Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಲ ನಿವಾಸಿಗಳಿಗೆ ಕುಕ್ಕೆ ದೇವಳದ ಹಕ್ಕು...

ಮೂಲ ನಿವಾಸಿಗಳಿಗೆ ಕುಕ್ಕೆ ದೇವಳದ ಹಕ್ಕು ಕೊಡಿ: ಭಾಸ್ಕರ ಬೆಂಡೋಡಿ

ವಾರ್ತಾಭಾರತಿವಾರ್ತಾಭಾರತಿ25 July 2019 10:49 PM IST
share

ಪುತ್ತೂರು : ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಮೂಲ ನಿವಾಸಿಗಳಿಗೆ ಪಾರಂಪರಿಕ ಹಕ್ಕು ನೀಡಬೇಕು. ಕುಕ್ಕೆ ಮೂಲ ದೇವಾಲಯವಾದ ಆದಿಸುಬ್ರಾಯ ದೇವಾಲಯವನ್ನು ಹಕ್ಕನ್ನು ಅಲ್ಲಿನ ಮೂಲ ನಿವಾಸಿಗಳಿಗೆ ಬಿಟ್ಟುಕೊಡಬೇಕು ಎಂದು ಬಿರ್ಸಾ ಮುಂಡಾ ಡ್ರೈಬಲ್ಸ್ ಕಮ್ಯುನಿಟಿ ಡೆವಲಪ್‍ಮೆಂಟ್ ಟ್ರಸ್ಟ್ ರಾಜ್ಯಾಧ್ಯಕ್ಷ ಬಿ.ಕೆ. ಭಾಸ್ಕರ ಬೆಂಡೋಡಿ ಆಗ್ರಹಿಸಿದ್ದಾರೆ.

ಅವರು ಗುರುವಾರ ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಹಳೆಯ ದಾಖಲೆಯಾದ ಅಡೆಂಗಲ್‍ನಲ್ಲಿ ಕುಕ್ಕೇಪುರ ಸುಬ್ರಾಯ ದೇವಳ ಎಂದಿರುವುದನ್ನು ಕುಕ್ಕೇ ಸುಬ್ರಹ್ಮಣ್ಯ ಎಂದು ಬದಲಾಯಿಸಿರುವುದು ಯಾರೆಂಬುದು ನಿಗೂಢವಾಗಿದೆ. 1904ರ ಮದ್ರಾಸ್ ಸರ್ಕಾರದ ಸರ್ವೆ ಸಟ್ಲಾಮೆಂಟ್ ದಾಖಲೆಯಲ್ಲಿ ಸುಬ್ರಾಯ ದೇವರು ಎಂದೇ ದಾಖಲಾಗಿದೆ. 1954ರಲ್ಲಿ ಜಿಲ್ಲಾ ನ್ಯಾಯಾಲಯದ ಆದೇಶ ಪತ್ರದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಎಂಬ ಹೆಸರು ಉಲ್ಲೇಖ ಮಾಡಲಾಗಿದೆ .ಆದರೆ ಇದಕ್ಕೆ ಸಂಬಂಧಿಸಿದ ಮಾಹಿತಿ ಹಕ್ಕಿನಡಿ ವಿಚಾರಿಸಿದಾಗ ಯಾವುದೇ ದಾಖಲೆಗಳು ಮುಜರಾಯಿ ಇಲಾಖೆಯಲ್ಲಾಗಲೀ, ದೇವಳದ ಆಡಳಿತ ವಿಭಾಗದಲ್ಲಾಗಲೀ ಕಂಡುಬರುತ್ತಿಲ್ಲ ಎಂದರು.

