Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವರುಣನ ಆರ್ಭಟಕ್ಕೆ ತತ್ತರಿಸಿದ ಕರಾವಳಿ:...

ವರುಣನ ಆರ್ಭಟಕ್ಕೆ ತತ್ತರಿಸಿದ ಕರಾವಳಿ: ಜನಜೀವನ, ವಾಹನಗಳ ಸಂಚಾರ ಅಸ್ತವ್ಯಸ್ತ

ಪಳ್ನೀರ್‌ನಲ್ಲಿ ಮನೆಗೆ ನುಗ್ಗಿದ ಮಳೆನೀರು

ವಾರ್ತಾಭಾರತಿವಾರ್ತಾಭಾರತಿ22 July 2019 7:57 PM IST
share
ವರುಣನ ಆರ್ಭಟಕ್ಕೆ ತತ್ತರಿಸಿದ ಕರಾವಳಿ: ಜನಜೀವನ, ವಾಹನಗಳ ಸಂಚಾರ ಅಸ್ತವ್ಯಸ್ತ

ಮಂಗಳೂರು, ಜು.22: ದ.ಕ. ಜಿಲ್ಲೆಯಲ್ಲಿ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಸೋಮವಾರವೂ ಮುಂದುವರಿದಿದೆ. ಸೋಮವಾರ ದಿನವಿಡೀ ಎಡೆಬಿಡದೆ ನಿರಂತರ ಮಳೆ ಸುರಿದ ರಭಸಕ್ಕೆ ಮಂಗಳೂರಿನ ಹಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ.

ಗುಡ್ಡ ಕುಸಿತದಿಂದ ಹಲವು ಮನೆಗಳಿಗೆ ಹಾನಿಯಾಗಿದೆ. ಕೃತಕ ಪ್ರವಾಹದಿಂದ ಫಳ್ನೀರ್‌ನ ಕೆಲವು ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಂಕನಾಡಿ ಸರ್ಕಲ್‌ನಲ್ಲಿದ್ದ ಬೃಹತ್ ಆಲದಮರ ಧರಾಶಾಹಿಯಾಗಿದೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಜಿಲ್ಲೆಯಲ್ಲಿ ಜು.27ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಿದೆ. ಜಿಲ್ಲಾಡಳಿತ ವತಿಯಿಂದ ಸೂಕ್ತ ಕಟ್ಟೆಚ್ಚರ ವಹಿಸಲಾಗಿದ್ದು, ಪ್ರವಾಸಿಗರು ಹಾಗೂ ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಮನೆಗಳಿಗೆ ಹಾನಿ

ಮಂಗಳೂರು ನಗರದಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಹಲವೆಡೆ ಕೃತಕ ಪ್ರವಾಹದಿಂದ ನಾಗರಿಕರು ಬವಣೆಪಟ್ಟರು. ಕುಂಜತ್ತಬೈಲ್‌ ನಲ್ಲಿ ಮನೆಯೊಂದು ಭಾಗಶಃ ಕುಸಿದು ಬಿದ್ದಿದೆ. ಈ ವೇಳೆ ಮನೆ ಮಂದಿ ಮುನ್ನೆಚ್ಚರಿಕೆ ವಹಿಸಿದ್ದರಿಂದ ಸಂಭಾವ್ಯ ಅನಾಹುತ ತಪ್ಪಿದೆ.

ಆಂಬ್ಲಮೊಗರಿನಲ್ಲಿ ಗುಡ್ಡ ಜರಿತ ಉಂಟಾಗಿ ಗುಡ್ಡದ ಅಡಿಯಲ್ಲಿದ್ದ ಅಬ್ಬಾಸ್ ಮತ್ತು ರಜಾಕ್ ಎಂಬವರಿಗೆ ಸೇರಿದ ಮನೆಗಳು ಅಪಾಯಕ್ಕೆ ಸಿಲುಕಿವೆ. ಇಲ್ಲಿ ಇನ್ನಷ್ಟು ಗುಡ್ಡ ಕುಸಿಯುವ ಸಾಧ್ಯತೆ ಇರುವುದರಿಂದ ಸೂಕ್ತ ಮುನ್ನೆಚ್ಚರಿಕೆ ವಹಿಸಲಾಗಿದೆ. ಗುಡ್ಡ ಕುಸಿತಕ್ಕೆ ವಿದ್ಯುತ್ ಕಂಬ ವೊಂದು ಧರಾಶಾಹಿಯಾಗಿದ್ದು, ಮನೆಯವರ ಸಮಯಪ್ರಜ್ಞೆಯಿಂದ ಅಪಾಯ ತಪ್ಪಿದೆ. ಮೆಸ್ಕಾಂ ಸಿಬ್ಬಂದಿ ಕೂಡಲೇ ಸ್ಪಂದಿಸಿ ವಿದ್ಯುತ್ ಕಂಬ ಸ್ಥಳಾಂತರಕ್ಕೆ ಕ್ರಮ ಕೈಗೊಂಡಿದ್ದಾರೆ.

