Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಸಕ್ತ ವರ್ಷಾಂತ್ಯದೊಳಗೆ ಬಿಬಿಎಂಪಿ...

ಪ್ರಸಕ್ತ ವರ್ಷಾಂತ್ಯದೊಳಗೆ ಬಿಬಿಎಂಪಿ ಶಾಲೆಗಳಲ್ಲಿ ಸ್ಮಾರ್ಟ್‌ಕ್ಲಾಸ್‌ಗಳ ಆರಂಭ !

ವಾರ್ತಾಭಾರತಿವಾರ್ತಾಭಾರತಿ24 July 2019 10:33 PM IST
share
ಪ್ರಸಕ್ತ ವರ್ಷಾಂತ್ಯದೊಳಗೆ ಬಿಬಿಎಂಪಿ ಶಾಲೆಗಳಲ್ಲಿ ಸ್ಮಾರ್ಟ್‌ಕ್ಲಾಸ್‌ಗಳ ಆರಂಭ !

ಬೆಂಗಳೂರು, ಜು.24: ಬೃಹತ್ ಬೆಂಗಳೂರು ಮಹಾ ನಗರ ವ್ಯಾಪ್ತಿಯಲ್ಲಿನ ಸರಕಾರಿ ಪ್ರೌಢಶಾಲೆ ಹಾಗೂ ಪಿಯುಸಿ ಕಾಲೇಜುಗಳಲ್ಲಿ ಪ್ರಸಕ್ತ ವರ್ಷದ ವರ್ಷಾಂತ್ಯದೊಳಗೆ ಸ್ಮಾರ್ಟ್ ಕ್ಲಾಸ್‌ಗಳನ್ನು ಆರಂಭಿಸಲು ಬಿಬಿಎಂಪಿ ಮುಂದಾಗಿದೆ.

ಪಾಲಿಕೆಯ ವ್ಯಾಪ್ತಿಯ ಶಾಲಾ-ಕಾಲೇಜುಗಳನ್ನು ಮೇಲ್ದರ್ಜೆಗೇರಿಸುವ ಉದ್ದೇಶದಿಂದ ಮೆಕ್ರೋಸಾಫ್ಟ್ ಹಾಗೂ ಟೆಕ್ ಆವಂತ್ ಕಂಪನಿಯ ಸಹಯೋಗದೊಂದಿಗೆ ಬಿಬಿಎಂಪಿ ರೂಪಿಸಿದ್ದ ರೋಶಿನಿ ಯೋಜನೆಗೆ ಹಿಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಳೆದ ಸೆಪ್ಟಂಬರ್‌ನಲ್ಲಿ ಚಾಲನೆ ನೀಡಿದ್ದರು. ಈ ನಿಟ್ಟಿನಲ್ಲಿ ಎಲ್ಲೆಡೆ ಕ್ರಿಯಾ ಯೋಜನೆ ಅನುಷ್ಠಾನ ನಡೆಯುತ್ತಿದ್ದು, 10 ತಿಂಗಳ ಅವಧಿಯಲ್ಲಿ ಪಾಲಿಕೆಯ ಸರಕಾರಿ ಶಾಲಾ-ಕಾಲೇಜು ಶಿಕ್ಷಕರಿಗೆ 5-6 ಬಾರಿ ತರಬೇತಿಯನ್ನೂ ನೀಡಲಾಗಿದೆ. ಅಲ್ಲದೆ, ಎಲ್ಲೆಡೆ ಸ್ಮಾರ್ಟ್ ಕ್ಲಾಸ್‌ಗಳಾಗಿ ಪರಿವರ್ತಿಸಲು ಕೆಲಸ ನಡೆಯುತ್ತಿದೆ.

ನಗರದ ವ್ಯಾಪ್ತಿಯಲ್ಲಿನ 91 ಶಿಶುವಿಹಾರಗಳು, 15 ಪ್ರಾಥಮಿಕ ಶಾಲೆ, 34 ಪ್ರೌಢಶಾಲೆ, 14 ಪದವಿ ಪೂರ್ವ ಕಾಲೇಜು, 4 ಪದವಿ ಕಾಲೇಜುಗಳನ್ನು ಬಿಬಿಎಂಪಿ ನಿರ್ವಹಿಸುತ್ತಿದೆ. ಅದರಲ್ಲಿ ಮೈಕ್ರೋಸ್‌ಟಾ ಮತ್ತು ಟೆಕ್ ಅವಂತ್ ಕಂಪನಿ ಪ್ರಸ್ತುತ 34 ಪ್ರೌಢಶಾಲೆ, 14 ಪದವಿ ಪೂರ್ವ ಕಾಲೇಜುಗಳಲ್ಲಿ ಸ್ಮಾರ್ಟ್‌ಕ್ಲಾಸ್‌ಗಳಾಗಿ ಪರಿವರ್ತಿಸಲಿದ್ದಾರೆ.

