Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಉರಿ’ ಚಿತ್ರದ ಉಚಿತ ಪ್ರದರ್ಶನ:...

‘ಉರಿ’ ಚಿತ್ರದ ಉಚಿತ ಪ್ರದರ್ಶನ: ಮಹಾರಾಷ್ಟ್ರ ಸರಕಾರದ ಆದೇಶಕ್ಕೆ ಥಿಯೇಟರ್‌ಗಳ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ25 July 2019 8:07 PM IST
share
‘ಉರಿ’ ಚಿತ್ರದ ಉಚಿತ ಪ್ರದರ್ಶನ: ಮಹಾರಾಷ್ಟ್ರ ಸರಕಾರದ ಆದೇಶಕ್ಕೆ ಥಿಯೇಟರ್‌ಗಳ ಆಕ್ಷೇಪ

 ಮುಂಬೈ,ಜು.25: ಜು.26ರಂದು ಕಾರ್ಗಿಲ್ ದಿವಸ್ ಆಚರಣೆಯ ಅಂಗವಾಗಿ ‘ಉರಿ:ದಿ ಸರ್ಜಿಕಲ್ ಸ್ಟ್ರೈಕ್’ ಚಿತ್ರವನ್ನು ಉಚಿತವಾಗಿ ಪ್ರದರ್ಶಿಸುವಂತೆ ಮಹಾರಾಷ್ಟ್ರ ಸರಕಾರದ ಆದೇಶಕ್ಕೆ ಮುಂಬೈನ ಥಿಯೇಟರ್‌ಗಳ ಮಾಲಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರವಾದವನ್ನು ಹರಡಲು ರಾಜ್ಯಾದ್ಯಂತ 500ಕ್ಕೂ ಅಧಿಕ ಚಲನಚಿತ್ರ ಮಂದಿರಗಳಲ್ಲಿ ’ಉರಿ’ ಚಿತ್ರದ ವಿಶೇಷ ಪ್ರದರ್ಶನಗಳನ್ನು ಮಹಾರಾಷ್ಟ್ರ ಸರಕಾರವು ಯೋಜಿಸಿದೆ ಎಂದು ಸುದ್ದಿಸಂಸ್ಥೆಯು ವರದಿ ಮಾಡಿದೆ.

ತಮಗೆ ಸರಕಾರದ ಆದೇಶ ಬಂದಿರುವುದನ್ನು ಮುಂಬೈ ಮತ್ತು ಪುಣೆಗಳಲ್ಲಿಯ ಥಿಯೇಟರ್ ‌ಗಳ ಮಾಲಿಕರು ಖಚಿತ ಪಡಿಸಿದ್ದಾರೆ. ತಮ್ಮ ಗುರುತು ಚೀಟಿಗಳೊಂದಿಗೆ ಬರುವ ಕಾಲೇಜು ವಿದ್ಯಾರ್ಥಿಗಳು ಮತ್ತು ಮಾಜಿ ರಕ್ಷಣಾ ಸಿಬ್ಬಂದಿಗಾಗಿ ಜು.26ರಂದು ಬೆಳಿಗ್ಗೆ ಹತ್ತು ಗಂಟೆಗೆ ‘ಉರಿ’ ಚಿತ್ರ ಪ್ರದರ್ಶನವನ್ನು ಏರ್ಪಡಿಸುವಂತೆ ನಿರ್ದೇಶ ನೀಡಲಾಗಿದೆ ಎಂದು ಜಿ7 ಮಲ್ಟಿಪ್ಲೆಕ್ಸ್ ಮತ್ತು ಮರಾಠಾ ಮಂದಿರದ ಕಾರ್ಯಕಾರಿ ನಿರ್ದೇಶಕ ಮನೋಜ ದೇಸಾಯಿ ತಿಳಿಸಿದರು.

ಚಿತ್ರದ ಪ್ರದರ್ಶನವು ರಕ್ಷಣಾ ಪಡೆಗಳಿಗೆ ಸೇರುವಂತೆ ಯುವಜನರನ್ನು ಪ್ರೇರೇಪಿಸಲು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಉಪಕ್ರಮವಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ ಎಂದ ಅವರು, “ನಾವೂ ದೇಶಭಕ್ತರಾಗಿದ್ದೇವೆ”. ಆದರೆ ಅಧಿಕಾರಿಗಳು ‘ದೇಶಭಕ್ತಿ’ಯನ್ನು ಜಾರಿಗೊಳಿಸಲು ಇದು ಸೂಕ್ತ ಮಾರ್ಗವೇ ಎಂದು ಪ್ರಶ್ನಿಸಿದರು.

“ನಮ್ಮ ಯೋಧರ ಬಲಿದಾನವನ್ನು ಸ್ಮರಿಸುವುದು ಮತ್ತು ವಿಜಯದ ಆಚರಣೆ ನಮ್ಮ ರಾಷ್ಟ್ರೀಯ ಕರ್ತವ್ಯವಾಗಿದೆ’ ಎಂದು ಹೇಳಿದ ಮುಂಬೈ ಉಪನಗರ ಜಿಲ್ಲಾಧಿಕಾರಿ ಮಿಲಿಂದ ಬೋರಿಕರ್ ಅವರು,ಇನ್ನು ಚಿತ್ರ ಪ್ರದರ್ಶನದ ಮೇಲೆ ವಿಧಿಸಲಾಗುವ ಜಿಎಸ್‌ಟಿ ಮರಳಿಕೆಗೆ ಸಂಬಂಧಿಸಿದಂತೆ ನಾವು ಸರಕಾರದೊಂದಿಗೆ ಚರ್ಚಿಸುತ್ತೇವೆ ಎಂದು ತಿಳಿಸಿದರು.

ಜು.26ರಂದು ಬೆಳಿಗ್ಗೆ ‘ಉರಿ’ ಪ್ರದರ್ಶನಕ್ಕಾಗಿ ಮಲ್ಟಿಪ್ಲೆಕ್ಸ್‌ಗಳ ಎಲ್ಲ ಪರದೆಗಳನ್ನೂ ಮೀಸಲಿಡಬೇಕು ಎನ್ನುವುದನ್ನು ನಿರಾಕರಿಸಿದ ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಚಾಪಾಳ್ಕರ್ ಅವರು,ಕೇವಲ ಒಂದು ತೆರೆಯನ್ನು ಮೀಸಲಿಡುವಂತೆ ಸೂಚಿಸಲಾಗಿದೆ. ಸರಕಾರವು ಇದೇ ಮೊದಲ ಬಾರಿಗೆ ಇಂತಹ ಕೋರಿಕೆಯನ್ನು ಮಾಡಿಕೊಂಡಿರುವುದರಿಂದ ಆಕ್ಷೇಪಿಸದಿರಲು ನಾವು ನಿರ್ಧರಿಸಿದ್ದೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X