Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯದ ಅತಿದೊಡ್ಡ ಗ್ರಾಪಂ ಆಗಿದ್ದ...

ರಾಜ್ಯದ ಅತಿದೊಡ್ಡ ಗ್ರಾಪಂ ಆಗಿದ್ದ ಸೋಮೇಶ್ವರ ಇನ್ನು ಪುರಸಭೆ

ವಾರ್ತಾಭಾರತಿವಾರ್ತಾಭಾರತಿ21 July 2019 10:33 PM IST
share

ಮಂಗಳೂರು, ಜು.21: ರಾಜ್ಯದ ಅತಿದೊಡ್ಡ ಗ್ರಾಪಂ ಆಗಿದ್ದ ಸೋಮೇಶ್ವರವನ್ನು ಪುರಸಭೆಯೆಂದು ಅಧಿಕೃತವಾಗಿ ಘೋಷಿಸಿದ ಸರಕಾರ ಪ್ರಭಾರ ಆಡಳಿತಾಧಿಕಾರಿಯನ್ನು ನೇಮಕ ಮಾಡಿದೆ. ಇದರೊಂದಿಗೆ ವಿಸ್ತೀರ್ಣದಲ್ಲೇ ರಾಜ್ಯದ ಅತಿದೊಡ್ಡ ಗ್ರಾಪಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು.

ಈ ಹಿಂದೆ ರಾಜ್ಯದ ಅತಿದೊಡ್ಡ ಗ್ರಾಪಂ ಆಗಿದ್ದ ಸೋಮೇಶ್ವರ ಕಳೆದ ಗ್ರಾಪಂ ಚುನಾವಣೆ ಸಂದರ್ಭ ಸದಸ್ಯರ ಸಂಖ್ಯೆ 65ಕ್ಕೇರಿತ್ತು. ಅದಕ್ಕೂ ಮೊದಲು 51 ಮಂದಿಯ ಸದಸ್ಯ ಬಲವಿತ್ತು. ಮಂಗಳೂರಿನಿಂದ 20 ಕಿ.ಮೀ., ದೇರಳಕಟ್ಟೆಯಿಂದ 6 ಕಿ.ಮೀ., ತಲಪಾಡಿಯಿಂದ 5 ಕಿ.ಮೀ. ಅಂತರದಲ್ಲಿ ಸೋಮೇಶ್ವರ ಗ್ರಾಪಂ ಇತ್ತು. ಗ್ರಾಮ ವ್ಯಾಪ್ತಿಯ ಉಚ್ಚಿಲದಲ್ಲಿರುವ ವಿಷ್ಣುಮೂರ್ತಿ ದೇವಸ್ಥಾನಕ್ಕೆ 500 ವರ್ಷದ ಇತಿಹಾಸ ಹಾಗೂ ಇಲ್ಲಿನ ಮಸೀದಿಗೆ 100 ವರ್ಷದ ಇತಿಹಾಸವಿದೆ.

2,063 ಚ. ವಿಸ್ತೀರ್ಣವಿರುದ ಈ ಗ್ರಾಮದಲ್ಲಿ 7,158 ಸಣ್ಣ-ಪುಟ್ಟ ಕಟ್ಟಡಗಳು, 7 ಸರಕಾರಿ, 5 ಖಾಸಗಿ ಶಾಲೆಗಳು, ಒಂದು ದಫನ ಭೂಮಿ, 3,150 ದಾರಿದೀಪಗಳು, 6 ಕಾಲುಸಂಕ, 13 ಬಸ್ಸು ತಂಗುದಾಣ, 2 ಅಂಚೆ ಕಚೇರಿ, 3 ಆರೋಗ್ಯ ಘಟಕಗಳು, 3 ದೇವಸ್ಥಾನಗಳು, 4 ಮಸೀದಿಗಳು, 2 ನ್ಯಾಯ ಬೆಲೆ ಅಂಗಡಿಗಳು, 7 ಪಂಚಾಯತ್ ಅಂಗಡಿ ಕಟ್ಟಡಗಳು, 10 ಯುವಕ ಸಂಘಗಳು, 7 ಸರಕಾರಿ ತೆರೆದ ಬಾವಿಗಳು, 27 ಕೊಳವೆ ಬಾವಿಗಳು, 21 ಕಿರು ನೀರಾವರಿ ಯೋಜನೆಗಳು, 14 ಅಂಗನವಾಡಿ ಕೇಂದ್ರಗಳಲ್ಲದೆ ವಾಣಿಜ್ಯ, ಸೇವಾ ಸಹಕಾರಿ ಬ್ಯಾಂಕ್‌ಗಳು ಇವೆ.

