Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತದ ಬಾಸ್ಕೆಟ್ ಬಾಲ್ ‌ನಲ್ಲಿ ಅಗ್ರ...

ಭಾರತದ ಬಾಸ್ಕೆಟ್ ಬಾಲ್ ‌ನಲ್ಲಿ ಅಗ್ರ ಕ್ರಮಾಂಕ ಪಡೆದ ಮಂಗಳೂರಿನ ಸೌಕಿನ್ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ21 July 2019 11:40 PM IST
share
ಭಾರತದ ಬಾಸ್ಕೆಟ್ ಬಾಲ್ ‌ನಲ್ಲಿ ಅಗ್ರ ಕ್ರಮಾಂಕ ಪಡೆದ ಮಂಗಳೂರಿನ ಸೌಕಿನ್ ಶೆಟ್ಟಿ

ಮಂಗಳೂರು, ಜು.21: ಮಂಗಳೂರಿನ ಸೌಕಿನ್ ಶೆಟ್ಟಿ ಇದೀಗ ಭಾರತದ ಬಾಸ್ಕೆಟ್ ಬಾಲ್ ನ ಅಗ್ರ ಕ್ರಮಾಂಕದ ಆಟಗಾರರಾಗಿ ಹೊರಹೊಮ್ಮಿದ್ದಾರೆ.

ಅಂತರ್‌ರಾಷ್ಟ್ರೀಯ ಬಾಸ್ಕೆಟ್ ಬಾಲ್  ಫೆಡರೇಷನ್ (ಫೀಬಾ) ಇದೀಗ ಪರಿಷ್ಕರಿಸಿರುವ ಕ್ರಮಾಂಕ ಪಟ್ಟಿಯಲ್ಲಿ ಸೌಕಿನ್ ಒಟ್ಟು 1,35,600 ಪಾಯಿಂಟ್ಸ್ ಗಳಿಸಿದ್ದಾರೆ. ಹೀಗಾಗಿ 23ರ ಹರೆಯದ ಇವರು ಭಾರತದ ಅಗ್ರ ಕ್ರಮಾಂಕದ ಅಟಗಾರರಾಗಿದ್ದಾರೆ. ವಿಶ್ವ ಮಟ್ಟದಲ್ಲಿ ಇವರು 1,238ನೇ ಕ್ರಮಾಂಕದಲ್ಲಿದ್ದಾರೆ.

ಇಂತಹ ಸಾಧನೆ ಮಾಡಿರುವ ಕರ್ನಾಟಕದ ಮೊದಲ ಬಾಸ್ಕೆಟ್‌ಬಾಲ್ ಅಟಗಾರ ಸೌಕಿನ್.

ಮಂಗಳೂರು ಬಾಸ್ಕೆಟ್ ಬಾಲ್

ಕ್ಲಬ್‌ನ ಪರ ಕಳೆದ ಹನ್ನೆರಡು ವರ್ಷಗಳಿಂದ ನಿರಂತರವಾಗಿ ಆಡುತ್ತಿದ್ದಾರೆ. ‘ಸೌಕಿನ್ ಅತ್ಯಂತ ಪ್ರತಿಭಾವಂತ ಆಟಗಾರ. ನಮ್ಮ ಕ್ಲಬ್ ಪರ ಒಂದು ದಶಕಕ್ಕೂ ಹೆಚ್ಚು ಕಾಲ ನೂರಾರು ಪಂದ್ಯಗಳಲ್ಲಿ ಆಡಿದ್ದಾರೆ. ಇವರ ಪ್ರತಿಭೆಯನ್ನು ಗುರುತಿಸಿ ಕಾಲಕಾಲಕ್ಕೆ ಪ್ರೋತ್ಸಾಹ ನೀಡಿದ ಭಾರತ ಬಾಸ್ಕೆಟ್ಬಾಲ್ ಫೆಡರೇಷನ್ ಅಧ್ಯಕ್ಷ ಕೆ. ಗೋವಿಂದರಾಜ್ ಅವರಿಗೆ ನಮ್ಮ ಕ್ಲಬ್ ಚಿರ ಋಣಿ ’’ಎಂದು ಮಂಗಳೂರು ಬಾಸ್ಕೆಟ್‌ಬಾಲ್ ಕ್ಲಬ್‌ನ ಮುಖ್ಯಸ್ಥ ನವೀನ್ ಶೆಟ್ಟಿ ಹೇಳಿದ್ದಾರೆ.

6 ಅಡಿ 6 ಇಂಚು ಎತ್ತರ ಮತ್ತು 99 ಕೆ.ಜಿ. ದೇಹತೂಕದ ಅಜಾನುಬಾಹು ಸೌಕಿನ್ ಕೆಲವು ಸಮಯದ ಹಿಂದೆ ಔರಂಗಾಬಾದ್‌ನಲ್ಲಿ ನಡೆದಿದ್ದ ಭಾರತ ಕಿರಿಯರ ತಂಡದ ತರಬೇತಿ ಶಿಬಿರದಲ್ಲಿಯೂ ಪಾಲ್ಗೊಂಡಿದ್ದರು.

