Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್‌ಟಿಐ ತಿದ್ದುಪಡಿಯನ್ನು...

ಆರ್‌ಟಿಐ ತಿದ್ದುಪಡಿಯನ್ನು ತಿರಸ್ಕರಿಸುವಂತೆ ಸಂಸದರಿಗೆ ಮಾಜಿ ಸಿಐಸಿ ಶ್ರೀಧರ್ ಆಚಾರ್ಯುಲು ಮನವಿ

“ಇದು ಕಾನೂನಿನ ಮರಣಶಾಸನ’

ವಾರ್ತಾಭಾರತಿವಾರ್ತಾಭಾರತಿ22 July 2019 8:40 PM IST
share
ಆರ್‌ಟಿಐ ತಿದ್ದುಪಡಿಯನ್ನು ತಿರಸ್ಕರಿಸುವಂತೆ ಸಂಸದರಿಗೆ ಮಾಜಿ ಸಿಐಸಿ ಶ್ರೀಧರ್ ಆಚಾರ್ಯುಲು ಮನವಿ

ಹೊಸದಿಲ್ಲಿ, ಜು.22: “ಪ್ರಸ್ತಾವಿತ ಆರ್‌ಟಿಐ ತಿದ್ದುಪಡಿಯು, ಕೇಂದ್ರೀಯ ಮಾಹಿತಿ ಆಯೋಗದ ಬೆನ್ನಿಗೆ ಹಾಕಿದ ಚೂರಿ ಮತ್ತು ಕಾನೂನಿನ ಮರಣ ಶಾಸನ” ಎಂದು ದೂರಿರುವ ಮಾಜಿ ಕೇಂದ್ರೀಯ ಮಾಹಿತಿ ಆಯುಕ್ತ ಶ್ರೀಧರ್ ಆಚಾರ್ಯುಲು, ಈ ತಿದ್ದುಪಡಿಯನ್ನು ತಿರಸ್ಕರಿಸುವಂತೆ ಸಂಸತ್ ಸದಸ್ಯರಿಗೆ ಮನವಿ ಮಾಡಿದ್ದಾರೆ.

ಹಲವು ಪ್ರತಿಷ್ಠಿತ ಪ್ರಕರಣಗಳಲ್ಲಿ ಪಾರದರ್ಶಕತೆಯ ಪರ ಆದೇಶ ನೀಡಿರುವ ಹೆಗ್ಗಳಿಕೆಯನ್ನು ಹೊಂದಿರುವ ಆಚಾರ್ಯುಲು ಅವರು, ಪ್ರಸ್ತಾವಿತ ಬದಲಾವಣೆಗಳು ಮಾಹಿತಿ ಆಯೋಗದ ಸ್ವಾಯತ್ತೆಯನ್ನು ಗಂಭೀರವಾಗಿ ನಿರ್ಲಕ್ಷಿಸುತ್ತದೆ ಎಂದು ತಿಳಿಸಿದ್ದಾರೆ. ಈ ಲೋಪದಿಂದ ಕೂಡಿದ ಕ್ರಮ ಆಯುಕ್ತರ ಬೆನ್ನುಮೂಳೆಯಿಲ್ಲದಂತೆ ಮತ್ತು ಅಧಿಕಾರ ಇಲ್ಲದಂತೆ ಮಾಡುವ ಮೂಲಕ ಅವರು ಯಾವುದೇ ಆದೇಶವನ್ನು ಹೊರಡಿಸುವಂತೆ ಮಾಡುತ್ತದೆ ಮತ್ತು ಮಾಹಿತಿ ಹಕ್ಕು ಕಾಯ್ದೆಯ ಉದ್ದೇಶಗಳನ್ನು ಜಾರಿಗೆ ತರಲು ಅವರು ವಿಫಲವಾಗುವಂತಾಗುತ್ತದೆ ಎಂದು ಖ್ಯಾತ ಕಾನೂನು ಉಪನ್ಯಾಸಕರೂ ಆಗಿರುವ ಆಚಾರ್ಯುಲು ತಿಳಿಸಿದ್ದಾರೆ.

ಸಂಸದರು ಈ ಮಸೂದೆಯನ್ನು ಅಂಗೀಕರಿಸಿದರೆ ಮಾಹಿತಿ ಆಯುಕ್ತರು ರಾಜ್ಯ ಮತ್ತು ಕೇಂದ್ರ ಸರಕಾರಗಳ ಕೈಗೊಂಬೆಗಳಾಗಬೇಕಾಗುತ್ತದೆ. ಹಾಗಾಗಿ ಲೋಕಸಭೆ ಮತ್ತು ರಾಜ್ಯಸಭೆಯ ಎಲ್ಲ ಸಂಸದರು ಇದನ್ನು ವಿರೋಧಿಸಬೇಕು ಮತ್ತು ಈ ತಿದ್ದುಪಡಿ ತಿರಸ್ಕೃತವಾಗುವಂತೆ ನೋಡಿಕೊಳ್ಳಬೇಕು ಎಂದು ನಾನವರಲ್ಲಿ ಮನವಿ ಮಾಡುತ್ತೇನೆ ಎಂದು ಮಾಜಿ ಮಾಹಿತಿ ಆಯುಕ್ತರು ತಿಳಿಸಿದ್ದಾರೆ.

ಮಾಹಿತಿ ಆಯುಕ್ತ ಸೇವಾವಧಿ ಮತ್ತು ಅಧಿಕಾರ ಸ್ಥಿತಿಯನ್ನು ಬದಲಾಯಿಸಲು ಸರಕಾರ ಬಯಸಿದೆ. ಸದ್ಯ ಮಾಹಿತಿ ಆಯುಕ್ತರು ಚುನಾವಣಾ ಆಯುಕ್ತರಷ್ಟೇ ಅಧಿಕಾರ ಮತ್ತು ವರ್ಚಸ್ಸನ್ನು ಹೊಂದಿದ್ದಾರೆ. ಪ್ರಸ್ತಾವಿತ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸಿಬ್ಬಂದಿ ಸಹಾಯಕ ಸಚಿವ ಜಿತೇಂದ್ರ ಸಿಂಗ್ ಶುಕ್ರವಾರ, ಜುಲೈ 15ರಂದು ಲೋಕಸಭೆಯಲ್ಲಿ ಮಂಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X