ಫಳ್ನೀರಲ್ಲಿ ಮನೆಗಳಿಗೆ ನೀರು: ನಗರದ ಫಳ್ನೀರ್‌ನಲ್ಲಿ ರಾಜಕಾಲುವೆ ಉಕ್ಕಿ ಹರಿದು ತಗ್ಗು ಪ್ರದೇಶದಲ್ಲಿದ್ದ ಹಲವು ಮನೆಗಳಿಗೆ ನೀರು ನುಗ್ಗಿದೆ. ಅಲ್ಲದೆ, ಅಲ್ಲಿನ ಅಪಾರ್ಟ್‌ಮೆಂಟ್ ಕೂಡ ಜಲಾವೃತವಾಗಿತ್ತು. ಕೆಸರು ನೀರು ಹರಡಿದ್ದರಿಂದ ನಾಗರಿಕರು ಬವಣೆಪಟ್ಟರು.

ಗುಡ್ಡ ಕುಸಿತ

ಬಟ್ಟಗುಡ್ಡೆಯಲ್ಲಿ ಗುಡ್ಡ ಕುಸಿತದಿಂದ ರಾ.ಹೆ. 66ರ ಕದ್ರಿ ರಸ್ತೆಯಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಒಂದು ಗಂಟೆ ಕಾಲ ಅಸ್ತವ್ಯಸ್ತಗೊಂಡಿತು. ಬಿಜೈ ಬಟ್ಟಗುಡ್ಡೆಯಿಂದ ನಂತೂರುವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸ್ಥಳಕ್ಕೆ ಕದ್ರಿ ಸಂಚಾರ ಪೊಲೀಸರು ಭೇಟಿ ನೀಡಿದರು. ಘಟನೆ ನಡೆದ ಕೆಲ ಹೊತ್ತಿನಲ್ಲೇ ಶೀಘ್ರಗತಿಯಲ್ಲಿ ತೆರವು ಕಾರ್ಯಾಚರಣೆ ನಡೆಯಿತು.

ನಗರದ ಪಿವಿಎಸ್ ಬಳಿಯ ಎಂಪೈರ್ ಮಾಲ್ ಹಿಂಭಾಗದ ರಸ್ತೆಯಲ್ಲಿ ನೀರು ಹರಿದು ಸಂಚಾರ ಅಸ್ತವ್ಯಸ್ತವಾಗಿತ್ತು. ಮಲ್ಲಿಕಟ್ಟೆ ಸಿಟಿ ಆಸ್ಪತ್ರೆ, ಅಂಬೇಡ್ಕರ್ ಸರ್ಕಲ್ ಮತ್ತಿತರ ಕಡೆ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ರಸ್ತೆಯಲ್ಲೇ ನೀರು ಹರಿದು ತೊಂದರೆಯಾಯಿತು.

ನಗರದ ವಿವಿಧ ಕಡೆಗಳಲ್ಲಿ ಚರಂಡಿ ಕಾಮಗಾರಿ ನಡೆಯುತ್ತಿದ್ದು, ಹಲವೆಡೆ ಅರ್ಧಕ್ಕೆ ಕಾಮಗಾರಿ ನಿಂತಿದ್ದರಿಂದ ಸಂಚಾರ ವ್ಯವಸ್ಥೆಗೂ, ನೀರಿನ ಸರಾಗ ಹರಿಯುವಿಕೆಗೂ ತೊಡಕಾಗಿದೆ.

ಮಳೆ ವಿವರ

ರವಿವಾರ ಬೆಳಗ್ಗಿನಿಂದ ಸೋಮವಾರ ಬೆಳಗ್ಗಿನವರೆಗೆ ದ.ಕ. ಜಿಲ್ಲೆಯಲ್ಲಿ ಸರಾಸರಿ 66.8 ಮಿ.ಮೀ. ಮಳೆಯಾಗಿದೆ. ಬಂಟ್ವಾಳದಲ್ಲಿ 66.5 ಮಿ.ಮೀ., ಬೆಳ್ತಂಗಡಿಯಲ್ಲಿ 65.2 ಮಿ.ಮೀ., ಮಂಗಳೂರಿನಲ್ಲಿ 76.1 ಮಿ.ಮೀ., ಪುತ್ತೂರಲ್ಲಿ 75 ಮಿ.ಮೀ., ಸುಳ್ಯದಲ್ಲಿ 51 ಮಿ.ಮೀ. ಮಳೆ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X