Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಗರಾಭಿವೃದ್ಧಿ ಇಲಾಖೆಯಿಂದ ಜಾಹೀರಾತು...

ನಗರಾಭಿವೃದ್ಧಿ ಇಲಾಖೆಯಿಂದ ಜಾಹೀರಾತು ನಿಯಮ ಕರಡು ತಯಾರು

ವಾರ್ತಾಭಾರತಿವಾರ್ತಾಭಾರತಿ22 July 2019 10:07 PM IST
share

ಬೆಂಗಳೂರು, ಜು.22: ನಗರದ ಸಾರ್ವಜನಿಕ ಸ್ಥಳಗಳಲ್ಲಿ ವಾಣಿಜ್ಯ ಉದ್ದೇಶದ ಹೋರ್ಡಿಂಗ್‌ಗಳನ್ನು ಸಂಪೂರ್ಣ ನಿಷೇಧಿಸುವ ಸಂಬಂಧ ಬಿಬಿಎಂಪಿ ಕೈಗೊಂಡಿರುವ ನಿರ್ಣಯ ಬದಿಗೆ ಸರಿಸಿ ನಗರಾಭಿವೃದ್ಧಿ ಇಲಾಖೆ ಬಿಬಿಎಂಪಿ ಜಾಹೀರಾತು ನಿಯಮಗಳು-2019 ಅನ್ನು ಜಾರಿಗೆ ತರಲು ಮುಂದಾಗಿದೆ.

ಹೈಕೋರ್ಟ್ ನಿರ್ದೇಶನದಂತೆ ಪಾಲಿಕೆಯು ಕಳೆದ ವರ್ಷ ಆಗಸ್ಟ್‌ನಲ್ಲಿ ನಗರದ ಎಲ್ಲೆಡೆ ಒಂದೇ ದಿನದಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಕಿರಿಕಿರಿ ಉಂಟು ಮಾಡುತ್ತಿದ್ದ ಅನೇಕ ರೀತಿಯ ಜಾಹೀರಾತು ಫಲಕಗಳನ್ನು ತೆರವು ಮಾಡಲಾಗಿತ್ತು. ಆ ಬಳಿಕ ಬೈಲಾ ತಿದ್ಧುಪಡಿ ಮಾಡಿದ್ದ ಬಿಬಿಎಂಪಿಯು ಜಾಹೀರಾತುಗಳನ್ನು ನಿಷೇಧಿಸಲು ನಿರ್ಣಯ ಕೈಗೊಂಡಿತ್ತು. ಆದರೆ, ಇದೀಗ ನಗರಾಭಿವೃದ್ಧಿ ಇಲಾಖೆಯ ಜಾರಿಗೆ ಮುಂದಾಗಿರುವ ನಿಯಮಗಳಲ್ಲಿ ಈ ನಿರ್ಣಯದ ಪ್ರಸ್ತಾವವನ್ನೇ ಮಾಡಿಲ್ಲ.

ನಗರಾಭಿವೃದ್ಧಿ ಇಲಾಖೆ ಈಗಾಗಲೇ ಕರಡು ಸಿದ್ಧಪಡಿಸಿದ್ದು, ಅದರ ಪ್ರಕಾರ ನಗರದ ನೆಲದಲ್ಲಿ, ಚಾವಣಿಗಳ ಮೇಲೆ ಖಾಸಗಿ ಹೋರ್ಡಿಂಗ್‌ಗಳಿಗೆ ಹಾಗೂ ಬಿಲ್‌ಬೋರ್ಡ್‌ಗಳಿಗೆ ಅವಕಾಶ ಕಲ್ಪಿಸಿದೆ ಎಂದು ಮೂಲಗಳು ಹೇಳಿವೆ.

ಹಿನ್ನೆಲೆ ಏನು?: ನಗರದಲ್ಲಿ ಫ್ಲೆಕ್ಸ್ ಹಾಗೂ ಅನಧಿಕೃತ ಜಾಹೀರಾತು ಹಾವಳಿ ಕುರಿತಂತೆ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು 2018ರ ಆಗಸ್ಟ್ 1ರಂದು ಹೈಕೋರ್ಟ್ ವಿಚಾರಣೆ ನಡೆಸಿತ್ತು. ನಗರದಲ್ಲಿರುವ ಎಲ್ಲ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್‌ಗಳನ್ನು ಅದೇ ದಿನ ಮಧ್ಯಾಹ್ನದೊಳಗೆ ತೆರವುಗೊಳಿಸುವಂತೆ ಅಂದಿನ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಪಾಲಿಕೆಗೆ ಸೂಚನೆ ನೀಡಿದ್ದರು.

