Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಅಧಿಕ ರಕ್ತದೊತ್ತಡ ತಡೆ ಮತ್ತು...

ಅಧಿಕ ರಕ್ತದೊತ್ತಡ ತಡೆ ಮತ್ತು ನಿಯಂತ್ರಣಕ್ಕೆ ಐದು ಆರೋಗ್ಯಕರ ಪಾನೀಯಗಳು

ವಾರ್ತಾಭಾರತಿವಾರ್ತಾಭಾರತಿ25 July 2019 11:03 PM IST
share
ಅಧಿಕ ರಕ್ತದೊತ್ತಡ ತಡೆ ಮತ್ತು ನಿಯಂತ್ರಣಕ್ಕೆ ಐದು ಆರೋಗ್ಯಕರ ಪಾನೀಯಗಳು

 ಭಾರತದಲ್ಲಿ ಪ್ರತಿ ಮೂವರ ಪೈಕಿ ಓರ್ವ ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುತ್ತಾನೆ ಎನ್ನುವುದು ನಿಮಗೆ ಗೊತ್ತೇ? ಉಪ್ಪು ಮತ್ತು ಅಧಿಕ ಸೋಡಿಯಂ ಇರುವ ಆಹಾರ ಸೇವನೆಯನ್ನು ಕಡಿಮೆ ಮಾಡುವಂತೆ ಅಧಿಕ ರಕ್ತದೊತ್ತಡ ರೋಗಿಗಳಿಗೆ ವೈದ್ಯರು ಆಗಾಗ್ಗೆ ಸಲಹೆ ನೀಡುತ್ತಿರುತ್ತಾರೆ. ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಔಷಧಿಗಳು ಹೆಚ್ಚು ನೆರವಾಗುತ್ತವೆಯಾದರೂ ಆರೋಗ್ಯಕರ ಆಹಾರ ಕ್ರಮವೂ ಅಚ್ಚರಿದಾಯಕ ಲಾಭಗಳನ್ನು ನೀಡುತ್ತದೆ. ಇದರ ಜೊತೆಗೆ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಮತ್ತು ಇತರ ಹಲವಾರು ಕಾಯಿಲೆಗಳ ಅಪಾಯಗಳನ್ನು ತಗ್ಗಿಸಬಲ್ಲ ಹಲವಾರು ಆರೋಗ್ಯಕರ ಪಾನೀಯಗಳಿವೆ. ಇಂತಹ ಐದು ಪಾನೀಯಗಳ ಕುರಿತು ಮಾಹಿತಿಯಿಲ್ಲಿದೆ.....

►ಕಡಿಮೆ ಕೊಬ್ಬು ಇರುವ ಹಾಲು

 ಪೊಟ್ಯಾಷಿಯಂ,ಕ್ಯಾಲ್ಸಿಯಂ,ವಿಟಾಮಿನ್ ಡಿ,ರಂಜಕ ಮತ್ತು ಇತರ ಹಲವಾರು ಪೋಷಕಾಂಶಗಳನ್ನು ಯಥೇಚ್ಛವಾಗಿ ಒಳಗೊಂಡಿರುವ ಹಾಲು ಆರೋಗ್ಯಕರ ಪಾನೀಯಗಳಲ್ಲೊಂದಾಗಿದೆ. ಪೂರ್ಣ ಪ್ರಮಾಣದಲ್ಲಿ ಕೊಬ್ಬು ಒಳಗೊಂಡಿರುವ ಹಾಲಿನ ಬದಲು ಕಡಿಮೆ ಕೊಬ್ಬು ಇರುವ ಹಾಲನ್ನು ಸೇವಿಸುವುದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದು. ಸಂಪೂರ್ಣ ಕೊಬ್ಬಿನಿಂದ ಕೂಡಿರುವ ಡೇರಿ ಉತ್ಪನ್ನಗಳು ರಕ್ತನಾಳಗಳಲ್ಲಿ ತಡೆಯನ್ನುಂಟು ಮಾಡುವ ಪಾಮಿಟಿಕ್ ಆಮ್ಲವನ್ನು ಒಳಗೊಂಡಿರುತ್ತವೆ.