ಪ್ರೌಢಶಾಲೆಗಳಲ್ಲಿ 2,031 ಬಾಲಕರು 3,036 ಬಾಲಕಿಯರಿದ್ದಾರೆ. 14 ಪದವಿ ಪೂರ್ವ ಕಾಲೇಜುಗಳಲ್ಲಿ 765 ವಿದ್ಯಾರ್ಥಿಗಳು ಹಾಗೂ 3,620 ವಿದ್ಯಾರ್ಥಿನಿಯರು ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ಇದೀಗ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗಳಲ್ಲಿನ ತರಗತಿ ಸ್ಮಾರ್ಟ್ ಕ್ಲಾಸ್ ಆಗಲಿದ್ದು, ಒಟ್ಟಾರೆ 9,452 ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ ಎಂದು ಅಂದಾಜಿಸಲಾಗಿದೆ.

ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಮೇ 10ರಂದು ಪಾಲಿಕೆ ವ್ಯಾಪ್ತಿಯ ಶಾಲಾ-ಕಾಲೇಜುಗಳನ್ನು ರೋಶಿನಿ ಶಿಕ್ಷಣ ಯೋಜನೆಯಡಿ ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸಲು ನಡೆದ ಸಭೆಯಲ್ಲಿ ಸುಸಜ್ಜಿತ ಕಟ್ಟಡ ಒದಗಿಸುವ ಭರವಸೆ ನೀಡಿದ್ದರು. ಆ ಬಳಿಕ ಸ್ಮಾರ್ಟ್‌ಕ್ಲಾಸ್ ಸೇರಿದಂತೆ ವಿವಿಧ ಆಯಾಮಗಳಲ್ಲಿ ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಟೆಕ್ ಅವಂತ್ ಸಂಸ್ಥೆಯ ಅಲಿಸೇಠ್ ಹೇಳಿದ್ದಾರೆ.

ವರ್ಷಾಂತ್ಯದಲ್ಲಿ ಏನೆಲ್ಲ ಅಭಿವೃದ್ಧಿಯಾಗಲಿದೆ?: ಎಲ್ಲ ಶಾಲೆಗಳಿಗೆ ಸೋಲಾರ್ ಪ್ಯಾನಲ್ ಅಳವಡಿಕೆ, 1 ಸಾವಿರಕ್ಕೂ ಅಧಿಕ ಸಿಸಿ ಕ್ಯಾಮೆರಾ ಅಳವಡಿಕೆ, ಸರಕಾರಿ ಶಾಲಾ-ಕಾಲೇಜುಗಳ ಶಿಕ್ಷಕರಿಗೆ ತರಬೇತಿ ನೀಡುವ ಮೂಲಕ ಸ್ಮಾರ್ಟ್‌ಕ್ಲಾಸ್‌ಗಳಾಗಿ ಪರಿವರ್ತನೆ ಮಾಡಲು ಕಾರ್ಯ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯ ಸರಕಾರಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಅಲ್ಲಲ್ಲಿ ಸಣ್ಣಪುಟ್ಟ ರಿಪೇರಿ ಕೆಲಸಗಳಿವೆ. ಅವುಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅದಾದ ಬಳಿಕ ಶಾಲಾ-ಕಾಲೇಜುಗಳನ್ನು ಮೈಕ್ರೋಸಾಫ್ಟ್ ಹಾಗೂ ಟೆಕ್ ಅವಂತ್ ಸಂಸ್ಥೆಗಳಿಗೆ ಬಿಟ್ಟುಕೊಡಲಾಗುವುದು. ಅವರು ಅದನ್ನು ಮೇಲ್ದರ್ಜೆಗೇರಿಸಲಿದ್ದಾರೆ.

-ಗಂಗಾಂಬಿಕೆ ಮಲ್ಲಿಕಾರ್ಜುನ್, ಮೇಯರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X