Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯಸಭೆಯಲ್ಲಿ ಪ್ರತಿಭಟನೆಗಳ ನಡುವೆಯೇ...

ರಾಜ್ಯಸಭೆಯಲ್ಲಿ ಪ್ರತಿಭಟನೆಗಳ ನಡುವೆಯೇ ಮಾನವ ಹಕ್ಕುಗಳ ಮಸೂದೆಗೆ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ23 July 2019 9:16 PM IST
share
ರಾಜ್ಯಸಭೆಯಲ್ಲಿ ಪ್ರತಿಭಟನೆಗಳ ನಡುವೆಯೇ ಮಾನವ ಹಕ್ಕುಗಳ ಮಸೂದೆಗೆ ಅಂಗೀಕಾರ

ಹೊಸದಿಲ್ಲಿ,ಜು.23: ಮಸೂದೆಯು ಕೇವಲ ಸರಕಾರದ ನಾಮನಿರ್ದೇಶಿತರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ)ಕ್ಕೆ ನೇಮಕಗೊಳಿಸಲು ಅವಕಾಶ ಕಲ್ಪಿಸುತ್ತದೆ ಎಂಬ ಪ್ರತಿಪಕ್ಷ ಟೀಕೆಗಳ ನಡುವೆಯೇ ಮಂಗಳವಾರ ರಾಜ್ಯಸಭೆಯು ಮಾನವ ಹಕ್ಕುಗಳ ರಕ್ಷಣೆ(ತಿದ್ದುಪಡಿ) ಮಸೂದೆ,2019ನ್ನು ಧ್ವನಿಮತದಿಂದ ಅಂಗೀಕರಿಸಿತು. ಮಸೂದೆಯು ಶುಕ್ರವಾರ ಲೋಕಸಭೆಯಲ್ಲಿ ಅಂಗೀಕಾರಗೊಂಡಿತ್ತು.

ಚರ್ಚೆಯ ಅಂತ್ಯದಲ್ಲಿ ಟೀಕೆಗಳಿಗೆ ಉತ್ತರಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು,ಇಂತಹ ಆತಂಕಕ್ಕೆ ಆಧಾರವಿಲ್ಲ. ಗೃಹಸಚಿವರ ಶಿಫಾರಸಿನ ಮೇರೆಗೆ ಪ್ರಧಾನಿಯವರು ಆಯೋಗದ ಅಧ್ಯಕ್ಷರನ್ನು ನೇಮಕಗೊಳಿಸುವುದಿಲ್ಲ. ಪ್ರಧಾನಿ ಮತ್ತು ಉಭಯ ಸದನಗಳ ಪ್ರತಿಪಕ್ಷ ನಾಯಕರನ್ನೊಳಗೊಂಡ ಸಮಿತಿಯು ಆ ಕೆಲಸವನ್ನು ಮಾಡುತ್ತದೆ. ಇಂತಹ ಸಮಿತಿಯಲ್ಲಿ ಸದನವು ವಿಶ್ವಾಸವನ್ನಿರಿಸಬೇಕು ಎಂದು ಹೇಳಿದರು.

  • ಅಧ್ಯಕ್ಷರ ಆಯ್ಕೆ

  1993ರ ಮಾನವ ಹಕ್ಕುಗಳ ಕಾಯ್ದೆಯಡಿ ಮಾಜಿ ಭಾರತದ ಮುಖ್ಯ ನ್ಯಾಯಾಧೀಶರನ್ನು ಮಾತ್ರ ಎನ್‌ಎಚ್‌ಆರ್‌ಸಿ ಅಧ್ಯಕ್ಷರನ್ನಾಗಿ ನೇಮಿಸಬೇಕಿತ್ತು. ನೂತನ ಮಸೂದೆಯಡಿ ಸರ್ವೋಚ್ಚ ನ್ಯಾಯಾಲಯದ ಮಾಜಿ ನ್ಯಾಯಾಧೀಶರನ್ನೂ ಈ ಹುದ್ದೆಗೆ ನೇಮಕಗೊಳಿಸಬಹುದಾಗಿದೆ.

ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್ ಸಂಸದ ವಿವೇಖ ತಂಖಾ ಅವರು,ಮಸೂದೆಯಲ್ಲಿನ ಹಲವಾರು ನಿಬಂಧನೆಗಳು ಎನ್‌ಎಚ್‌ಆರ್‌ಸಿ ಅಧ್ಯಕ್ಷರನ್ನು ಆಯ್ಕೆ ಮಾಡಲು ಸರಕಾರಕ್ಕೆ ವಿವೇಚನಾಧಿಕಾರವನ್ನು ನೀಡಿವೆ ಎಂದು ಹೇಳಿದರೆ ಆರ್‌ಜೆಡಿ ಸಂಸದ ಮನೋಜ ಝಾ ಅವರು,ಮಸೂದೆಯು ‘ಹೌದಪ್ಪ ’ಗಳನ್ನು ಆಯೋಗಕ್ಕೆ ನೇಮಿಸಲು ಮಾರ್ಗವನ್ನು ಸುಗಮಗೊಳಿಸಿದೆ ಎಂದು ಟೀಕಿಸಿದರು.

  ಸೋನಭದ್ರಾ ಹತ್ಯಾಕಾಂಡ ಮತ್ತು ಕರ್ನಾಟಕದಲ್ಲಿಯ ರಾಜಕೀಯ ಬಿಕ್ಕಟ್ಟು ಕುರಿತು ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಸುತ್ತ್ತಿದ್ದ ಪ್ರತಿಪಕ್ಷ ಸದಸ್ಯರ ಗದ್ದಲದ ನಡುವೆಯೇ ಮಸೂದೆಯ ಮೇಲೆ ಚರ್ಚೆ ಆರಂಭಗೊಂಡಿತ್ತು. ಮಧ್ಯಾಹ್ನ 2:20ಕ್ಕೆ ಮುಂದೂಡಲ್ಪಟ್ಟಿದ್ದ ಸದನವು ಮರುಸಮಾವೇಶಗೊಂಡಾಗ ತೃಣಮೂಲ ನಾಯಕ ಶೇಖರ್ ರೇ ಅವರು ತಿದ್ದುಪಡಿಗಳನ್ನು ಚರ್ಚಿಸಲು ಅಥವಾ ಮಂಡಿಸಲು ಸದನಕ್ಕೆ ಸಾಕಷ್ಟು ಸಮಯಾವಕಾಶ ದೊರಕಿರಲಿಲ್ಲ ಎಂದು ಪ್ರತಿಭಟನೆಯನ್ನು ದಾಖಲಿಸಿದರು. ಇದರ ಬೆನ್ನಲ್ಲೇ ತೃಣಮೂಲ ಸದಸ್ಯರು ಸಭಾತ್ಯಾಗ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X