Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಎಂಟಿಸಿಗೆ ಇನ್ನೂ ಬಾರದ...

ಬಿಎಂಟಿಸಿಗೆ ಇನ್ನೂ ಬಾರದ ಸ್ಮಾರ್ಟ್‌ಕಾರ್ಡ್ ದೃಢೀಕರಣ ಯಂತ್ರ

ವಾರ್ತಾಭಾರತಿವಾರ್ತಾಭಾರತಿ21 July 2019 9:57 PM IST
share
ಬಿಎಂಟಿಸಿಗೆ ಇನ್ನೂ ಬಾರದ ಸ್ಮಾರ್ಟ್‌ಕಾರ್ಡ್ ದೃಢೀಕರಣ ಯಂತ್ರ

ಬೆಂಗಳೂರು, ಜು.21: ವಿದ್ಯಾರ್ಥಿಗಳಿಗೆ ನೀಡಿರುವ ರಿಯಾಯ್ತಿ ಪಾಸುಗಳನ್ನು ‘ಸ್ಮಾರ್ಟ್ ಕಾರ್ಡ್’ ಪರಿಚಯಿಸುವ ಮೂಲಕ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಹೈಟೆಕ್ ಮಾಡಿದ್ದು, ವರ್ಷ ಕಳೆದರೂ ಅವುಗಳನ್ನು ದೃಢೀಕರಿಸುವ ವ್ಯವಸ್ಥೆ ಮಾಡುವುದನ್ನು ಮರೆತಿದೆ. ಇದರಿಂದ ಕಾರ್ಡ್‌ಗಳ ದುರ್ಬಳಕೆ ಆಗುತ್ತಿರುವ ಗುಮಾನಿ ಮೂಡಿದೆ.

ಸ್ಮಾರ್ಟ್ ಕಾರ್ಡ್‌ಗಳಲ್ಲಿ ಚಿಪ್ ಅಳವಡಿಸಲಾಗಿದೆ. ಅದರಲ್ಲಿ ವಿದ್ಯಾರ್ಥಿಗಳ ತರಗತಿ, ಪಾಸು ವಿತರಣೆಯಾದ ದಿನ ಮತ್ತು ಪೂರ್ಣಗೊಳ್ಳುವ ದಿನಾಂಕ, ಸಂಚರಿಸುವ ಮಾರ್ಗದ ವಿವರವೆಲ್ಲವೂ ಇರುತ್ತದೆ. ಆದರೆ, ಆ ಚಿಪ್ ಅನ್ನು ರೀಡ್ ಮಾಡುವ ಯಂತ್ರಗಳೇ ಇಲ್ಲ. ಇದರಿಂದ ವಿದ್ಯಾರ್ಥಿಗಳು ಎಲ್ಲೆಂದರಲ್ಲಿ ರಾಜಾರೋಷವಾಗಿ ಓಡಾಡಬಹುದು. ಅಷ್ಟೇ ಅಲ್ಲ, ನಕಲಿ ಕಾರ್ಡ್‌ಗಳ ಹಾವಳಿ ಕೂಡ ಹೆಚ್ಚಾಗುತ್ತಿದೆ. ಇದು ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ಸಂಸ್ಥೆಗೆ ಮತ್ತಷ್ಟು ಹೊರೆಯಾಗಿ ಪರಿಣಮಿಸುತ್ತಿದೆ.

ವಿದ್ಯಾರ್ಥಿಗಳ ಬಳಿ ಸ್ಮಾರ್ಟ್ ಕಾರ್ಡ್ ಇರುತ್ತದೆ. ಆದರೆ, ಅದು ಅಸಲಿಯೋ ಅಥವಾ ನಕಲಿಯೋ ಎಂಬುದನ್ನು ತಿಳಿಯುವ ಸೌಲಭ್ಯ ನಿರ್ವಾಹಕರ ಬಳಿ ಇಲ್ಲ. ಇದಲ್ಲದೆ, ಅದನ್ನು ಬಳಕೆ ಮಾಡುವ ವಿದ್ಯಾರ್ಥಿಗಳು ನಿಗದಿಪಡಿಸಿದ ಮಾರ್ಗದಲ್ಲೇ ಸಂಚರಿಸುತ್ತಿದ್ದಾರೆಯೋ ಅಥವಾ ನಿಯಮ ಉಲ್ಲಂಘಸಿ ಅನ್ಯಮಾರ್ಗಗಳಲ್ಲಿ ಓಡಾಡುತ್ತಿದ್ದಾರೆಯೋ ಎಂಬುದು ಕೂಡ ಗೊತ್ತಾಗುವುದಿಲ್ಲ. ಸ್ವತಃ ಟಿಕೆಟ್ ಚೆಕಿಂಗ್ ಇನ್‌ಸ್ಪೆಕ್ಟರ್‌ಗೂ ಇದು ಗೊತ್ತಾಗುವುದಿಲ್ಲ. ಹೆಚ್ಚು-ಕಡಿಮೆ ಕಳೆದ ಒಂದು ವರ್ಷದಿಂದ ನಿರಂತರವಾಗಿ ಇದು ಮುಂದುವರಿದಿದ್ದು, ನಿಗಮಕ್ಕೆ ಲಕ್ಷಾಂತರ ರೂ. ನಷ್ಟ ಆಗುತ್ತಿದೆ.

