Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜನತೆಗೆ ದ್ರೋಹ ಮಾಡಿದ ಶಾಸಕರನ್ನು...

ಜನತೆಗೆ ದ್ರೋಹ ಮಾಡಿದ ಶಾಸಕರನ್ನು ಅನರ್ಹಗೊಳಿಸಿ: ಆಮ್ ಆದ್ಮಿ ನಾಯಕ ಮೋಹನ್ ದಾಸರಿ

ವಾರ್ತಾಭಾರತಿವಾರ್ತಾಭಾರತಿ24 July 2019 9:54 PM IST
share
ಜನತೆಗೆ ದ್ರೋಹ ಮಾಡಿದ ಶಾಸಕರನ್ನು ಅನರ್ಹಗೊಳಿಸಿ: ಆಮ್ ಆದ್ಮಿ ನಾಯಕ ಮೋಹನ್ ದಾಸರಿ

ಬೆಂಗಳೂರು, ಜು.24: ಬಿಜೆಪಿಯು ಅತೃಪ್ತರು ಎಂದು ಹೇಳಲಾಗುತ್ತಿರುವ ಶಾಸಕರನ್ನು ವಾಮಮಾರ್ಗದಿಂದ ಕೊಂಡುಕೊಂಡು ಅನೈತಿಕವಾಗಿ ಸರಕಾರವನ್ನು ರಚಿಸುವ ತರಾತುರಿಗೆ ಮುಂದಾಗಿದೆ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬಿಜೆಪಿಗೂ ಅತೃಪ್ತರ ಗೈರಿನಿಂದಾಗಿ ಇಂದು ಸರಕಾರವನ್ನು ರಚಿಸಲು ಅವಕಾಶವಿದ್ದರೂ, ರಾಜ್ಯ ವಿಧಾನಸಭೆಯ ಒಟ್ಟೂ ಶಾಸಕರ ಅಧಾರದ ಮೇಲೆ ಬಹುಮತವಿಲ್ಲ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಅವರು ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ನಡೆದ ಸಂದರ್ಭದಲ್ಲಿ ರಾಜ್ಯಪಾಲರು ಸರಕಾರ ರಚನೆ ಮಾಡಲು ಬಿಜೆಪಿಗೆ ಮೊದಲ ಅವಕಾಶ ನೀಡಿದ್ದರೂ, ಸಂಖ್ಯಾಬಲವನ್ನು ತೋರಿಸಲಾಗದೆ ಹಿಂದೆ ಸರಿದಿತ್ತು. ಅದರೆ, ಕುದುರೆ ವ್ಯಾಪಾರದ ಮೂಲಕ ಮತ್ತೆ ಸರಕಾರ ರಚಿಸಲು ಮುಂದಾಗಿದೆ ಎಂದು ಮೋಹನ್ ದಾಸರಿ ಕಿಡಿಗಾರಿದ್ದಾರೆ.

ಟಿಕೆಟ್ ಕೊಟ್ಟು ಗೆಲ್ಲಿಸಿ, ವಿಧಾನಸೌಧಕ್ಕೆ ಕರೆತಂದ ಪಕ್ಷಕ್ಕೆ ನಿಷ್ಠರಾಗಿರದ ಅತೃಪ್ತರೆಂಬ ಹಣೆಪಟ್ಟಿ ಕಟ್ಟಿಕೊಂಡಿರುವ ಶಾಸಕರು ಸದನಕ್ಕೆ ಕೆಟ್ಟ ಹೆಸರು ತಂದಿದ್ದು, ಸ್ಪೀಕರ್ ಕಾರ್ಯ ನಿರ್ವಹಣೆಯ ಬಗ್ಗೆಯೂ ಮಾಧ್ಯಮಗಳಲ್ಲಿ ಅನುಚಿತ ಆಕ್ಷೇಪಗಳನ್ನು ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಅನುದಾನ ಹಂಚಿಕೆಯಲ್ಲಿ ತಮ್ಮ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡದೆ ತಮಗೆ ಅನ್ಯಾಯ ಮಾಡಿದ್ದಾರೆ ಎಂಬುದು ಅತೃಪ್ತ ಶಾಸಕರು ರಾಜೀನಾಮೆಗೆ ನೀಡಿರುವ ಪ್ರಮುಖ ಕಾರಣಗಳಲ್ಲೊಂದು. ಹಾಗಿದ್ದರೆ ಜನರ ಮಧ್ಯೆ ಇದ್ದು ಹೋರಾಡುವ ಬದಲು ದೂರದ ಮುಂಬೈಗೆ ಹಾರಿ ಅಲ್ಲಿ ಠಿಕಾಣಿ ಹೂಡಿರುವುದೇಕೆ ಎಂಬ ಅನುಮಾನ ಹುಟ್ಟಿದೆ ಎಂದು ಮೋಹನ್ ದಾಸರಿ ಪ್ರಶ್ನಿಸಿದ್ದಾರೆ.

ಅಲ್ಲದೆ ಶಾಸಕರ ಈ ಆರೋಪಗಳಿಗೆ ನಿನ್ನೆ ಸದನದಲ್ಲಿ ಉತ್ತರಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಆಯಾ ಕ್ಷೇತ್ರಗಳ ಅಭಿವೃದ್ಧಿಗಾಗಿ ಎಷ್ಟು ಅನುದಾನ ಕೊಡಲಾಗಿದೆ ಎಂಬುದರ ಬಗ್ಗೆ ದಾಖಲೆ ನೀಡಿದ್ದಾರೆ. ಹಾಗಾಗಿ ಅತೃಪ್ತರು ಮಾಡಿರುವ ಈ ಆರೋಪ ಸುಳ್ಳು ಎಂಬುದು ಸಾಬೀತಾಗಿದೆ ಎಂದು ಅವರು ತಿಳಿಸಿದ್ದಾರೆ.

ಅತೃಪ್ತ ಶಾಸಕರು ತಮ್ಮ ರಾಜೀನಾಮೆಗೆ ಸೂಕ್ತ ಕಾರಣಗಳನ್ನು ನೀಡಿಲ್ಲ. ಅಲ್ಲದೆ, ಬಾಹ್ಯ ಒತ್ತಡಗಳು ಮತ್ತು ಅಧಿಕಾರ ಲಾಲಸೆಯಿಂದ ರಾಜೀನಾಮೆ ನೀಡಿದ್ದಾರೆ. ಇಂತಹ ಖೂಳರನ್ನು ಶಾಸಕರಾಗಿ ಆರಿಸಿದ್ದಕ್ಕಾಗಿ ಜನ ಪಶ್ಚಾತಾಪ ಪಟ್ಟು ತಲೆ ಚಚ್ಚಿಕೊಳ್ಳುತ್ತಿದ್ದಾರೆ. ರಾಜ್ಯದ ಜನತೆಗೆ ದ್ರೋಹ ಮಾಡಿ, ರಾಜ್ಯ ರಾಜಕಾರಣಕ್ಕೆ ಕಪ್ಪುಚುಕ್ಕೆ ತಂದಿಟ್ಟಿರುವ ಶಾಸಕರನ್ನು ಅನರ್ಹಗೊಳಿಸಬೇಕೆಂದು ಸ್ಪೀಕರ್‌ಗೆ ಮೋಹನ್ ದಾಸರಿ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X