Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಅನಧಿಕೃತ ಚಿಕಿತ್ಸಾಲಯಗಳ...

ಶಿವಮೊಗ್ಗ: ಅನಧಿಕೃತ ಚಿಕಿತ್ಸಾಲಯಗಳ ವೈದ್ಯರಿಗೆ ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ21 July 2019 10:12 PM IST
share
ಶಿವಮೊಗ್ಗ: ಅನಧಿಕೃತ ಚಿಕಿತ್ಸಾಲಯಗಳ ವೈದ್ಯರಿಗೆ ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ

ಶಿವಮೊಗ್ಗ, ಜು. 20: ಜಿಲ್ಲೆಯಲ್ಲಿ ನಕಲಿ ವೈದ್ಯ ವಿಧಾನವನ್ನು ಅನುಸರಿಸಿ ಚಿಕಿತ್ಸೆ ನೀಡುತ್ತಿರುವ ಅಪಾಯಕಾರಿ ವೈದ್ಯರ ಕುರಿತು ಸಾಕಷ್ಟು ದೂರುಗಳು ಬರುತ್ತಿದ್ದು, ಜಿಲ್ಲಾಡಳಿತ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು ಹೇಳಿದರು.

ಡಿಸಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಕೆ.ಪಿ.ಎಂ.ಇ. ಕೇಂದ್ರ ಸ್ಥಾನದ ಪರಿವೀಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಹಿಂದೆ ಜಿಲ್ಲೆಯಲ್ಲಿ ಗುರುತಿಸಲಾದ 74 ಅನಧಿಕೃತ ಚಿಕಿತ್ಸಾಲಯಗಳ ಮುಖ್ಯಸ್ಥರಿಗೆ ತಿಳುವಳಿಕೆ ನೀಡಲಾಗಿದೆ. ಅವುಗಳಲ್ಲಿ 7 ಘಟಕಗಳ ಮುಖ್ಯಸ್ಥರು ಕೇಂದ್ರವನ್ನು ಸ್ಥಗಿತಗೊಳಿಸಿರುವುದಾಗಿ ಲಿಖಿತ ಮಾಹಿತಿ ನೀಡಿದ್ದಾರೆ. 16 ಘಟಕಗಳಿಗೆ ಬೀಗಮುದ್ರೆ ಹಾಕಲು ಆದೇಶಿಸಲಾಗಿದೆ. ಅಲ್ಲದೇ 28 ಪ್ರಕರಣಗಳು ನ್ಯಾಯಾಲಯದ ವಿಚಾರಣೆ ಹಂತದಲ್ಲಿವೆ ಎಂದವರು ತಿಳಿಸಿದರು.

ಅನಧಿಕೃತ ಚಿಕಿತ್ಸಾಲಯಗಳ ವೈದ್ಯರು ತಾವು ಸೇವೆ ಸಲ್ಲಿಸುತ್ತಿರುವ ಆರೋಗ್ಯ ಘಟಕಗಳು ಹಾಗೂ ಲ್ಯಾಬೋರೇಟರಿಗಳನ್ನು ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ಮಾಹಿತಿಗಳನ್ನು ನೀಡಿ ನೋಂದಾಯಿಸಿಕೊಳ್ಳಬೇಕು. ತಪ್ಪಿದಲ್ಲಿ ಅಂತಹ ಘಟಕಗಳನ್ನು ಅನಧಿಕೃತ ಘಟಕವೆಂದು ಪರಿಗಣಿಸಿ, ಕಾನೂನು ಕ್ರಮ ಜರುಗಿಸುವುದು ಅನಿವಾರ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೇ ಜಿಲ್ಲೆಯಾದ್ಯಂತ ಪರವಾನಿಗೆ ಪಡೆಯದೇ ಅನಧಿಕೃತವಾಗಿ ಆಸ್ಪತ್ರೆಗಳನ್ನು ನಡೆಸುತ್ತಿರುವ ಚಿಕಿತ್ಸಾಲಯಗಳ ಮುಖ್ಯಸ್ಥರು ತಮ್ಮ ಘಟಕಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಖುದ್ಧಾಗಿ ನೋಟೀಸ್ ನೀಡುವಂತೆ ಹಾಗೂ ಪತ್ರಿಕೆಗಳ ಮೂಲಕ ನೋಟೀಸನ್ನು ಜಾರಿಗೊಳಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.

ಔಷಧೀಯ ಸಸ್ಯಗಳನ್ನು ಬಳಸಿ ಸಾಮಾನ್ಯ ಸ್ವರೂಪದ ಕಾಯಿಲೆಗಳಿಗೆ  ಔಷಧ ನೀಡುತ್ತಿರುವ ಪಾರಂಪರಿಕ ವೈದ್ಯರ ವಿರುದ್ಧ ಕೈಗೊಳ್ಳಬಹುದಾದ ಕ್ರಮಗಳ ಕುರಿತು ತಜ್ಞ ವೈದ್ಯರು ಹಾಗೂ ಕಾನೂನು ಸಲಹೆಗಾರರೊಂದಿಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಿದ ಜಿಲ್ಲಾಧಿಕಾರಿಗಳು ಈ ಸಂಬಂಧ ಸೂಕ್ತ ನಿರ್ದೇಶನ ನೀಡುವಂತೆ ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರಿಗೆ ಪತ್ರ ವ್ಯವಹಾರ ನಡೆಸಲು ಜಿಲ್ಲಾಧಿಕಾರಿಗಳು ಸೂಚಿಸಿದರು. 

ಎಲೆಕ್ಟ್ರೋ ಹೋಮಿಯೋಪತಿ ವಿದ್ಯಾರ್ಹತೆ ಹೊಂದಿದ 8 ಮಂದಿ ಚಿಕಿತ್ಸಾಲಯಗಳನ್ನು ಆರಂಭಿಸಲು ನಿಯಮಾನುಸಾರ ಇಲಾಖೆಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಇಲಾಖೆಯ ನಿಯಮಗಳಡಿಯಲ್ಲಿ ಎಲೆಕ್ಟ್ರೋ ಹೋಮಿಯೋಪತಿ ಪ್ರಮಾಣಪತ್ರ ಹೊಂದಿದ ಅಭ್ಯರ್ಥಿಗಳಿಗೆ ಅನುಮತಿ ನೀಡಲು ಅವಕಾಶವಿಲ್ಲ. ಆದುದರಿಂದ ಸಂಬಂಧಿಸಿದ ಇಲಾಖೆಯ ಆಯುಕ್ತರಿಂದ ಮಾರ್ಗದರ್ಶನ ಪಡೆದು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸಲಹೆ ನೀಡದರು.

ಸಭೆಯಲ್ಲಿ ಅನುಮತಿ ಪಡೆಯದೇ ಆರೋಗ್ಯ ಘಟಕಗಳನ್ನು ನಿರ್ವಹಿಸುತ್ತಿರುವವರ, ರೋಗಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ವೈದ್ಯರ ವಿರುದ್ಧ ಬಂದ ದೂರುಗಳು ಹಾಗೂ ಸೇವಾನಿರತ ವೈದ್ಯರ ಮೇಲಿನ ಹಲ್ಲೆಯ ಪ್ರಕರಣಗಳ ಕುರಿತು ವಿಸ್ತೃತ ಚರ್ಚೆ ನಡೆಸಿದ ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಈ ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್‍ಸುರಗೀಹಳ್ಳಿ, ಡಾ.ಪೈ ಕಾನೂನು ಸಲಹೆಗಾರ ವೆಂಕಟೇಶರಾವ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X