿವಾಲಯ ಸೂಚಿಸಿದೆ. ಭಾರತದಲ್ಲಿ 18 ವರ್ಷಕ್ಕಿಂತ ಕೆಳಗಿನವರನ್ನು ಮಕ್ಕಳು ಎಂದು ಪರಿಗಣಿಸಲಾಗುತ್ತದೆ. ಆದುದರಿಂದ ಮಕ್ಕಳ ಖಾಸಗಿತನದ ಉಲ್ಲಂಘನೆ ಹಾಗೂ ಈ ಆ್ಯಪ್ ಬಳಸಲು ಕಂಪೆನಿ ಕನಿಷ್ಠ 13 ವರ್ಷ ನಿಗದಿಗೊಳಿಸಿರುವುದರ ಬಗ್ಗೆ ಸಚಿವಾಲಯ ಪ್ರಶ್ನೆ ಎತ್ತಿದೆ.

 ಕೇಂದ್ರ ಸರಕಾರ ನಿಷೇಧ ವಿಧಿಸಲಾಗುವುದು ಎಂದು ಹೇಳಿದ ಬಳಿಕ ಟಿಕ್-ಟಾಕ್ ಹಾಗೂ ಹಲೋ ಪತ್ರಿಕಾ ಹೇಳಿಕೆ ನೀಡಿ, ಸ್ಥಳೀಯ ಸಮುದಾಯದ ಬೆಂಬಲ ಇಲ್ಲದಿದ್ದರೆ, ನಾವು ಭಾರತದಲ್ಲಿ ನಿರಂತರ ಯಶಸ್ವಿಯಾಗಲು ಸಾಧ್ಯವಿರಲಿಲ್ಲ ಎಂದಿದೆ. ನಾವು ಈ ಸಮುದಾಯದ ಜವಾಬ್ದಾರಿಯನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಬಾಧ್ಯತೆಯನ್ನು ಮುಟ್ಟಲು ನಾವು ಸರಕಾರದ ಜೊತೆ ಸೇರಿ ಕಾರ್ಯ ನಿರ್ವಹಿಸುವ ಈ ಅವಕಾಶವನ್ನು ಸ್ವಾಗತಿಸುತ್ತೇವೆ ಎಂದು ಟಿಕ್-ಟಾಕ್ ಹಾಗೂ ಹಲೋ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X