ಈ ವೇಳೆ ಬಿಬಿಎಂಪಿ ಅಧಿಕಾರಿಗಳು ಸಮರೋಪಾದಿಯಲ್ಲಿ ಫ್ಲೆಕ್ಸ್ ತೆರವು ಕಾರ್ಯಾಚರಣೆ ನಡೆಸಿದ್ದರಿಂದ ಒಂದೇ ದಿನದಲ್ಲಿ ನಗರ ಫ್ಲೆಕ್ಸ್, ಬ್ಯಾನರ್‌ಗಳಿಂದ ಮುಕ್ತವಾಗಿತ್ತು. ಅನಂತರ ಎಲ್ಲ ಜಾಹೀರಾತು ಫಲಕಗಳನ್ನು ತೆರವು ಮಾಡುವಂತೆಯೂ ಆದೇಶಿಸಿತು.

ಪಾಲಿಕೆಯು ಹೊರಾಂಗಣ ಸೈನೇಜ್ ಹಾಗೂ ಸಾರ್ವಜನಿಕ ಸಂದೇಶ ನೀತಿ ಹಾಗೂ ಹೊರಾಂಗಣ ಜಾಹೀರಾತು ಮತ್ತು ಸಾರ್ವಜನಿಕ ಸಂದೇಶ ಬೈಲಾ-2018 ರೂಪಿಸಿತು, ಆ.28 ರಂದು ಪಾಲಿಕೆ ಕೌನ್ಸಿಲ್ ಸಭೆ ಅನುಮೋದಿಸಿದ್ದು, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೆ.11 ರಂದು ಅನುಮೋದನೆ ನೀಡಿದ್ದರು. ಸೆ.25ರಂದು ಬೈಲಾ ಕರಡನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿತ್ತು.

ಅನಂತರ ಆಕ್ಷೇಪಣೆಗಳು, ಸಲಹೆಗಳು ಸೇರಿದಂತೆ 737 ಅರ್ಜಿಗಳು ಸಲ್ಲಿಕೆಯಾಗಿದ್ದವು. ಎಲ್ಲವನ್ನೂ ಪಾಲಿಕೆ ಆಯುಕ್ತರು ಪರಿಶೀಲಿಸಿ, ಅಂತಿಮ ಅನುಮೋದನೆಗಾಗಿ ಬೈಲಾ ಕರಡನ್ನು ನಗರಾಭಿವೃದ್ಧಿ ಇಲಾಖೆಗೆ ಕಳುಹಿಸಿದ್ದರು. ಇಲಾಖೆಯು ಈ ಸಂಬಂಧ ಸಂಸದೀಯ ವ್ಯವಹಾರಗಳ ಇಲಾಖೆಯ ಸಲಹೆ ಕೇಳಿತ್ತು. ಸಂಸದೀಯ ವ್ಯವಹಾರ ಇಲಾಖೆಯು ಈ ಕರಡು ದೋಷದಿಂದ ಕೂಡಿದ್ದು, ಅದನ್ನು ಪರಿಷ್ಕರಿಸಿ, ಸಾರ್ವಜನಿಕರ ಆಕ್ಷೇಪಣೆ ಹಾಗೂ ಸಲಹೆ ಮತ್ತೊಮ್ಮೆ ಆಹ್ವಾನಿಸಿ ಎಂದು ಸಲಹೆ ನೀಡಿತು. ಆದರೆ, ನಗರಾಭಿವೃದ್ಧಿ ಇಲಾಖೆ ಪಾಲಿಕೆ ನೀಡಿದ್ದ ಕರಡಿನಲ್ಲಿರುವ ಅಂಶಗಳನ್ನು ಕೈ ಬಿಟ್ಟು ಹೊಸ ಜಾಹೀರಾತು ನೀಡಿ ಕರಡು ರೂಪಿಸಿದೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X