Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡುಬಿದ್ರಿ ರೋಟರಿ ಕ್ಲಬ್ ಪದಗ್ರಹಣ

ಪಡುಬಿದ್ರಿ ರೋಟರಿ ಕ್ಲಬ್ ಪದಗ್ರಹಣ

ವಾರ್ತಾಭಾರತಿವಾರ್ತಾಭಾರತಿ21 July 2019 11:31 PM IST
share
ಪಡುಬಿದ್ರಿ ರೋಟರಿ ಕ್ಲಬ್ ಪದಗ್ರಹಣ

ಪಡುಬಿದ್ರಿ: ಮಣಿಪಾಲದಲ್ಲಿ ರೋಟರಿ ಸಂಸ್ಥೆಯ ವತಿಯಿಂದ ಸ್ಕಿನ್ ಬ್ಯಾಂಕ್ ಸ್ಥಾಪನೆ ಸನ್ನಿಹಿತವಾಗಿದೆ ಎಂದು ರೋಟರಿ ಜಿಲ್ಲೆ 3182ರ ಮಾಜಿ ಜಿಲ್ಲಾ ಗವರ್ನರ್ ಅಭಿನಂದನ್ ಎ.ಶೆಟ್ಟಿ ಹೇಳಿದರು. ಪಡುಬಿದ್ರಿ ರೋಟರಿ ಕ್ಲಬ್‍ನ 2019-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಈವರೆಗೆ ಭಾರತದಲ್ಲಿ ಮುಂಬಯಿ ಮತ್ತು ಚೆನ್ನೈನಲ್ಲಿ ಮಾತ್ರ ಸ್ಕಿನ್ ಬ್ಯಾಂಕ್ ಕಾರ್ಯಾಚರಿಸುತ್ತಿತ್ತು. ಮಣಿಪಾಲದಲ್ಲಿ ಸ್ಕಿನ್ ಬ್ಯಾಂಕ್ ಸ್ಥಾಪನೆಯಿಂದ ಈ ಭಾಗದ ಸುಟ್ಟ ಗಾಯ, ಅಪಘಾತಗಳ ಸಂದರ್ಭ ಶೀಘ್ರ ಸ್ಕಿನ್ ಡ್ರಾಫ್ಟಿಂಗ್ ಸಾಧ್ಯವಿದೆ. ಇಂತಹ ಮಾನವೀಯ ಸೇವೆಗಳನ್ನು ರೋಟರಿ ಕ್ಲಬ್ ವಿಶ್ವದಾದ್ಯಂತ ನಡೆಸುತ್ತಿದೆ. ಮಾನವೀಯತೆ ಹಾಗೂ ಸೌಹಾರ್ದತೆಯಿಂದ ನಾವು ಜೀವನ ನಡೆಸುವುದರಿಂದ ಉತ್ತಮರಾಗಲು ಸಾಧ್ಯವಿದೆ ಎಂದು ಅಭಿನಂದನ್ ಎ.ಶೆಟ್ಟಿ ಹೇಳಿದರು.

ಮಾನವೀಯತೆ ಹಾಗೂ ಸೌಹಾರ್ದತೆಯಿಂದ ನಾವು ಜೀವನ ನಡೆಸುವುದರಿಂದ ಉತ್ತಮ ಮನುಷ್ಯರಾಗಿ ಬಾಳಲು ಸಾಧ್ಯವಿದೆ 
ನೂತನ ಅಧ್ಯಕ್ಷ ರಿಯಾಝ್ ಮುದರಂಗಡಿ ಮಾತನಾಡಿ, ಸರ್ವ ಸದಸ್ಯರ ಸಹಕಾರದೊಂದಿಗೆ ಮುಂದಿನ ಒಂದು ವರ್ಷ ಕಾಲ ಸಮಾಜಮುಖಿ ಸೇವೆ ನೀಡಲು ಸಿದ್ಧ. ಸಮಾಜಕ್ಕೆ ನಾವು ನೀಡುವ ಕೊಡುಗೆಯೇ ಜೀವನದ ಅಮೂಲ್ಯ ಸಂಪತ್ತು ಎಂದರು.

ದಿ.ವೈ.ಹಿರಿಯಣ್ಣ-ಮೀರಾಬಾಯಿ ದಂಪತಿಯ ಸ್ಮರಣಾರ್ಥ ಅವರು ಮಕ್ಕಳ ವತಿಯಿಂದ ಕೊಡಮಾಡಿದ ಆಸುಪಾಸಿನ ಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಸಲಾಯಿತು. ಹತ್ತನೇ ತರಗತಿಯಲ್ಲಿ ಅತೀ ಹೆಚ್ಚು ಪಲಿತಾಂಶ ಪಡೆದ ಸಾಗರ್ ವಿದ್ಯಾ ಮಂದಿರ ಶಾಲೆಗೆ ದಿ.ವೈ.ಹಿರಿಯಣ್ಣ-ಮೀರಾಬಾಯಿ ದಂಪತಿಯ ಸ್ಮರಣಾರ್ಥ ಪರ್ಯಾಯ ಫಲಕ ವಿತರಿಸಲಾಯಿತು.

ಆರ್ಥಿಕ ಹಿಂದುಳಿದ ಹೆಜಮಾಡಿಯ ಗುಲಾಬಿ ದೇವಾಡಿಗರಿಗೆ ರೋಟರಿ ಝೋನಲ್ ಲೆಫ್ಟಿನೆಂಟ್ ರಮೀಝ್ ಹುಸೈನ್ ಆರ್ಥಿಕ ಸಹಾಯಧನದ ಕೂಪನ್ ವಿತರಿಸಿದರು.

ರೋಟರಿ ಗೃಹ ಪತ್ರಿಕೆ ಸ್ಪಂದನವನ್ನು ರೋಟರಿ ಅಸಿಸ್ಟೆಂಟ್ ಗವರ್ನರ್ ವೈ.ಗಣೇಶ್ ಆಚಾರ್ಯ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ನಿರ್ಗಮನ ಅಧ್ಯಕ್ಷ ಗಣೇಶ್ ಆಚಾರ್ಯ ಸ್ವಾಗತಿಸಿದರು. ನಿರ್ಗಮನ ಕಾರ್ಯದರ್ಶಿ ಸುಧಾಕರ ಕೆ.ವರದಿ ಮಂಡಿಸಿದರು. ಬಿಎಸ್ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಸಂತೋಷ್ ಪಡುಬಿದ್ರಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X