Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲ: ಮಾಹೆಯಿಂದ 2 ಎಕರೆಯಲ್ಲಿ ಮಳೆ...

ಮಣಿಪಾಲ: ಮಾಹೆಯಿಂದ 2 ಎಕರೆಯಲ್ಲಿ ಮಳೆ ನೀರಿನ ಕೊಯ್ಲು

ವಾರ್ತಾಭಾರತಿವಾರ್ತಾಭಾರತಿ18 July 2019 10:19 PM IST
share
ಮಣಿಪಾಲ: ಮಾಹೆಯಿಂದ 2 ಎಕರೆಯಲ್ಲಿ ಮಳೆ ನೀರಿನ ಕೊಯ್ಲು

ಮಣಿಪಾಲ, ಜು.18: ಈ ಬೇಸಿಗೆಯಲ್ಲಿ ಕರಾವಳಿ ಭಾಗದಲ್ಲಿ ಕುಡಿಯುವ ನೀರಿಗಾಗಿ ಕಾಣಿಸಿಕೊಂಡ ಹಾಹಾಕಾರದ ಹಿನ್ನೆಲೆಯಲ್ಲಿ ಜಿಲ್ಲೆಯ ಜನತೆಗೆ ನೀರಿನ ಮಹತ್ವದ ಅರಿವು ಆಗುತಿದ್ದು, ಈಗ ಕೆಲವರಾದರೂ ನೀರಿನ ಮಿತವ್ಯಯ, ನೀರಿನ ಸಂಗ್ರಹದ ಕುರಿತು ಪ್ರಾಮಾಣಿಕ ಪ್ರಯತ್ನಕ್ಕೆ ಮುಂದಾಗಿ ರುವ ಕುರಿತು ವರದಿಗಳು ಬರುತ್ತಿವೆ.

ಇದೀಗ ಮಣಿಪಾಲದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಇಂಥ ಒಂದು ಪ್ರಯತ್ನಕ್ಕೆ ತೊಡಗಿಸಿಕೊಂಡಿದ್ದು, ಮಣಿಪಾಲದ ತನ್ನ ಎರಡು ಎಕರೆ ಪ್ರದೇಶದಲ್ಲಿ ಮಳೆ ನೀರಿನ ಕೊಯ್ಲು ಮೂಲಕ ನೀರಿನ ಸಂಗ್ರಹಕ್ಕೆ ಮುಂದಾಗಿದೆ.

ಮಾಹೆಯ ಯೋಜನಾ ತಂಡ ಮಣಿಪಾಲದ ಎಂಡ್‌ಪಾಯಿಂಟ್‌ನಲ್ಲಿರುವ ಎರಡು ಎಕರೆ ಜಾಗದಲ್ಲಿ ಮಳೆ ನೀರಿನ ಸಂಗ್ರಹಕ್ಕೆ ಸಜ್ಜಾಗಿದ್ದು, ಇದೀಗ ಇಲ್ಲಿ ನೀರು ದೊ್ಡ ಪ್ರಮಾಣದಲ್ಲಿ ಸಂಗ್ರಹಗೊಂಡಿದೆ.

ಮಾಹೆಯ ಯೋಜನೆಯ ಉಪನಿರ್ದೇಶಕ ಐವನ್ ಡಿಸೋಜ ಅವರು ಈ ಕುರಿತು ವಿವರಗಳನ್ನು ನೀಡಿ, ಮಾಹೆಗೆ ಸೇರಿದ ಎರಡು ಎಕರೆ ಜಾಗದಲ್ಲಿ ಗುಂಡಿ ತೋಡಿ ಸುಮಾರು ಎಂಟು ಮಿಲಿಯನ್ ಲೀಟರ್ ನೀರನ್ನು ಸಂಗ್ರಹಿಸಲಾಗುತ್ತಿದೆ. ಇದರಿಂದ ಮಣಿಪಾಲ ಕ್ಯಾಂಪಸ್ ಒಳಗಿರುವ ಎಲ್ಲಾ ಬೋರ್‌ವೆಲ್‌ಗಳಲ್ಲಿ ನೀರಿನ ಮಟ್ಟ ಏರುವ ನಿರೀಕ್ಷೆ ಇದೆ ಎಂದರು.

