Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ‘ಜೈ ಶ್ರೀ ರಾಮ್’ ಇಂದು ಯುದ್ಧದ...

‘ಜೈ ಶ್ರೀ ರಾಮ್’ ಇಂದು ಯುದ್ಧದ ಕರೆಯಾಗಿದೆ

ಮಣಿರತ್ನಂ, ಅನುರಾಗ್ ಕಶ್ಯಪ್ ಸೇರಿ 49 ಸೆಲೆಬ್ರಿಟಿಗಳಿಂದ ಪ್ರಧಾನಿಗೆ ಪತ್ರ

ವಾರ್ತಾಭಾರತಿವಾರ್ತಾಭಾರತಿ24 July 2019 1:38 PM IST
share
‘ಜೈ ಶ್ರೀ ರಾಮ್’ ಇಂದು ಯುದ್ಧದ ಕರೆಯಾಗಿದೆ

ಹೊಸದಿಲ್ಲಿ, ಜು. 24: ಗಾಯಕಿ ಶುಭಾ ಮುದ್ಗಲ್, ನಟಿ ಕೊಂಕಣ್ ಸೇನ್ ಶರ್ಮಾ, ಚಿತ್ರ ನಿರ್ದೇಶಕರಾದ ಶ್ಯಾಮ್ ಬೆನಗಲ್, ಅನುರಾಗ್ ಕಶ್ಯಪ್ ಹಾಗೂ ಮಣಿರತ್ನಂ ಸಹಿತ ವಿವಿಧ ಕ್ಷೇತ್ರಗಳ 49ಕ್ಕೂ ಅಧಿಕ ಸೆಲೆಬ್ರೆಟಿಗಳು ದೇಶದಲ್ಲಿ ಸಂಭವಿಸುತ್ತಿರುವ ಗುಂಪಿನಿಂದ ಥಳಿತದ ಘಟನೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಜುಲೈ 23ರ ದಿನಾಂಕದ ಪತ್ರದಲ್ಲಿ ಸೆಲೆಬ್ರೆಟಿಗಳು, ಇಂತಹ ಪ್ರಕರಣಗಳಲ್ಲಿ ‘ತ್ವರಿತ ಹಾಗೂ ಖಚಿತ’ ಮಾದರಿ ಶಿಕ್ಷೆ ನೀಡಬೇಕು ಎಂದಿದ್ದಾರೆ. ‘‘ಮುಸ್ಲಿಮರು, ದಲಿತರು ಹಾಗೂ ಇತರ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಗುಂಪಿನಿಂದ ಹಲ್ಲೆಯನ್ನು ಕೂಡಲೇ ನಿಲ್ಲಿಸಬೇಕು. 2016ರಲ್ಲಿ ದಲಿತರ ಮೇಲೆ ಇಂತಹ ದೌರ್ಜನ್ಯದ 840ಕ್ಕೂ ಅಧಿಕ ಪ್ರಕರಣಗಳು ನಡೆದಿರುವುದು ಎನ್‌ಸಿಆರ್‌ಬಿ ವರದಿಯ ಮೂಲಕ ತಿಳಿದಾಗ ನಮಗೆ ಆಘಾತವಾಯಿತು’’ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ. ‘‘1 ಜನವರಿ 2009ರಿ ಹಾಗೂ 29 ಅಕ್ಟೋಬರ್ 2018ರ ನಡುವೆ 254 ಧಾರ್ಮಿಕ ಗುರುತು ಆಧಾರಿತ ದ್ವೇಷದ ಹಲ್ಲೆಗಳು ನಡೆದಿವೆ. ಈ ಹಲ್ಲೆಗಳಲ್ಲಿ ಕನಿಷ್ಠ 91 ಮಂದಿ ಮೃತಪಟ್ಟಿದ್ದಾರೆ ಹಾಗೂ 579 ಮಂದಿ ಗಾಯಗೊಂಡಿದ್ದಾರೆ (ಫ್ಯಾಕ್ಟ್‌ಚೆಕ್ಕರ್. ಇನ್‌ಡಾಟಾಬೇಸ್-30 ಅಕ್ಟೋಬರ್ 2018). ಇಂತಹ ದ್ವೇಷದ ಹಲ್ಲೆ ಪ್ರಕರಣಗಳಲ್ಲಿ ಶೇ. 62 ಮುಸ್ಲಿಮರು (ಒಟ್ಟು ಜನಸಂಖ್ಯೆಯ ಶೇ. 14 ಇದ್ದಾರೆ), ಶೇ. 14 ಕ್ರಿಶ್ಚಿಯನರು (23 ಜುಲೈ 2019ರ ಜನಸಂಖ್ಯೆಯ ಶೇ. 2 ಇದ್ದಾರೆ.) ಸಂತ್ರಸ್ತರಾಗಿದ್ದಾರೆ ಎಂದು ಸಿಟಿಜನ್ಸ್ ರಿಲೀಜಿಯಸ್ ಹೇಟ್ ಕ್ರೈಮ್ ವಾಚ್ ಹೇಳಿದೆ. ಇದರಲ್ಲಿ ಶೇ. 90 ಘಟನೆಗಳು ಮೇ 2014ರ ಬಳಿಕ, ಅಂದರೆ ನಿಮ್ಮ ಆಡಳಿತ ಅಸ್ತಿತ್ವಕ್ಕೆ ಬಂದ ಬಳಿಕ ಸಂಭವಿಸಿದೆ’’ ಎಂದು ಅವರು ತಿಳಿಸಿದ್ದಾರೆ.

