Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಖಾಸಗಿ ವೈದ್ಯ ಕಾಲೇಜುಗಳಿಗೆ ಜಾಕ್‌ಪಾಟ್ !

ಖಾಸಗಿ ವೈದ್ಯ ಕಾಲೇಜುಗಳಿಗೆ ಜಾಕ್‌ಪಾಟ್ !

ವಾರ್ತಾಭಾರತಿವಾರ್ತಾಭಾರತಿ24 July 2019 11:01 AM IST
share
ಖಾಸಗಿ ವೈದ್ಯ ಕಾಲೇಜುಗಳಿಗೆ ಜಾಕ್‌ಪಾಟ್ !

ಹೊಸದಿಲ್ಲಿ: ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ ಮಸೂದೆ- 2019 ಯಥಾಸ್ಥಿತಿಯಲ್ಲಿ ಆಂಗೀಕಾರವಾದರೆ ಖಾಸಗಿ ವೈದ್ಯ ಕಾಲೇಜುಗಳಿಗೆ ಭರಪೂರ ಕೊಡುಗೆಯಾಗಲಿದೆ.

ನೂತನ ಮಸೂದೆ ಅನ್ವಯ, ರಾಷ್ಟ್ರೀಯ ವೈದ್ಯಕೀಯ ಆಯೋಗ ಖಾಸಗಿ ವೈದ್ಯ ಕಾಲೆಜುಗಳ ಶೇಕಡ 50ರಷ್ಟು ಸೀಟುಗಳಿಗೆ ಮಾತ್ರ ಶುಲ್ಕ ನಿಗದಿಪಡಿಸುವ ಅಧಿಕಾರ ಹೊಂದಿದ್ದು, ಉಳಿದ ಸೀಟುಗಳಿಗೆ ಕಾಲೇಜುಗಳೇ ಶುಲ್ಕ ನಿಗದಿಪಡಿಸಬಹುದಾಗಿದೆ. ಪ್ರಸ್ತುತ ಖಾಸಗಿ ಕಾಲೇಜುಗಳು ವಿಧಿಸಬಹುದಾದ ಶುಲ್ಕಕ್ಕೆ ಬಹುತೇಕ ರಾಜ್ಯಗಳಲ್ಲಿ ಗರಿಷ್ಠ ಮಿತಿ ಇದೆ.

ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ನಿಗದಿ ಅಧಿಕಾರವು ಅವ್ಯವಹಾರ ಮತ್ತು ಸೀಟುಗಳ ಹರಾಜಿಗೆ ಕಾರಣವಾಗಲಿದೆ ಎಂದು ರಾಜ್ಯ ಸರ್ಕಾರಗಳು ಮತ್ತು ಇತರ ಹಕ್ಕುದಾರರು ವ್ಯಕ್ತಪಡಿಸಿದ ಆತಂಕವನ್ನು ಕಡೆಗಣಿಸಿ, ಮಸೂದೆಯನ್ನು ಯಥಾವತ್ತಾಗಿ ಮಂಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಎನ್‌ಎಂಸಿ ಮಸೂದೆ-2017ರ ಪರಾಮರ್ಶೆ ನಡೆಸಿದ ಸಂಸದೀಯ ಸ್ಥಾಯಿ ಸಮಿತಿ ಹಲವು ಹಕ್ಕುದಾರರ ಅಹವಾಲುಗಳನ್ನು ಆಲಿಸಿ, ಖಾಸಗಿ ಕಾಲೇಜುಗಳ ಶುಲ್ಕ ನಿಗದಿಯಲ್ಲಿ ಪ್ರಸ್ತುತ ರಾಜ್ಯ ಸರ್ಕಾರಗಳಿಗೆ ಇರುವ ನಿಯಂತ್ರಣಾಧಿಕಾರವನ್ನು ದುರ್ಬಲಗೊಳಿಸಬಾರದು ಎಂದು 2018ರ ಮಾರ್ಚ್‌ನಲ್ಲಿ ಶಿಫಾರಸ್ಸು ಮಾಡಿತ್ತು.