ಎರಡು ಎಕರೆ ಜಾಗದಲ್ಲಿ ಒಂಟು ಅಡಿ ಹಾಗೂ ಹತ್ತು ಅಡಿ ಗುಂಡಿಗಳನ್ನು ತೊಡಲಾಗಿದೆ. ಇಲ್ಲೀಗ ಕಳೆದೊಂದು ವಾರದಿಂದ ಸುರಿದ ಮಳೆಯಿಂದ ಭಾರೀ ನೀರು ಸಂಗ್ರಹವಾಗಿದೆ. ಈ ನೀರಿನ ಇಂಗು ಗುಂಡಿಗೆ ನಾವು ‘ಮಿನಿ ಪಳ್ಳ’ (ಮಣಿಪಾಲದಲ್ಲಿ ಮಣ್ಣಪಳ್ಳ ಕೆರೆಯಂತೆ) ಎಂದು ಹೆಸರಿಟ್ಟಿದ್ದೇವೆ ಎಂದರು.

ಈ ನೀರಿನ ಹೊಂಡದ ಸುತ್ತ ಯಾರೂ ಬಾರದಂತೆ ಸುರಕ್ಷತಾ ಕ್ರಮವಾಗಿ ಮುಂಜಾಗ್ರತೆಗೆ ಕೆರೆಯ ಸುತ್ತಲೂ ಬೇಲಿಯನ್ನು ನಿರ್ಮಿಸಿದ್ದೇವೆ. ಮಾಹೆ ಕ್ಯಾಂಪಸ್ ಒಳಗೆ ಇದೇ ರೀತಿಯ ಇನ್ನೂ ಎರಡು ಇಂಗು ಗುಂಡಿಗಳನ್ನು ನಿರ್ಮಿಸುವ ಯೋಜನೆಯನ್ನು ಹಾಕಿಕೊಂಡಿದ್ದೇವೆ ಎಂದು ಡಿಸೋಜ ತಿಳಿಸಿದರು.

ಇಲ್ಲಿ ಮಳೆ ನೀರಿನ ಕೊಯ್ಲು, ಸಂಗ್ರಹ ಹಾಗೂ ಪುನರ್‌ಬಳಕೆಯನ್ನು ವೈಜ್ಞಾನಿಕ ರೀತಿಯಲ್ಲಿ ಮಾಡಲಾಗುತ್ತದೆ. ವಿವಿಯು ಮಳೆ ನೀರಿನ ಕೊಯ್ಲು ಹಾಗೂ ಭೂಮಿಯ ಜಲಮೂಲವನ್ನು ವೃದ್ಧಿಸಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದೂ ಐವನ್ ಡಿಸೋಜ ನುಡಿದರು.

ಎಲ್ಲಾ ಕಟ್ಟಡಗಳ ಮಾಡುಗಳಿಂದ ನೀರನ್ನು ಸಂಗ್ರಹಿಸಲು ಈಗಾಗಲೇ ಸ್ಟೇಶನ್‌ಗಳನ್ನು ನಿರ್ಮಿಸಲಾಗಿದೆ. ಇಲ್ಲಿಂದ ನೀರನ್ನು ಮರಳಿನ ಮೂಲಕ ಹಾಯಿಸಿ ಸೋಸಿ ಶುದ್ಧಗೊಳಿಸಲಾಗುತ್ತದೆ. ಈ ನೀರನ್ನು ನೆಲದೊಳಗಿನ ಸಂಪ್ಸ್‌ಗಳಲ್ಲಿ ಸಂಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಮಾಹೆ ಸಿಬ್ಬಂದಿಗಳ ಅಗತ್ಯದ ಉಪಯೋಗಕ್ಕೆ ಬಳಸಲಾಗುತ್ತಿದೆ ಎಂದು ಅವರು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X