Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನ್ನ ಏಕೈಕ ಆಸ್ತಿಯಾಗಿದ್ದ ವಾಚನ್ನು...

ತನ್ನ ಏಕೈಕ ಆಸ್ತಿಯಾಗಿದ್ದ ವಾಚನ್ನು ಕದ್ದವರಿಗೂ ಔದಾರ್ಯ ತೋರಿದ್ದ 3 ಬಾರಿಯ ಸಂಸದ ಎ.ಕೆ.ರಾಯ್ !

ದೇಶ ಕಂಡ ಅತ್ಯಂತ ಸರಳ ರಾಜಕಾರಣಿಯ ಬಗ್ಗೆ ತಿಳಿದುಕೊಳ್ಳಿ…

ವಾರ್ತಾಭಾರತಿವಾರ್ತಾಭಾರತಿ21 July 2019 10:57 PM IST
share
ತನ್ನ ಏಕೈಕ ಆಸ್ತಿಯಾಗಿದ್ದ ವಾಚನ್ನು ಕದ್ದವರಿಗೂ ಔದಾರ್ಯ ತೋರಿದ್ದ 3 ಬಾರಿಯ ಸಂಸದ ಎ.ಕೆ.ರಾಯ್ !

ಹೊಸದಿಲ್ಲಿ, ಜು.21: ಇಂದು ನಿಧನರಾಗಿರುವ ಮೂರು ಬಾರಿಯ ಸಂಸದ ಅರುಣ್ ಕುಮಾರ್ ರಾಯ್ ಅಥವಾ ಎಕೆ ರಾಯ್ ದೇಶ ಕಂಡ ಅತ್ಯಂತ ಸರಳ ರಾಜಕಾರಣಿಗಳಲ್ಲೊಬ್ಬರು ಎಂದರೆ ತಪ್ಪಾಗಲಾರದು. ಅಧಿಕಾರ, ಸ್ಥಾನ, ಹಣದ ಹಿಂದೆ ಬಿದ್ದು ಕರ್ತವ್ಯವನ್ನು ಮರೆಯುತ್ತಿರುವ ಇಂದಿನ ರಾಜಕಾರಣಿಗಳು ಎ.ಕೆ. ರಾಯ್ ಅವರ ಜೀವನವನ್ನೊಮ್ಮೆ ಗಮನಿಸಬೇಕಿದೆ ಮತ್ತು ತಾವು ರಾಜಕಾರಣಿಗಳಾಗಿ ಹೇಗಿರಬೇಕು ಎನ್ನುವುದನ್ನು ಕಲಿಯಬೇಕಾಗಿದೆ.

1977, 1980 ಮತ್ತು 1989ರಲ್ಲಿ ಧನ್ಬದ್ ಲೋಕಸಭಾ ಕ್ಷೇತ್ರದಲ್ಲಿ ಜಯ ಗಳಿಸಿ ಮೂರು ಬಾರಿ ಜಯ ಗಳಿಸಿದ್ದರೂ ಎ.ಕೆ.ರಾಯ್ ಅವರ ಬಳಿ ಇದ್ದ ಏಕೈಕ ಆಸ್ತಿಯೆಂದರೆ ಎಚ್ ಎಂಟಿ ವಾಚ್ ಮಾತ್ರ. ಆದರೆ ನಂತರ ಅದೂ ಕೂಡ ಕಳವಾಗಿತ್ತು!.

ಧನ್ಬದ್ ನ ಸುಡಾಮ್ದಿ ಪೊಲೀಸ್ ಠಾಣೆ ವ್ಯಾಪ್ತಿಯ ನೂನ್ ದಿಹ್ ಗ್ರಾಮದಲ್ಲಿರುವ ಎ.ಕೆ. ರಾಯ್ ಮನೆಗೆ ನುಗ್ಗಿದ್ದ ಕಳ್ಳರು ಅವರು ತನ್ನ 6 ದಶಕಗಳ ರಾಜಕೀಯ ಜೀವನದಲ್ಲಿ ಉಡುಗೊರೆಯಾಗಿ ಸ್ವೀಕರಿಸಿದ್ದ ಏಕೈಕ ವಾಚ್ ಅನ್ನು ಕದ್ದೊಯ್ದರು. ಆ ಸಮಯದಲ್ಲಾಗಲೇ ರಾಯ್ ದಿವಾಳಿಯಾಗಿದ್ದರು. ಈ ಘಟನೆ 2014ರ ಜನವರಿಯಲ್ಲಿ ನಡೆದಿತ್ತು. ಇಷ್ಟೇ ಅಲ್ಲದೆ ಕಳ್ಳರು ಅವರ ಉಳಿತಾಯ 2,600 ರೂ.ಗಳನ್ನೂ ಒಯ್ದಿದ್ದರು.

ಆದರೆ ಈ ಘಟನೆಗಾಗಿ ರಾಯ್ ಕಳ್ಳರನ್ನು ದೂಷಿಸಲಿಲ್ಲ ಮಾತ್ರವಲ್ಲ, ಪೊಲೀಸ್ ದೂರು ಕೂಡ ನೀಡಲಿಲ್ಲ. ಕಳ್ಳರ ಬಗ್ಗೆ ಅವರ ಹೇಳಿದ್ದಿಷ್ಟೇ.."ನನಗಿಂತಲೂ ಅವರಿಗೆ ಅದರ ಅವಶ್ಯಕತೆ ಹೆಚ್ಚಿರಬಹುದು”.

ಅವಿವಾಹಿತರಾಗಿದ್ದ ರಾಯ್ ಪಕ್ಷದ ಕಾರ್ಯಕರ್ತರೊಬ್ಬರ ಮನೆಯಲ್ಲಿ ವಾಸವಿದ್ದರು. ಇಂದು ಭ್ರಷ್ಟಾಚಾರವು ರಾಷ್ಟ್ರೀಯ ಸಮಸ್ಯೆಯಾಗಿರುವಾಗ ರಾಯ್ ತನ್ನ ರಾಜಕೀಯ ಜೀವನದುದ್ದಕ್ಕೂ ಪ್ರಾಮಾಣಿಕರಾಗಿ ಮತ್ತು ಸರಳ ರಾಜಕಾರಣಿಯಾಗಿ ಉಳಿದರು. ಮಾಜಿ ಸಂಸದರಾಗಿ ತಮಗೆ ಸಿಗುತ್ತಿದ್ದ ಪಿಂಚಣಿಯನ್ನೂ ಪಡೆದುಕೊಳ್ಳದ ಅವರು ಆ ಎಲ್ಲಾ ಮೊತ್ತವನ್ನು ರಾಷ್ಟ್ರಪತಿ ಪರಿಹಾರ ನಿಧಿಗೆ ನೀಡಿದ್ದರು.

ಭ್ರಷ್ಟಾಚಾರ, ದುರಾಸೆ, ಅಧಿಕಾರದ ಮೋಹಗಳೇ ಮೇಳೈಸುತ್ತಿರುವ ರಾಜಕೀಯ ರಂಗದಲ್ಲಿ ಎ.ಕೆ. ರಾಯ್ ಎಂದಿಗೂ ವಿಭಿನ್ನವಾಗಿ ನಿಲ್ಲುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X