Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. #ಮೀಟೂ ಸಮಿತಿಯನ್ನು ಸದ್ದಿಲ್ಲದೆ...

#ಮೀಟೂ ಸಮಿತಿಯನ್ನು ಸದ್ದಿಲ್ಲದೆ ವಿಸರ್ಜಿಸಿದ ಕೇಂದ್ರ ಸರಕಾರ

ವಿವರಗಳನ್ನು ಬಹಿರಂಗಗೊಳಿಸಲು ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ22 July 2019 9:50 PM IST
share
#ಮೀಟೂ ಸಮಿತಿಯನ್ನು ಸದ್ದಿಲ್ಲದೆ ವಿಸರ್ಜಿಸಿದ ಕೇಂದ್ರ ಸರಕಾರ

ಹೊಸದಿಲ್ಲಿ,ಜು.22: ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಭಾರತದಲ್ಲಿ ಮೀ ಟೂ ಅಭಿಯಾನವು ಉತ್ತುಂಗದಲ್ಲಿದ್ದಾಗ ಕೆಲಸದ ಸ್ಥಳಗಳಲ್ಲಿ ಲೈಂಗಿಕ ಕಿರುಕುಳಗಳನ್ನು ತಡೆಯಲು ಕಾನೂನಿನ ಚೌಕಟ್ಟಿನಡಿ ಮಾಡಬಹುದಾದ ರಚನಾತ್ಮಕ ಬದಲಾವಣೆಗಳ ಕುರಿತು ಪರಿಶೀಲಿಸಲು ರಚಿಸಲಾಗಿದ್ದ ಸಚಿವರ ಸಮಿತಿಯನ್ನು ಸರಕಾರವು ಸದ್ದಿಲ್ಲದೆ ವಿಸರ್ಜಿಸಿದೆ. ಸುದ್ದಿ ಜಾಲತಾಣ ‘The Quint’ ಸಲ್ಲಿಸಿದ್ದ ಆರ್‌ಟಿಐ ಅರ್ಜಿಗೆ ಉತ್ತರವು ಈ ವಿಷಯವನ್ನು ಬಹಿರಂಗಗೊಳಿಸಿದೆ. ಆರ್‌ಟಿಐ ಕಾಯ್ದೆಯ ಕಲಂ 8(1)ರಡಿ ಸಮಿತಿಯ ಸಭೆಗಳ ನಡಾವಳಿಗಳನ್ನು ಬಹಿರಂಗಗೊಳಿಸಲು ಸರಕಾರವು ನಿರಾಕರಿಸಿದೆ.

ಹಲವಾರು ಮಹಿಳೆಯರಿಂದ ತನ್ನ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳ ಹಿನ್ನೆಲೆಯಲ್ಲಿ ಆಗಿನ ಸಹಾಯಕ ವಿದೇಶಾಂಗ ವ್ಯವಹಾರಗಳ ಸಚಿವ ಎಂ.ಜೆ.ಅಕ್ಬರ್ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಸರಕಾರವು ಸಮಿತಿ ರಚನೆಯನ್ನು ಪ್ರಕಟಿಸಿತ್ತು. ಮೋದಿ ಸರಕಾರದಲ್ಲಿ ಹಿರಿಯ ಸಚಿವರಾಗಿದ್ದ ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್, ಮೇನಕಾ ಗಾಂಧಿ ಮತ್ತು ನಿತಿನ್ ಗಡ್ಕರಿ ಅವರು ಈ ಸಮಿತಿಯಲ್ಲಿದ್ದರು. ಮೂರು ತಿಂಗಳಲ್ಲಿ ತನ್ನ ಶಿಫಾರಸುಗಳನ್ನು ಸರಕಾರಕ್ಕೆ ಸಲ್ಲಿಸುವಂತೆ ಈ ಸಮಿತಿಗೆ ಸೂಚಿಸಲಾಗಿತ್ತು.

ಸಮಿತಿಯು ನಡೆಸಿದ ಸಭೆಗಳ ಸಂಖ್ಯೆ,ಎಲ್ಲ ಸಭೆಗಳ ದಿನಾಂಕಗಳು ಮತ್ತು ಪ್ರತಿ ಸಭೆಯ ನಡಾವಳಿಯ ವಿವರಗಳನ್ನು ನೀಡುವಂತೆ ಆರ್‌ಟಿಐ ಅರ್ಜಿಯಲ್ಲಿ ಕೋರಲಾಗಿತ್ತು. ಸಮಿತಿಯ ಶಿಫಾರಸುಗಳ ಪ್ರತಿಯನ್ನು ನೀಡುವಂತೆಯೂ ಕೇಳಿಕೊಳ್ಳಲಾಗಿತ್ತು. ಆದರೆ ಸರಕಾರವು ಇವುಗಳನ್ನು ಸ್ಪಷ್ಟವಾಗಿ ನಿರಾಕರಿಸಿದೆ.

ಲೈಂಗಿಕ ಕಿರುಕುಳ ಕುರಿತು ಹಾಲಿ ಇರುವ ಕಾನೂನುಗಳು ಮತ್ತು ನೀತಿಗಳನ್ನು ಪರಿಶೀಲಿಸುವುದಾಗಿ ಹಾಗೂ ಅವುಗಳನ್ನು ಬಲಗೊಳಿಸಲು ಮಾರ್ಗೋಪಾಯಗಳನ್ನು ಶಿಫಾರಸು ಮಾಡುವುದಾಗಿ ಸರಕಾರವು ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಭರವಸೆ ನೀಡಿತ್ತು. ಕಾಲಮಿತಿಯೊಳಗೆ ಅನುಷ್ಠಾನದೊಂದಿಗೆ ನ್ಯಾಯವು ದೊರೆಯುವುದನ್ನು ಖಚಿತಪಡಿಸಲು ಸೂಕ್ತ ಮಾರ್ಗಗಳನ್ನು ಕಂಡುಕೊಳ್ಳಲೂ ತಾನು ಬಯಸಿರುವುದಾಗಿ ಅದು ಹೇಳಿತ್ತು.

 ಕೆಲಸದ ಸ್ಥಳಗಳಲ್ಲಿ ಲೈಂಗಿಕ ಕಿರುಕುಳಗಳನ್ನು ತಡೆಯಲು ಭಾರತದ ಕಾನೂನು ಪ್ರಮುಖ ಹೆಜ್ಜೆ ಎಂದು ಪ್ರಶಂಸಿಸಲ್ಪಟ್ಟಿತ್ತು. ಆದರೆ ಕಾಲವು ಸರಿದಂತೆ ಕಾನೂನಿನಲ್ಲಿ ಹಲವಾರು ಲೋಪಗಳು ಮತ್ತು ಕೊರತೆಗಳು ಕಂಡು ಬಂದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X