Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಮಹಾಭಾರತದಲ್ಲಿ ವೇದವ್ಯಾಸರು ತೋರಿದ್ದು...

'ಮಹಾಭಾರತದಲ್ಲಿ ವೇದವ್ಯಾಸರು ತೋರಿದ್ದು ಸಮಾಜದ ಅಭಿವ್ಯಕ್ತಿ'

ಮಹಾಭಾರತ ಕುರಿತ ಉಪನ್ಯಾಸದಲ್ಲಿ ಲಕ್ಷ್ಮೀಶ ತೋಳ್ಪಾಡಿ

ವಾರ್ತಾಭಾರತಿವಾರ್ತಾಭಾರತಿ22 July 2019 9:41 PM IST
share
ಮಹಾಭಾರತದಲ್ಲಿ ವೇದವ್ಯಾಸರು ತೋರಿದ್ದು ಸಮಾಜದ ಅಭಿವ್ಯಕ್ತಿ

ಮಣಿಪಾಲ, ಜು.22: ಪುರಾಣಗಳು, ಮಹಾಭಾರತ, ವೇದವಿಭಾಗವನ್ನು ವೇದವ್ಯಾಸರು ಒಬ್ಬರೇ ಹೇಗೆ ಮಾಡಿರಲು ಸಾಧ್ಯವೆಂಬುದು ಕೆಲವರ ಪ್ರಶ್ನೆ. ಕವಿ ಬರೆಯುವ ಕವನವೂ ಸಮಾಜದ ಅನುಭವವಾಗಿರುತ್ತದೆ, ಅವರದ್ದೇ ಆಗಿರುವುದಿಲ್ಲ. ಅದೇ ರೀತಿ ವೇದವ್ಯಾಸರು ಸಹ ಸಮಾಜದ ಅಭಿವ್ಯಕ್ತಿಯನ್ನೇ ತೋರಿಸಿದರು ಎಂದು ಹಿರಿಯ ಚಿಂತಕ, ವಿದ್ವಾನ್ ಲಕ್ಷ್ಮೀಶ ತೋಳ್ಪಾಡಿ ಅಭಿಪ್ರಾಯಪಟ್ಟಿದ್ದಾರೆ.

ಮಣಿಪಾಲ ಮಾಹೆಯ ತತ್ವಜ್ಞಾನ ವಿಭಾಗದಲ್ಲಿ ತತ್ವಶಾಸ್ತ್ರ ವಿಭಾಗ ಮತ್ತು ಸುಬ್ರಹ್ಮಣ್ಯದ ವೇದವ್ಯಾಸ ಸಂಶೋಧನ ಕೇಂದ್ರದ ಜಂಟಿ ಆಶ್ರಯದಲ್ಲಿ ಸೋಮವಾರ ಆಯೋಜನೆಗೊಂಡ ‘ಮಹಾಭಾರತ ಮತ್ತು ಭಾರತೀಯ ದರ್ಶನಗಳು’ ವಿಷಯದ ಕುರಿತು ಅವರು ಉಪನ್ಯಾಸ ನೀಡಿ ಮಾತನಾಡಿದರು. ಮಹಾಭಾರತದಲ್ಲಿ ತತ್ವಶಾಸ್ತ್ರೀಯ ದೃಷ್ಟಿ ಕುರಿತು ಮಾತನಾಡಿದ ಅವರು, ಪ್ರಜ್ಞೆಗೆ ಚಲನೆ ಇಲ್ಲ. ಅದು ಅನೇಕರನ್ನು ನೋಡಿ ಅವರಂತೆ ಅನುಕರಿಸು ಮೂಲಕ ಬೆಳೆಯುತ್ತದೆ ಎಂದರು.

ಲೋಕವನ್ನು ಹೇಗೆ ಇದೆಯೋ ಹಾಗೆ ನೋಡುವ ಮನೋಧರ್ಮವನ್ನು ಮಹಾಭಾರತ ಬೆಳೆಸುತ್ತದೆ. ದರ್ಶನವೆಂದರೂ ಇದೇ ಅರ್ಥ. ಮಹಾಭಾರತದ ಆಶಯವೂ ಇದೇ ಆಗಿದೆ. ಆದರೆ ನಮಗೆ ಒಪ್ಪಿತವಾಗದಿದ್ದರೆ ದುರಂತವಾಗಿ ಕಂಡುಬರುತ್ತದೆ. ಇತಿಹಾಸಕಾರನಿಗೆ ಹಾಗೆ ಕಾಣುವುದಿಲ್ಲ. ಇತಿಹಾಸವೆಂದರೆ ಮರುಕಳಿಸುವುದು. ಸಂವೇದನಶೀಲನಾದವನು ಮಾತ್ರ ಸಮುದಾಯದ ಅನುಭವಗಳನ್ನು ಕಾಣುವ ಮೂಲಕ ನೋಡುತ್ತಾನೆ, ಇದು ಅದುವರೆಗಿನ ಅನುಭವಗಳಿಂದ ಪಾಾಗುವ ಮಾರ್ಗವೂ ಹೌದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಬ್ರಹ್ಮಣ್ಯದ ಶ್ರೀಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನತೀರ್ಥ ಶ್ರೀಪಾದರು ಮಾತನಾಡಿ, ಪೂರ್ವಿಕರು ಬಹಳ ಕಷ್ಟಪಟ್ಟು ರಚಿಸಿದ ಪ್ರಾಚೀನ ಗ್ರಂಥಗಳ ಸಂಶೋಧನೆ, ವಿಮರ್ಶೆ ನಡೆಯುವ ಮೂಲಕ ಆ ಜ್ಞಾನ ಪರಂಪರೆಯನ್ನು ಮುಂದುವರಿಸವ ಅಗತ್ಯವಿದೆ ಎಂದರು.

ಮಣಿಪಾಲ ಸೆಂಟರ್ ಫಾರ್ ಯೂರೋಪಿಯನ್ ಸ್ಟಡೀಸ್ ನಿರ್ದೇಶಕಿ ಡಾ.ನೀತಾ ಇನಾಂದಾರ್ ಮಾತನಾಡಿದರು. ತತ್ವಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಶ್ರೀನಿವಾಸಕುಮಾರ್ ಎನ್. ಆಚಾರ್ಯ ಸ್ವಾಗತಿಸಿದರೆ, ಡಾ. ಎಸ್.ಆರ್.ಅರ್ಜುನ ವಂದಿಸಿದರು. ಸಂಶೋಧಕ ಡಾ.ಆನಂದ ತೀರ್ಥ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X