►ಕಾಮಕಸ್ತೂರಿ ನೀರು

 ಕಾಮಕಸ್ತೂರಿ ಬೀಜಗಳಲ್ಲಿ ಸಮೃದ್ಧವಾಗಿರುವ ಒಮೆಗಾ-3 ಫ್ಯಾಟಿ ಆ್ಯಸಿಡ್‌ಗಳು ರಕ್ತನಾಳಗಳನ್ನು ಹಿಗ್ಗಿಸಲು ನೆರವಾಗುತ್ತವೆ ಮತ್ತು ಅಧಿಕ ರಕ್ತದೊತ್ತಡವನ್ನು ತಗ್ಗಿಸುತ್ತವೆ. ಕಾಮಕಸ್ತೂರಿ ಬೀಜಗಳನ್ನು ಅರ್ಧಗಂಟೆ ಕಾಲ ನೀರಿನಲ್ಲಿ ನೆನೆಸಿಡಿ. ಬಳಿಕ ಬೀಜಗಳನ್ನು ಸೋಸಿ ತೆಗೆದು ನೀರನ್ನು ಸೇವಿಸಿ. ಒಂದು ತಿಂಗಳು ನಿಯಮಿತವಾಗಿ ಇದನ್ನನುಸರಿಸಿದರೆ ಪರಿಣಾಮಕಾರಿ ಫಲಿತಾಂಶ ದೊರೆಯುತ್ತದೆ ಮತ್ತು ರಕ್ತದೊತ್ತಡ ಮಟ್ಟದಲ್ಲಿ ಬದಲಾವಣೆಯಾಗುತ್ತದೆ.

►ದಾಳಿಂಬೆ ರಸ ದಾಳಿಂಬೆ ಹಣ್ಣು

ದಾಳಿಂಬೆ ರಸ ದಾಳಿಂಬೆ ಹಣ್ಣು ಪೊಟ್ಯಾಷಿಯಮ್‌ನ ಆಗರವಾಗಿದೆ ಮತ್ತು ಪೊಟ್ಯಾಷಿಯಮ್‌ನಿಂದ ಸಮೃದ್ಧ ಆಹಾರಗಳು ಅಧಿಕ ರಕ್ತದೊತ್ತಡವನ್ನು ತಗ್ಗಿಸಲು ನೆರವಾಗುತ್ತವೆ. ಗ್ರೀನ್ ಟೀ ಮತ್ತು ರೆಡ್ ವೈನ್‌ನಲ್ಲಿರುವುದರ ಮೂರು ಪಟ್ಟು ಉತ್ಕರ್ಷಣ ನಿರೋಧಕಗಳು ದಾಳಿಂಬೆ ಹಣ್ಣಿನ ರಸದಲ್ಲಿರುತ್ತವೆ. ದಾಳಿಂಬೆ ರಸವನ್ನು ಪ್ರತಿ ದಿನ ಸೇವಿಸಿದರೆ ರಕ್ತದೊತ್ತಡವನ್ನು ಇಳಿಸಲು ತುಂಬ ನೆರವಾಗುತ್ತದೆ ಎಂದು ಹಲವಾರು ಅಧ್ಯಯನಗಳು ಹೇಳಿವೆ.

►ಆ್ಯಪಲ್ ಸಿಡರ್ ವಿನೆಗರ್ ಪೇಯ

 ಆ್ಯಪಲ್ ಸಿಡರ್ ವಿನೆಗರ್ ಹಲವಾರು ಆರೋಗ್ಯಲಾಭಗಳನ್ನು ನೀಡುತ್ತದೆ. ಅದು ಪೊಟ್ಯಾಷಿಯಂ ಸೇರಿದಂತೆ ಹಲವಾರು ಪೋಷಕಾಂಶಗಳನ್ನು ಒಳಗೊಂಡಿದೆ. ಆ್ಯಪಲ್ ಸಿಡರ್ ವಿನೆಗರ್ ಪೇಯವು ಶರೀರದಲ್ಲಿಯ ಅನಗತ್ಯ ಸೋಡಿಯಂ ಮತ್ತು ವಿಷವಸ್ತುಗಳನ್ನು ನಿವಾರಿಸುತ್ತದೆ ಮತ್ತು ಅದರಲ್ಲಿರುವ ಕಿಣ್ವಗಳು ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ. ಬಿಸಿ ನೀರಿನ ಗ್ಲಾಸ್‌ನಲ್ಲಿ ಆ್ಯಪಲ್ ಸಿಡರ್ ವಿನೆಗರ್ ಮತ್ತು ಕೆಲವು ಹನಿ ಜೇನನ್ನು ಬೆರೆಸಿಕೊಂಡು ಖಾಲಿ ಹೊಟ್ಟೆಯಲ್ಲಿ ಸೇವಿಸುವ ಮೂಲಕ ