ಇಂದು ರಾತ್ರಿ 7 ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಲಿರುವ ಸಿಎಂ ಕುಮಾರಸ್ವಾಮಿ ?
![ಇಂದು ರಾತ್ರಿ 7 ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಲಿರುವ ಸಿಎಂ ಕುಮಾರಸ್ವಾಮಿ ? ಇಂದು ರಾತ್ರಿ 7 ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಲಿರುವ ಸಿಎಂ ಕುಮಾರಸ್ವಾಮಿ ?](https://www.varthabharati.in/sites/default/files/images/articles/2019/07/22/201696-1563808066.jpg)
ಬೆಂಗಳೂರು, ಜು.22: ಕರ್ನಾಟಕದ ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ರಾತ್ರಿ 7:00 ಗಂಟೆಗೆ ರಾಜ್ಯಪಾಲ ವಜೂಭಾಯ್ ವಾಲಾರನ್ನು ಭೇಟಿಯಾಗಲಿದ್ದಾರೆ.
ಮುಖ್ಯ ಮಂತ್ರಿ ಕುಮಾರಸ್ವಾಮಿ ರಾಜೀನಾಮೆ ನೀಡುವ ಉದ್ದೇಶಕ್ಕಾಗಿ ರಾಜ್ಯಪಾಲರನ್ನು ಭೇಟಿಯಾಗುತ್ತಾರೋ ಎನ್ನುವುದು ಸ್ಪಷ್ಟಗೊಂಡಿಲ್ಲ. ರಾಜ್ಯಪಾಲರನ್ನು ಭೇಟಿಯಾಗಲು ಸಮಯ ನಿಗದಿಯಾಗಿದೆ ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸ್ಪೀಕರ್ ರಮೇಶ್ ಕುಮಾರ್ ಅವರಲ್ಲಿ ವಿಶ್ವಾಸಮತ ಯಾಚಿಸಲು ಅನುಕೂಲವಾಗುವಂತೆ ಎರಡು ದಿನಗಳ ಕಾಲಾವಕಾಶ ಕೇಳಿದ್ದರು. ಆದರೆ ಸ್ಪೀಕರ್ ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕಾರಣದಿಂದಾಗಿ ಮುಖ್ಯ ಮಂತ್ರಿ ಅವರು ಭೇಟಿಯಾಗುವ ವಿಚಾರ ಕುತೂಹಲ ಕೆರಳಿಸಿದೆ.
Next Story