ಇದೀಗ ಮಂಗಳೂರು ಬಾಸ್ಕೆಟ್‌ಬಾಲ್

ಕ್ಲಬ್ ತಂಡವು ರಾಜ್ಯ ‘ಎ’ ಡಿವಿಷನ್‌ನಲ್ಲಿ ಆಡುತ್ತಿದೆ. ಈ ಕ್ಲಬ್ ಇಂತಹದ್ದೊಂದು ಚಾರಿತ್ರಿಕ ಎತ್ತರಕ್ಕೆ ಏರಲು ಸೌಕಿನ್ ಸಾಮರ್ಥ್ಯದ ನೆರವು ಅಪಾರವಾಗಿದೆ. ಈಚೆಗೆ ಜನಪ್ರಿಯವಾಗಿರುವ ತ್ರಿ ಆನ್ ತ್ರಿ ಮಾದರಿ ಬಾಸ್ಕೆಟ್‌ಬಾಲ್‌ನಲ್ಲಿ ಸೌಕಿನ್ ಅಪಾರ ಪರಿಣತಿ ಗಳಿಸಿದ್ದು, ಒಂದು ತಂಡದಲ್ಲಿ ಮೂವರೇ ಆಡಲಿರುವ ಈ ಮಾದರಿಯ ಪ್ರಮುಖ ಟೂರ್ನಿಗಳಲ್ಲಿ ಇವರು ಉತ್ಕೃಷ್ಟ ಸಾಮರ್ಥ್ಯ ತೋರಿದ್ದಾರೆ. ಇದರಿಂದಾಗಿ ಅವರು ಭಾರತ ಅಗ್ರ ಆಟಗಾರನಾಗಿ ಮೂಡಿ ಬಂದಿದ್ದಾರೆ.

ಇಂಜಿನಿಯರಿಂಗ್ ಪದವೀಧರ ರಾಗಿರುವ 23ರ ಹರೆಯದ ಸೌಕಿನ್ ಇದೀಗ ಈ ಕ್ರೀಡೆಯಲ್ಲಿ ಪೂರ್ಣಾವಧಿಯಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಹಿಂದೆ ಇವರು ಕರ್ನಾಟಕದ ಹದಿನೆಂಟು ವರ್ಷದೊಳಗಿನವರ ರಾಷ್ಟ್ರೀಯ ತಂಡದಲ್ಲಿ ಗಮನ ಸೆಳೆದಿದ್ದರು. ಕಳೆದ ನ್ಯಾಷನಲ್ ಗೇಮ್ಸ್‌ನಲ್ಲಿಯೂ ಇವರು ಕರ್ನಾಟಕ ತಂಡದ ಪರ ಆಡಿದ್ದರು. ಕಳೆದ ಆವೃತ್ತಿಯ ತ್ರಿ ಆನ್ ತ್ರಿ ಪ್ರೊ ಬಾಸ್ಕೆಟ್‌ಬಾಲ್ ಭಾರತದ ಆರು ನಗರಗಳಲ್ಲಿ ನಡೆದಿತ್ತು. ಎರಡನೇ ಆವೃತ್ತಿಯ ತ್ರಿ ಆನ್ ತ್ರಿ ಪ್ರೊ ಬಾಸ್ಕೆಟ್‌ಬಾಲ್ ಟೂರ್ನಮೆಂಟ್ ಮುಂದಿನ ಆಗಸ್ಟ್ 2ರಿಂದ ಸೆಪ್ಟಂಬರ್ 29ರ ತನಕ ದೇಶದ 5 ನಗರಗಳಲ್ಲಿ ನಡೆಯಲಿದೆ. 12 ತಂಡಗಳು ಬಾಸ್ಕೆಟ್‌ಬಾಲ್ ಲೀಗ್‌ನಲ್ಲಿ ಪಾಲ್ಗೊಳ್ಳಲಿವೆ. ಎರಡು ತಿಂಗಳುಗಳಲ್ಲಿ 9 ಸುತ್ತುಗಳಲ್ಲಿ ಟೂರ್ನಮೆಂಟ್ ನಡೆಯಲಿದೆ. ಚಂಡಿಗಡ, ಅಮೃತಸರ, ಮೊಹಾಲಿ, ಜಲಂಧರ್, ಮತ್ತು ಪಟಿಯಾಲದಲ್ಲಿ ಬಾಸ್ಕೆಟ್‌ಬಾಲ್ ಲೀಗ್ ನಡೆಯಲಿದೆ. ಪಂಜಾಬ್ ಸರಕಾರವು ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡುತ್ತಿದೆ. ಈ ಲೀಗ್‌ನಲ್ಲಿ ಸೌಕಿನ್ ಶೆಟ್ಟಿ ಭಾಗವಹಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X