ಸ್ವಾಯತ್ತ ವಿವಿ ಹಾಗೂ ಸ್ವಾಯತ್ತವಾಗಲಿರುವ ವಿವಿಗಳ ಶುಲ್ಕ ನಿಯಂತ್ರಣಕ್ಕೆ ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಇಂಥ ಸಂಸ್ಥೆಗಳ ಕನಿಷ್ಠ ಶೇಕಡ 50ರಷ್ಟು ಸೀಟುಗಳ ಶುಲ್ಕ ನಿಯಂತ್ರಿಸಬೇಕು ಎಂದು ಸಲಹೆ ಮಾಡಿತ್ತು.

ಆದರೆ ಲೋಕಸಭೆಯಲ್ಲಿ ಮಂಡಿಸಲಾದ ಮಸೂದೆಯಲ್ಲಿ ಎನ್‌ಎಂಸಿ ಅಧಿಕಾರದಲ್ಲಿ ಖಾಸಗಿ ಸಂಸ್ಥೆಗಳು ಮತ್ತು ಸ್ವಾಯತ್ತ ವಿವಿಗಳ ಶೇಕಡ 50ರಷ್ಟು ಸೀಟುಗಳಿಗೆ ಶುಲ್ಕ ನಿಗದಿಪಡಿಸುವ ಸಂಬಂಧ ಮಾರ್ಗ ಸೂಚಿ ರೂಪಿಸುವ ಅಧಿಕಾರ ಸೇರಿರುತ್ತದೆ. 2017ರಲ್ಲಿ ನಿಗದಿಪಡಿಸಿದ್ದ ಶೇಕಡ 40 ಸೀಟುಗಳ ಬದಲಾಗಿ ಇದೀಗ ಶೇಕಡ 50 ಎಂದು ನಿಗದಿಪಡಿಸಲಾಗಿದ್ದರೂ, ಸಂಸದೀಯ ಸಮಿತಿಯ ಶಿಫಾರಸ್ಸುಗಳನ್ನು ದುರ್ಬಲಗೊಳಿಸಲಾಗಿದೆ.

ರಾಜ್ಯಸಭೆಯಲ್ಲಿ ಈ ಸಂಬಂಧ ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಸಮಿತಿ ಸದಸ್ಯ ಜೈರಾಮ್ ರಮೇಶ್, "ದೇಶದಲ್ಲಿ ವೈದ್ಯ ಶಿಕ್ಷಣದ ಶುಲ್ಕ ದುಬಾರಿಯಾಗಿದ್ದು, ಪ್ರತಿ ರಾಜ್ಯ ಸರ್ಕಾರಗಳು ಶುಲ್ಕ ನಿಗದಿಗೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸಬೇಕು" ಎಂದು ಆಗ್ರಹಿಸಿದ್ದರು.

ಹಲವು ರಾಜ್ಯ ಸರ್ಕಾರಗಳು ಕೂಡ ಇದೇ ವಾದ ಮಂಡಿಸಿವೆ. ಉದಾಹರಣೆಗೆ ಒಡಿಶಾದಲ್ಲಿ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಸಮಿತಿ ಶುಲ್ಕ ನಿಗದಿಪಡಿಸುತ್ತಿದ್ದು, ಶೇಕಡ 85ರಷ್ಟು ಸರ್ಕಾರಿ ಕೋಟಾಗೆ ಒಂದು ಶುಲ್ಕವಿದ್ದರೆ, ಉಳಿದ ಶೇಕಡ 15ರಷ್ಟು ಎನ್‌ಆರ್‌ಐ ಸೀಟುಗಳಿಗೆ ನಾಲ್ಕು ಪಟ್ಟು ಶುಲ್ಕ ಇದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X