‘‘ದುಷ್ಕರ್ಮಿಗಳ ವಿರುದ್ಧ ಯಾವ ಕ್ರಮಗಳನ್ನು ತೆಗೆದುಕೊಂಡಿದ್ದೀರಿ ? ಇಂತಹ ಅಪರಾಧವನ್ನು ಜಾಮೀನು ರಹಿತ ಎಂದು ಘೋಷಿಸಬೇಕು. ಶೀಘ್ರ ಹಾಗೂ ಖಚಿತ ಮಾದರಿ ಶಿಕ್ಷೆ ನೀಡಬೇಕು. ಹತ್ಯೆ ಪ್ರಕರಣದಲ್ಲಿ ಪರೋಲ್ ಇಲ್ಲದೆ ಜೀವಾವಧಿ ಶಿಕ್ಷೆ ನೀಡಲು ಸಾಧ್ಯವಾಗುವುದಾದರೆ, ಅದಕ್ಕಿಂತ ಹೆಚ್ಚು ಕ್ರೂರವಾದ ಥಳಿಸಿ ಹತ್ಯೆ ಪ್ರಕರಣದಲ್ಲಿ ಯಾಕೆ ನೀಡಬಾರದು ? ನಮ್ಮ ದೇಶದಲ್ಲಿ ಯಾವುದೇ ನಾಗರಿಕರು ಭೀತಿಯಿಂದ ಬದುಕಬಾರದು’’ ಎಂದು ಅವರು ಹೇಳಿದ್ದಾರೆ. “ಜೈಶ್ರೀರಾಮ್” ಎಂಬುದು ಈಗ ಯುದ್ಧದ ಕೂಗು ಆಗಿಬ್ಟಿಟ್ಟಿದೆ. ರಾಮ ಎಂಬುದು ಅಲ್ಪಸಂಖ್ಯಾತರಲ್ಲಿ ನಡುಕ ಹುಟ್ಟಿಸಿದೆ ಎಂದು ಅವರು ತಿಳಿಸಿದ್ದಾರೆ.

‘‘ಧರ್ಮದ ಹೆಸರಿನಲ್ಲಿ ಅತ್ಯಧಿಕ ಹಿಂಸಾಚಾರ ಸಂಭವಿಸುತ್ತಿರುವ ಬಗ್ಗೆ ನಮಗೆ ಆಘಾತವಾಗಿದೆ. ಇದು ಮಧ್ಯಕಾಲೀನ ಯುಗ ಅಲ್ಲ. ಭಾರತದ ಹಲವು ಬಹುಸಂಖ್ಯಾತ ಸಮುದಾಯಕ್ಕೆ ರಾಮನ ಹೆಸರು ಪವಿತ್ರ. ದೇಶದ ಪ್ರಧಾನಿಯಾಗಿರುವ ನೀವು ರಾಮನ ಹೆಸರನ್ನು ಅಪವಿತ್ರಗೊಳಿಸುವುದಕ್ಕೆ ಅಂತ್ಯ ಹಾಡಬೇಕು’’ ಎಂದು ಅವರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X