Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಿಂದೂ ಮಹಿಳೆ ವಿರುದ್ಧ ದೇಶದ್ರೋಹದ...

ಹಿಂದೂ ಮಹಿಳೆ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲು ನಿರಾಕರಿಸಿದ ಬಾಂಗ್ಲಾ ಪ್ರಧಾನಿ ಹಸೀನಾ

ವಾರ್ತಾಭಾರತಿವಾರ್ತಾಭಾರತಿ21 July 2019 10:57 PM IST
share
ಹಿಂದೂ ಮಹಿಳೆ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲು ನಿರಾಕರಿಸಿದ ಬಾಂಗ್ಲಾ ಪ್ರಧಾನಿ ಹಸೀನಾ

 ಢಾಕಾ,ಜು.21: ತನ್ನ ದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳನ್ನು ದಮನಿಸಲಾಗುತ್ತಿದೆಯೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮುಂದೆ ದೂರಿದ ಬಾಂಗ್ಲಾದ ಹಿಂದೂ ಮಹಿಳೆಯ ವಿರುದ್ಧ ದೇಶದ್ರೋಹದ ಆರೋಪವನ್ನು ದಾಖಲಿಸುವ ಬಾಂಗ್ಲಾ ಸರಕಾರದ ಯೋಜನೆಗೆ ಅನುಮೋದನೆ ನೀಡಲು ಪ್ರಧಾನಿ ಶೇಖ್ ಹಸೀನಾ ನಿರಾಕರಿಸಿದ್ದಾರೆ.

ಬಾಂಗ್ಲಾದೇಶ್ ಹಿಂದೂ, ಬೌದ್ಧ,ಕ್ರೈಸ್ತ ಏಕತಾ ಮಂಡಳಿ (ಎಚ್‌ಬಿಸಿಯುಸಿ)ಯ ಸಂಘಟನಾ ಕಾರ್ಯದರ್ಶಿಯಾದ ಪ್ರಿಯಾ ಸಾಹಾ ಅವರು ಜುಲೈ 19ರಂದು ಅಮೆರಿಕದ ಶ್ವೇತಭವನದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು. ಟ್ರಂಪ್ ಜೊತೆಗೆ ಅವರು ನಡೆಸಿದ ಮಾತುಕತೆಯ ದೃಶ್ಯಗಳಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅವರ ತಾಯ್ನಿಡಾದ ಬಾಂಗ್ಲಾದಲ್ಲಿ ಭಾರೀ ವಿವಾದ ಸೃಷ್ಟಿಸಿದೆ.

  ವಿಡಿಯೋದಲ್ಲಿ ಆಕೆ ತನ್ನನ್ನು ಬಾಂಗ್ಲಾ ಪ್ರಜೆ ಎಂಬುದಾಗಿ ಗುರುತಿಸಿಕೊಂಡಿದ್ದಾರೆ ಹಾಗೂ ಬಾಂಗ್ಲಾದಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಸುಮಾರು 30.70 ಲಕ್ಷ ಮಂದಿ ನಾಪತ್ತೆಯಾಗಿದ್ದಾರೆಂದು ಅಮೆರಿಕ ಅಧ್ಯಕ್ಷರಿಗೆ ತಿಳಿಸಿದ್ದರು.

ಪ್ರಿಯಾ ಸಾಹಾ ಅವರ ವಿವಾದಾತ್ಮಕ ಹೇಳಿಕೆಯನ್ನು, ಬಾಂಗ್ಲಾದ ರಸ್ತೆ ಸಾರಿಗೆ ಸಚಿವ ಹಾಗೂ ಆಡಳಿತಾರೂಢ ಅವಾಮಿ ಲೀಗ್ ಪಕ್ಷದ ಪ್ರಧಾನ ಕಾರ್ಯದರ್ಶಿ ಉಬೈದುಲ್ ಖಾದರ್ ಖಂಡಿಸಿದ್ದಾರೆ. ಪ್ರಿಯಾ ಅವರು, ‘‘ ಸುಳ್ಳು ಹಾಗೂ ದುರುದ್ದೇಶದ ಮತ್ತು ದ್ರೋಹಯುತವಾದ ಹೇಳಿಕೆಗಳನ್ನು ನೀಡಿದ್ದಾರೆ’’ ಎಂಬುದಾಗಿ ಅವರು ಟೀಕಿಸಿದ್ದಾರೆ.

ಆದಾಗ್ಯೂ ಪ್ರಿಯಾ ಸಾಹಾ ಅವರ ಹೇಳಿಕೆಗಳ ಬಗ್ಗೆ ಯಾವುದೇ ವಿವರಣೆಯನ್ನು ಪಡೆಯದೆ ಆಕೆಯ ವಿರುದ್ಧ ದೇಶದ್ರೋಹದ ಆರೋಪಗಳನ್ನು ದಾಖಲಿಸಲು ಹಸೀನಾ ಅನುಮೋದನೆ ನೀಡಿಲ್ಲವೆಂದು ಖಾದರ್ ತಿಳಿಸಿದ್ದಾರೆ. ಆದರೆ ತಾನು ಟ್ರಂಪ್ ಅವರಿಗೆ ಏನನ್ನು ಹೇಳಲು ಬಯಸಿದ್ದೆ ಎಂಬ ಬಗ್ಗೆ ಪ್ರಿಯಾ ಸಾಹಾ ಅವರು ಸಾರ್ವಜನಿಕ ಹೇಳಿಕೆಯೊಂದನ್ನು ನೀಡಬೇಕೆಂದು ಖಾದರ್ ಆಗ್ರಹಿಸಿದ್ದಾರೆ.

ಖಾದರ್ ಪ್ರತಿಕ್ರಿಯೆ ನೀಡಿದ ಕೆಲವೇ ತಾಸುಗಳ ಬಳಿಕ, ಬಾಂಗ್ಲಾದ ಇಬ್ಬರು ನ್ಯಾಯಾಧೀಶರು ಪ್ರಿಯಾ ಸಾಹು ವಿರುದ್ಧ ವೈಯಕ್ತಿಕ ನೆಲೆಯಲ್ಲಿ ಢಾಕಾದ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೇಶದ್ರೋಹದ ಆರೋಪವನ್ನು ಹೊರಿಸಿ, ಮೊಕದ್ದಮೆ ಹೂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X