ಆದಿಸುಬ್ರಾಯ ದೇವಾಲಯ ಮೂಲತಃ ಅಲ್ಲಿನ ಮೂಲನಿವಾಸಿಗಳ ಪಾರಂಪರಿಕ ಹಕ್ಕಿನ ಜಾಗ. ಆದರೆ ಮೂಲನಿವಾಸಿಗಳಿಗೆ ಆ ಹಕ್ಕು ನೀಡದೆ, ಆಡಳಿತ ವ್ಯವಸ್ಥೆಯಲ್ಲಿ ಅವಕಾಶ ಕೊಡದೆ ಮೂಲೆಗುಂಪು ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಈ ಬಗ್ಗೆ ಕಾನೂನು ಹೋರಾಟ ನಡೆಸಲಾಗುವುದು ಎಂದ ಅವರು ಕುಕ್ಕೇ ಸುಬ್ರಹ್ಮಣ್ಯ ದೇವಾಲಯದ ಕುರಿತು ಮಾಹಿತಿ ಹಕ್ಕಿನಲ್ಲಿ ಕೇಳಿದರೆ ದಾಖಲೆ ಇಲ್ಲ ಎಂಬ ಉತ್ತರ ಧಾರ್ಮಿಕ ದತ್ತಿ ಇಲಾಖೆಯಿಂದ ಸಿಗುತ್ತಿದೆ. ಕುಕ್ಕೇಪುರ ಎಂಬುವುದಕ್ಕೆ ದಾಖಲೆ ಇದೆ. ಕುಕ್ಕೇ ಸುಬ್ರಹ್ಮಣ್ಯ ಎಂಬುವುದಕ್ಕೆ ಯಾವುದೇ ದಾಖಲೆ ಇಲ್ಲ ಎಂದ ಅವರು  ಕ್ಷೇತ್ರದ ಸಂಪ್ರದಾಯಗಳ ಮೇಲೆ ಮುಜರಾಯಿ ಇಲಾಖೆ ಕಾನೂನಿನ ಮೂಲಕ ಬದಲಾವಣೆ ಮಾಡಿರುವುದು ಪಾರಂಪರಿಕ ಭಕ್ತರ ಧಾರ್ಮಿಕ ಹಕ್ಕುಗಳ ಮೇಲೆ ನಡೆಸಿದ ದೌರ್ಜನ್ಯವಾಗಿದೆ ಎಂದು ಆರೋಪಿಸಿದರು.

ಮುಜರಾಯಿ ಇಲಾಖೆಯ ವ್ಯಾಪ್ತಿಗೊಳಪಟ್ಟ ದೇವಾಲಯಗಳಲ್ಲಿ ಸರ್ಪಸಂಸ್ಕಾರಕ್ಕೆ ಒಂದೊಂದು ಕಡೆಗಳಲ್ಲಿ ಒಂದೊಂದು ರೀತಿಯ ಶುಲ್ಕ ವಿಧಿಸಲಾಗುತ್ತಿದೆ. ಕುಕ್ಕೇ ಸುಬ್ರಹ್ಮಣ್ಯದಲ್ಲಿ ರೂ.3200, ಕುಡುಪು ಅನಂತ ಪದ್ಮನಾಭ ದೇವಾಲಯದಲ್ಲಿ ರೂ.8500 ಶುಲ್ಯ ವಿಧಿಸಲಾಗುತ್ತಿದೆ. ಘಾಟಿ ಸುಬ್ರಹ್ಮಣ್ಯ ದೇವಳದಲ್ಲಿ ರೂ.17 ಸಾವಿರ ಎಂದು ಸೇವಾ ಪಟ್ಟಿಯಲ್ಲಿದೆ. ಎಲ್ಲಾ ದೇವಾಲಗಳಲ್ಲಿಯೂ ಸರ್ಪಸಂಸ್ಕಾರದ ಪೂಜಾ ವಿಧಾನ ಒಂದೇ ರೀತಿಯಾಗಿದ್ದರೂ ಶುಲ್ಕದಲ್ಲಿ ಅಜಗಜಾಂತರ ವ್ಯತ್ಯಾಸವಿದ್ದು, ಸರ್ವ ಸಂಸ್ಕಾರದಲ್ಲಿ ಭಕ್ತರನ್ನು ವಂಚಿಸುವ ಮೂಲಕ ಧಾರ್ಮಿಕ ಶೋಷಣೆ ನಡೆಸಲಾಗುತ್ತಿದೆ ಎಂದು ಆರೋಪಿಸಿದರು. 

ಕುಡುಪು ದೇವಳದಲ್ಲಿ 4 ದಿನಗಳ ಸರ್ಪಸಂಸ್ಕಾರ ಸೇವೆ ನಡೆಸಲಾಗುತ್ತಿದೆ.ಆದರೆ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಈ ಹಿಂದೆ 4 ದಿನಗಳ ಕಾಲ ನಡೆಸುತ್ತಿದ್ದ ಸರ್ಪ ಸಂಸ್ಕಾರ ಸೇವೆಯನ್ನು ಪ್ರಸ್ತುತ 2 ದಿನಗಳಲ್ಲಿ ಮುಗಿಸಲಾಗುತ್ತಿದೆ. ಧಾರ್ಮಿಕ ವಿಧಿವಿಧಾನಗಳ ಆಚರಣೆಯಲ್ಲೂ ಮುಜರಾಯಿ ದೇವಾಲಯಗಳಲ್ಲಿ ಏಕರೂಪದ ನಿಯಮ ಕಂಡುಬರುತ್ತಿಲ್ಲ ಎಂದ ಅವರು  ದೋಷಪೂರಿತ ಈ ವ್ಯವಸ್ಥೆಯನ್ನು ಬದಲಾಯಿಸಬೇಕು, ಒಂದೇ ರೀತಿಯ ನಿಯಮ ಜಾರಿಗೊಳಿಸುವ ಮೂಲಕ ಭಕ್ತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X