ಶಾಸಕ ಶ್ರೀನಿವಾಸಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ: ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್
![ಶಾಸಕ ಶ್ರೀನಿವಾಸಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ: ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಶಾಸಕ ಶ್ರೀನಿವಾಸಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ: ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್](https://www.varthabharati.in/sites/default/files/images/articles/2019/07/20/201405-1563638874.jpg)
ಶ್ರೀನಿವಾಸಗೌಡ-ಎಸ್.ಆರ್.ವಿಶ್ವನಾಥ್
ಬೆಂಗಳೂರು, ಜು.20: ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ ಗೌಡ ವಿರುದ್ಧ ಒಂದು ರೂ.ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರುವಂತೆ ಶ್ರೀನಿವಾಸಗೌಡಗೆ ಹಣದ ಆಮಿಷವೊಡ್ಡಿರುವುದಾಗಿ ಅವರು ಸದನದಲ್ಲಿ ನನ್ನ ವಿರುದ್ಧ ಆರೋಪ ಮಾಡಿದ್ದಾರೆ. ನಾನು ದುಡ್ಡು ಕೊಟ್ಟಿರುವುದಕ್ಕೆ ಅವರು ದಾಖಲೆ ನೀಡಲಿ ಎಂದು ಆಗ್ರಹಿಸಿದರು.
ಸದನದ ಕಲಾಪವನ್ನು ಅಡ್ಡದಾರಿಗೆ ಎಳೆಯಲು ಆಡಳಿತ ಪಕ್ಷದವರು ಮುಂದಾಗಿದ್ದಾರೆ. ಕಲಾಪವನ್ನು ಮುಂದಕ್ಕೆ ಹಾಕಲು ಇಲ್ಲಸಲ್ಲದ ಆರೋಪಗಳನ್ನು ಮಾಡುವ ಯೋಜನೆಗಳನ್ನು ಮಾಡಿಕೊಂಡಿದ್ದಾರೆ ಎಂದು ವಿಶ್ವನಾಥ್ ಆರೋಪಿಸಿದರು.
ಸೋಮವಾರ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ಸಭಾಧ್ಯಕ್ಷರು ರೂಲಿಂಗ್ ಕೊಟ್ಟಿದ್ದಾರೆ. ಅವರು ರೂಲಿಂಗ್ ತಪ್ಪುವುದಿಲ್ಲ ಎಂಬ ವಿಶ್ವಾಸವಿದೆ ಎಂದು ವಿಶ್ವನಾಥ್ ಹೇಳಿದರು.
Next Story