Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಿರಿಯ ಆಗಮಶಾಸ್ತ್ರಜ್ಞ, ಕೋಟ...

ಹಿರಿಯ ಆಗಮಶಾಸ್ತ್ರಜ್ಞ, ಕೋಟ ಲಕ್ಷ್ಮೀನಾರಾಯಣ ಸೋಮಯಾಜಿ ನಿಧನ

ವಾರ್ತಾಭಾರತಿವಾರ್ತಾಭಾರತಿ24 July 2019 6:48 PM IST
share
ಹಿರಿಯ ಆಗಮಶಾಸ್ತ್ರಜ್ಞ, ಕೋಟ ಲಕ್ಷ್ಮೀನಾರಾಯಣ ಸೋಮಯಾಜಿ ನಿಧನ

ಬ್ರಹ್ಮಾವರ, ಜು. 24: ಹಿರಿಯ ಆಗಮಶಾಸ್ತ್ರಜ್ಞ ಬಾರಕೂರು ಮೂಡುಕೇರಿ ನಿವಾಸಿ ವೇ.ಮೂ.ಕೋಟ ಲಕ್ಷ್ಮೀನಾರಾಯಣ ಸೋಮಯಾಜಿ (98) ಹೃದಯಾಘಾತದಿಂದ ಬುಧವಾರ ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರು ಪುತ್ರ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥ ಡಾ. ಬಿ.ಎಂ.ಸೋಮಯಾಜಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.

ಕೋಟದಲ್ಲಿ ಜನಿಸಿದ ಸೋಮಯಾಜಿ ಅವರು ಆರಂಭದಲ್ಲಿ ಸಾಲಿಗ್ರಾಮ ದಲ್ಲಿದ್ದ ವಾಣಿವಿಲಾಸ ಸಂಸ್ಕೃತ ಪಾಠಶಾಲೆಯಲ್ಲಿ ಓದಿ, ಬಳಿಕ ಉಡುಪಿ ಸಂಸ್ಕೃತ ಕಾಲೇಜಿನಲ್ಲಿ ತರ್ಕ ಶಿರೋಮಣಿ ಪದವಿಯನ್ನು ಪಡೆದರು. ಪರಂಪರೆಯಾಗಿ ಬಂದ ಆಗಮಶಾಸ್ತ್ರವನ್ನು ಹಿರಿಯರಿಂದ ಓದಿಕೊಂಡವರು. ಹಿಂದಿ ಪ್ರವೀಣ ಪದವಿ ಪಡೆದ ಸೋಮಯಾಜಿ, ಧರ್ಮಶಾಸ್ತ್ರ ವಿಷಯವನ್ನು ಸ್ವಾಧ್ಯಾಯದಿಂದ ಕಲಿತು ಅದರಲ್ಲಿ ಅಧಿಕಾರವಾಣಿಯಿಂದ ಮಾತನಾಡಬಲ್ಲವರಾಗಿದ್ದರು. ಜ್ಯೋತಿಷ ಶಾಸ್ತ್ರವನ್ನೂ ಬಲ್ಲವರಾಗಿದ್ದರೂ, ಅದನ್ನು ವೃತ್ತಿಯಾಗಿ ಮಾಡಿಕೊಂಡಿ ರಲಿಲ್ಲ. ಹಿರಿಯ ವೇದ ಪಂಡಿತರಾಗಿದ್ದ ಸೋಮಯಾಜಿ ಅವರು ಪುರೋಹಿತರಾಗಿಯೂ, ಪರಿಸರದ ದೇವಸ್ಥಾನಗಳ ಅರ್ಚಕರಾಗಿಯೂ ಇದ್ದರು. ಅನೇಕ ಶಿಷ್ಯರಿಗೆ ವೇದ, ಆಗಮಾಸ್ತ್ರದ ಪಾಠಗಳನ್ನೂ ಹೇಳಿದ್ದರು.

ಬ್ರಹ್ಮಾವರದಿಂದ ಬೈಂದೂರುವರೆಗೆ, ಧಾರೇಶ್ವರ ಸಹಿತ ಉ.ಕ.ಜಿಲ್ಲೆ, ತೀರ್ಥಹಳ್ಳಿ ತಾಲೂಕಿನ ವಿವಿಧ ದೇವಸ್ಥಾನಗಳಿಗೆ ತಂತ್ರಿಗಳಾಗಿದ್ದ ಸೋಮಯಾಜಿ, ಅನೇಕ ದೇವಸ್ಥಾನಗಳ ಪುನಃಪ್ರತಿಷ್ಠೆ, ಬ್ರಹ್ಮಕಲಶೋತ್ಸವಗಳನ್ನು ನಡೆಸಿ ಅವುಗಳ ಅಭಿವೃದ್ಧಿಗೆ ಕಾರಣರಾಗಿದ್ದರು.

ಉಡುಪಿ ಶ್ರೀಕೃಷ್ಣಮಠ, ಶಿರಸಿ ಶ್ರೀಸ್ವರ್ಣವಲ್ಲೀ ಮಠಗಳಲ್ಲಿ ನಡೆದ ದೃಗ್ಗಣಿತ ಪಂಚಾಂಗ ಮತ್ತಿತರ ಗೋಷ್ಠಿಗಳಲ್ಲಿಯೂ ಪಾಲ್ಗೊಂಡಿದ್ದರು. 115 ವರ್ಷ ಇತಿಹಾಸದ ಉಡುಪಿ ಸಂಸ್ಕೃತ ಕಾಲೇಜಿನ ಅತಿ ಹಿರಿಯ ಹಳೆ ವಿದ್ಯಾರ್ಥಿ ಯಾಗಿದ್ದ ಸೋಮಯಾಜಿ ಅವರು ಶಾಸ್ತ್ರ ವಿಚಾರಗಳಲ್ಲಿ ನಿಷ್ಠುರವಾದಿಯಾಗಿ ಮತ್ತು ಅಧಿಕಾರಾಣಿಯಿಂದ ವಿಚಾರ ಮಂಡಿಸುತ್ತಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X