ರಾಜ್ಯದ ಅತಿದೊಡ್ಡ ಗ್ರಾಪಂನ್ನು ಮೇಲ್ದರ್ಜೆಗೇರಿಸಬೇಕು ಎಂದು ಗ್ರಾಮಸ್ಥರು ಅನೇಕ ವರ್ಷದಿಂದ ಬೇಡಿಕೆ ಸಲ್ಲಿಸುತ್ತಲೇ ಬಂದಿದ್ದರು. ಚುನಾವಣೆಯನ್ನೂ ಬಹಿಷ್ಕರಿಸಿದ್ದರು. ವರ್ಷದ ಹಿಂದೆಯೇ ಸರಕಾರದಿಂದ ಮನ್ನಣೆ ಸಿಕ್ಕಿತ್ತು. ಆದರೂ ಇದುವರೆಗೂ ಕಾರ್ಯರೂಪಕ್ಕೆ ಬಂದಿರಲಿಲ್ಲ. ಸೋಮೇಶ್ವರಕ್ಕಿಂತ ಮೊದಲೇ ಸಮೀಪದ ಕೋಟೆಕಾರ್ ಗ್ರಾಮವು ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿತ್ತು. ಇದು ಸೋಮೇಶ್ವರ ಗ್ರಾಮಸ್ಥರ ಅಸಮಾಧಾನಕ್ಕೂ ಕಾರಣವಾಗಿತ್ತು.

ಸೋಮೇಶ್ವರ ಗ್ರಾಪಂನ ಆಡಳಿತಾವಧಿ ಮುಗಿಯಲು ಐದು ತಿಂಗಳು ಮಾತ್ರ ಬಾಕಿಯುಳಿದಿದೆ. ಈಗಾಗಲೇ ಗ್ರಾಪಂ ಪುರಸಭೆಯಾಗಿ ಮೇಲ್ದರ್ಜೆಗೇರಿರುವ ಬಗ್ಗೆ ಅಧಿಕೃತ ಪತ್ರ ಗ್ರಾಪಂಗೆ ಬಂದಿದ್ದು, ಆಡಳಿತಾಧಿಕಾರಿಯಾಗಿ ಉಳ್ಳಾಲ ನಗರಸಭೆಯ ಪೌರಾಯುಕ್ತೆ ವಾಣಿ ವಿ.ಆಳ್ವ ಅವರನ್ನು ನೇಮಿಸಲಾಗಿದೆ. ಗ್ರಾಪಂ ಆಡಳಿತಾವಧಿ ಮುಗಿಯುವವರೆಗೆ ಸದಸ್ಯರು ಮುನ್ಸಿಪಲ್ ಕೌನ್ಸಿಲರ್‌ಗಳಾಗಿ ಮುಂದುವರಿಯಲಿದ್ದಾರೆ.

ಇದುವರೆಗೆ ಮಂಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸೋಮೇಶ್ವರ ಗ್ರಾಪಂ ಬಿಜೆಪಿ ಪಾಲಿಗೆ ಅತಿದೊಡ್ಡ ಶಕ್ತಿಯಾಗಿತ್ತು. ಇಲ್ಲಿ ಹಿಂದಿನಿಂದಲೂ ಆಡಳಿತ ಬಿಜೆಪಿಯ ಕೈಯಲ್ಲೇ ಇದೆ. ತಾಪಂ ಮತ್ತು ಜಿಪಂನಲ್ಲೂ ಬಿಜೆಪಿ ಸದಸ್ಯರಿದ್ದಾರೆ. ಇದೀಗ ಪುರಸಭೆಯಾಗಿ ಮೇಲ್ದರ್ಜೆಗೇರಿರುವುದರಿಂದ ಬಿಜೆಪಿ ತಾಪಂ ಮತ್ತು ಜಿಪಂ ಸದಸ್ಯರನ್ನು ಕಳೆದುಕೊಳ್ಳಲಿದೆ. ಇದು ಭವಿಷ್ಯದ ಉಳ್ಳಾಲ (ಮಂಗಳೂರು ಗ್ರಾಮಾಂತರ) ತಾಲೂಕಿನ ಚುನಾವಣೆಯ ಮೇಲೂ ಪರಿಣಾಮ ಬೀರಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X