ವರ್ಷಕ್ಕೆ ಮೂರೂವರೆಯಿಂದ ನಾಲ್ಕು ಲಕ್ಷ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಈ ಪೈಕಿ ಈಗಾಗಲೇ 2.32 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, 1.25 ಲಕ್ಷ ವಿದ್ಯಾರ್ಥಿಗಳಿಗೆ ಕಾರ್ಡ್‌ಗಳ ವಿತರಣೆ ಆಗಿದೆ. ಒಂದು ವಿದ್ಯಾರ್ಥಿ ಪಾಸಿನಿಂದ ವಾರ್ಷಿಕ ಸರಾಸರಿ 10,833 ರೂ. ಖರ್ಚಾಗುತ್ತದೆ ಎಂದು ಅಂದಾಜಿಸಲಾಗಿದೆ (ಹತ್ತು ತಿಂಗಳಿಗೆ). ಅಂದರೆ ದಿನಕ್ಕೆ ಒಬ್ಬ ವಿದ್ಯಾರ್ಥಿಗೆ 36.11 ರೂ. ಆಗುತ್ತದೆ. ನಾಲ್ಕು ಲಕ್ಷ ವಿದ್ಯಾರ್ಥಿಗಳಿಗೆ ಈ ಮೊತ್ತ 1.44 ಕೋಟಿ ರೂ. ಆಗುತ್ತದೆ. ಇದರಲ್ಲಿ ಶೇ.25ರಷ್ಟು ದುರ್ಬಳಕೆಯಾದರೂ ಲಕ್ಷಾಂತರ ರೂ. ಆಗುತ್ತದೆ ಎಂದು ಬಿಎಂಟಿಸಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇನ್ನು ಬಿಎಂಟಿಸಿಯಲ್ಲಿ ಕಾರ್ಯಾಚರಣೆ ಮಾಡುತ್ತಿರುವ ಬಸ್‌ಗಳ ಸಂಖ್ಯೆ ಸುಮಾರು ಆರು ಸಾವಿರ ಇದ್ದು, ಶೇ.30ರಷ್ಟು ಬಸ್‌ಗಳಲ್ಲಿ ಎಲೆಕ್ಟ್ರಾನಿಕ್ ಟಿಕೆಟ್ ಮಷಿನ್ (ಇಟಿಎಂ)ಗಳಿಲ್ಲ. ಇದ್ದರೂ ಅವುಗಳಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಗಿರುವ ಸ್ಮಾರ್ಟ್ ಕಾರ್ಡ್‌ನಲ್ಲಿಯ ಚಿಪ್‌ಗಳನ್ನು ಮೌಲ್ಯಮಾಪನ ಮಾಡಿ, ವಿಶ್ಲೇಷಿಸುವ ಸೌಲಭ್ಯ ಇಲ್ಲ. ಈ ಹಿನ್ನೆಲೆಯಲ್ಲಿ ಚಿಪ್ ರೀಡ್ ಮಾಡುವಂತಹ ಅಪ್ಲಿಕೇಷನ್ ಅಭಿವೃದ್ಧಿಪಡಿಸುವ ಕೆಲಸ ಬಹುತೇಕ ಪೂರ್ಣಗೊಂಡಿದ್ದು, ಪ್ರಾಯೋಗಿಕವಾಗಿ ಇದನ್ನು ಅಳವಡಿಸುವ ಕೆಲಸ ಬಾಕಿ ಇದೆ. ಅಂದರೆ, ಇನ್ನೂ ಎರಡು-ಮೂರು ತಿಂಗಳು ಈ ನಷ್ಟದ ಬಾಬ್ತು ತಪ್ಪಿದ್ದಲ್ಲ.

ನಕಲಿ ಹಾವಳಿ ಎಲ್ಲಿ?: ಹೊಸ ಸ್ಮಾರ್ಟ್ ಕಾರ್ಡ್‌ಗಳಿಗೆ 200 ರೂ. ಸೇವಾ ಶುಲ್ಕ ಪಡೆಯಲಾಗುತ್ತಿದೆ. ಇದರೊಂದಿಗೆ ಪಾಸಿನ ಶುಲ್ಕ ಕೂಡ ಆಯಾ ತರಗತಿಗೆ ತಕ್ಕಂತೆ ಇರುತ್ತದೆ. ಆದರೆ, ದಾಸರಹಳ್ಳಿ, ಯಶವಂತಪುರ, ಪೀಣ್ಯ ಮತ್ತಿತರ ಕಡೆಗಳಲ್ಲಿರುವ ಸೈಬರ್ ಸೆಂಟರ್‌ನಂತಹ ಮಳಿಗೆಗಳಲ್ಲಿ ಈ ನಕಲಿ ಕಾರ್ಡ್‌ಗಳ ಹಾವಳಿ ಕಂಡುಬರುತ್ತಿದೆ. ಕೇವಲ 80-100 ರೂ.ಗಳಿಗೆ ಲಭ್ಯವಾಗುತ್ತಿವೆ ಎಂಬ ದೂರುಗಳು ಬಿಎಂಟಿಸಿ ಘಟಕಗಳಿಗೆ ಬರುತ್ತಿವೆ.

ಸ್ಮಾರ್ಟ್ ಕಾರ್ಡ್‌ಗಳಲ್ಲಿರುವ ಚಿಪ್ ರೀಡ್ ಮಾಡುವ ಅಪ್ಲಿಕೇಷನ್ ಅಭಿವೃದ್ಧಿಪಡಿಸಲಾಗಿದ್ದು, ಒಂದೆರಡು ತಿಂಗಳಲ್ಲಿ ಇಟಿಎಂಗಳು ಮತ್ತು ಅವುಗಳಲ್ಲಿ ಈ ನೂತನ ಅಪ್ಲಿಕೇಷನ್‌ಗಳ ವ್ಯವಸ್ಥೆ ಬರಲಿದೆ.

- ಎನ್.ವಿ.ಪ್ರಸಾದ್, ಬಿಎಂಟಿಸಿ ಎಂ.ಡಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X