Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಐಎಂಎ ಬಹುಕೋಟಿ ಹಗರಣ: ಎಸ್‌ಐಟಿ ತನಿಖೆಯ...

ಐಎಂಎ ಬಹುಕೋಟಿ ಹಗರಣ: ಎಸ್‌ಐಟಿ ತನಿಖೆಯ ಪ್ರಗತಿ ವರದಿ ನೀಡಲು ಸರಕಾರಕ್ಕೆ ಹೈಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ24 July 2019 9:39 PM IST
share
ಐಎಂಎ ಬಹುಕೋಟಿ ಹಗರಣ: ಎಸ್‌ಐಟಿ ತನಿಖೆಯ ಪ್ರಗತಿ ವರದಿ ನೀಡಲು ಸರಕಾರಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು, ಜು.24: ಐಎಂಎ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಇಲ್ಲಿಯವರೆಗೆ ನಡೆಸಿರುವ ತನಿಖೆಯ ಪ್ರಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಜು.30ರೊಳಗೆ ಸಲ್ಲಿಸಬೇಕೆಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶಿಸಿದೆ.

ಈ ಕುರಿತು ಐಎಂಎ ಹಗರಣವನ್ನು ಸಿಬಿಐ ತನಿಖೆಗೆ ಕೋರಿ ಸಲ್ಲಿಸಲಾಗಿರುವ ಮೂರು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಐಎಂಎ ಕಂಪೆನಿಯ ಆಸ್ತಿ ಜಪ್ತಿ ಕ್ರಮ ಕೈಗೊಳ್ಳಲು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳು ಬೆಂಗಳೂರು ವಲಯದ ಪ್ರಾದೇಶಿಕ ಆಯುಕ್ತ ಅವರನ್ನು ಸಕ್ಷಮ ಪ್ರಾಧಿಕಾರವಾಗಿ ನೇಮಕ ಮಾಡಲಾಗಿದೆ ಎಂದು ಸರಕಾರದ ಪರ ವಕೀಲರು ಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು ಯಾವ ಅರ್ಹತೆಗಳ ಆಧಾರದ ಮೇಲೆ ಪ್ರಾದೇಶಿಕ ಆಯುಕ್ತರನ್ನು ನೇಮಕ ಮಾಡಿದ್ದೀರಿ. ನಾಲ್ಕು ತಿಂಗಳುಗಳಿಂದ ಏಕೆ ಸಕ್ಷಮ ಪ್ರಾಧಿಕಾರವನ್ನು ರಚನೆ ಮಾಡಿಲ್ಲ ಎಂದು ಪ್ರಶ್ನಿಸಿತು.

ಐಎಂಎ ಪ್ರಕರಣದಲ್ಲಿ ಬೆಂಗಳೂರು ನಗರದ ಜಿಲ್ಲಾಧಿಕಾರಿ ಅವರನ್ನು ಸಕ್ಷಮ ಪ್ರಾಧಿಕಾರವನ್ನಾಗಿ ನೇಮಕ ಮಾಡಲಾಗಿತ್ತು. ಆದರೆ, ಅವರ ಹೆಸರೆ ಐಎಂಎ ಪ್ರಕರಣದಲ್ಲಿ ಕೇಳಿ ಬಂತು. ಹೀಗಾಗಿ, ಹೊಸದಾಗಿ ಸಕ್ಷಮ ಪ್ರಾಧಿಕಾರವಾಗಿ ಯಾರನ್ನೂ ನೇಮಕ ಮಾಡಿರಲಿಲ್ಲ. ಈಗ ನೇಮಕವಾಗಿರುವ ಪ್ರಾದೇಶಿಕ ಆಯುಕ್ತರು ಭ್ರಷ್ಟಾಚಾರ ರಹಿತರು, ಇವರ ವಿರುದ್ಧ ಯಾವುದೇ ಆರೋಪಗಳೂ ಇಲ್ಲ ಎಂದು ಪೀಠಕ್ಕೆ ತಿಳಿಸಿದರು.

ಐಎಂಎ ಹಗರಣವನ್ನು ಏಕೆ ಸಿಬಿಐ ತನಿಖೆಗೆ ಆದೇಶಿಸಬಾರದು ಎಂದು ಸರಕಾರದ ಪರ ವಕೀಲರನ್ನು ಪ್ರಶ್ನಿಸಿದ ನ್ಯಾಯಪೀಠವು ಇದೊಂದು ದೊಡ್ಡ ಹಗರಣವಾಗಿದೆ. ಹೀಗಾಗಿ, ಬೆಂಗಳೂರು ನಗರಕ್ಕೆ ಜಿಲ್ಲಾಧಿಕಾರಿಯ ನೇಮಕವಾಗಲಿ. ಅಲ್ಲದೆ, ಐಎಂಎಗೆ ಬಂಡವಾಳ ಹೂಡಿರುವ ಗ್ರಾಹಕರಿಗೆ ಭದ್ರತೆ ಒದಗಿಸಬೇಕೆಂದು ನ್ಯಾಯಪೀಠವು ತಿಳಿಸಿತು. ಐಎಂಎಗೆ ಹಣ ಹೂಡಿಕೆ ಮಾಡಿರುವ ಗ್ರಾಹಕರ ಹಣವನ್ನು ಆಡಿಟ್ ಮಾಡಬೇಕೆಂದು ಆದೇಶಿಸಿತು. ಅಲ್ಲದೆ, ಐಎಂಎಗೆ ಸಂಬಂಧಿಸಿದಂತೆ ಎಸ್‌ಐಟಿ ನಡೆಸಿರುವ ತನಿಖೆಯ ಪ್ರಗತಿ ವರದಿಯನ್ನು ಜು.30ರೊಳಗೆ ಸಲ್ಲಿಸಲು ಆದೇಶಿಸಿತು. ಅರ್ಜಿದಾರರ ಪರವಾಗಿ ವಕೀಲರಾದ ಮುಹಮ್ಮದ್ ತಾಹೀರ್, ಆರ್.ಕೋತ್ವಾಲ್, ಜಿ.ಆರ್.ಮೋಹನ್ ವಾದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X