Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಜಾಪ್ರಭುತ್ವ ವ್ಯವಸ್ಥೆ ಅನಾಥವಾಗಿದೆ...

ಪ್ರಜಾಪ್ರಭುತ್ವ ವ್ಯವಸ್ಥೆ ಅನಾಥವಾಗಿದೆ ಎಂಬ ಚಿಂತೆ ನಮ್ಮದು: ಸ್ಪೀಕರ್ ರಮೇಶ್‌ ಕುಮಾರ್

ವಾರ್ತಾಭಾರತಿವಾರ್ತಾಭಾರತಿ22 July 2019 8:45 PM IST
share
ಪ್ರಜಾಪ್ರಭುತ್ವ ವ್ಯವಸ್ಥೆ ಅನಾಥವಾಗಿದೆ ಎಂಬ ಚಿಂತೆ ನಮ್ಮದು: ಸ್ಪೀಕರ್ ರಮೇಶ್‌ ಕುಮಾರ್

ಬೆಂಗಳೂರು, ಜು. 22: ರಾಜ್ಯದಲ್ಲಿನ ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶಾಸಕರಿಗೆ ಮತ ನೀಡಿದ ಜನತೆ ಮತ್ತು ಪ್ರಜಾಪ್ರಭುತ್ವ ಅನಾಥವಾಗಿದೆ ಎಂಬ ಚಿಂತೆ ನಮ್ಮದು ಎಂದು ಸ್ಪೀಕರ್ ರಮೇಶ್‌ ಕುಮಾರ್ ಮಾರ್ಮಿಕವಾಗಿ ನುಡಿದಿದ್ದಾರೆ.

ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಪ್ರಸ್ತಾವದ ಮೇಲಿನ ಚರ್ಚೆ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಅವರು, ರಾಜೀನಾಮೆ ನೀಡಿದ ಶಾಸಕರು ಅನರ್ಹರಲ್ಲ. ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆಯಾದವರು. ಅವರಿಗೆ ಕಲಾಪಕ್ಕೆ ಬರುವ ಎಲ್ಲ ಹಕ್ಕಿದೆ. ಹೀಗಾಗಿ ಅವರ ಹೆಸರು ಪ್ರಸ್ತಾಪಿಸುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ಈ ಮನೆಯ ಸದಸ್ಯರಲ್ಲದವರ ಹೆಸರನ್ನು ಉಲ್ಲೇಖಿಸುವಂತಿಲ್ಲ. ರಾಜೀನಾಮೆ ನೀಡಿರುವ ಶಾಸಕರ ವಿಚಾರದಲ್ಲಿ ‘ವಾಸನೆ’ ಹೊರ ಬರುತ್ತಿದೆ. ಸ್ವಾತಂತ್ರ ಬಂದ ನಂತರ ಯಾವುದೇ ಸ್ಪೀಕರ್‌ಗೆ ಇಂತಹ ಸ್ಥಿತಿ ಬಂದಿರಲಿಕ್ಕಿಲ್ಲ. ಇಂತಹ ನಡವಳಿಕೆ ಯಾರಿಗೂ ಗೌರವ ಬರುವುದಿಲ್ಲ ಎಂದು ಛಾಟಿ ಬೀಸಿದರು.

ಸಚಿವರ ವಿರುದ್ಧ ಆರೋಪ ಮಾಡುವ ವೇಳೆ ಮೊದಲೇ ಪತ್ರ ನೀಡಬೇಕು. ಅಲ್ಲದೆ, ಸೂಕ್ತ ದಾಖಲೆ ಒದಗಿಸಬೇಕು. ಆದರೆ, ಸದಸ್ಯರ ಬಗ್ಗೆ ಮೊದಲೇ ಪತ್ರ ನೀಡುವ ಅಗತ್ಯವಿಲ್ಲ. ಪೂರಕ ದಾಖಲೆಗಳನ್ನು ನೀಡಬೇಕಾಗುತ್ತದೆ. ಇಲ್ಲವಾದರೆ ಅವರು ಪ್ರಸ್ತಾಪಿಸುವ ವಿಚಾರಗಳನ್ನು ಕಡತದಿಂದ ತೆಗೆಯಲಾಗುವುದು ಎಂದು ಹೇಳಿದರು.

ಆರಂಭಕ್ಕೆ ಮಾತನಾಡಿದ ಬಿಜೆಪಿ ಸದಸ್ಯ ಜಗದೀಶ್ ಶೆಟ್ಟರ್, ಯಾರ ಮೇಲಾದರೂ ಆರೋಪ ಮಾಡುವ ಮೊದಲೇ ನೋಟಿಸ್ ನೀಡಬೇಕು. ಅಲ್ಲದೆ, ಅದಕ್ಕೆ ಪೂರಕ ದಾಖಲೆ ನೀಡಬೇಕು. ಸಚಿವ ಸ್ಥಾನದಲ್ಲಿರುವವರು ಬೇಜವಾಬ್ದಾರಿ ಆರೋಪ ಮಾಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

‘ಪರಪ್ಪನ ಅಗ್ರಹಾರದಲ್ಲಿ ಕೂತವರು ಸತ್ಯಹರಿಶ್ಚಂದ್ರನ ಕಥೆ ಹೇಳಿದಂತೆ ಆಗುತ್ತಿದೆ. ಎಫ್‌ಐಆರ್, ತನಿಖೆ, ವಿಚಾರಣೆ ಎಲ್ಲವೂ ಇಲ್ಲೇ ನಡೆಸಿದರೆ ತನಿಖಾ ಸಂಸ್ಥೆಗಳಿಗೆ ಏನು ಕೆಲಸ. ಸದನದಲ್ಲಿ ಮನಸೋ ಇಚ್ಛೆ ಮಾತನಾಡಬಹುದೇ’

-ಮಾಧುಸ್ವಾಮಿ, ಬಿಜೆಪಿ ಸದಸ್ಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X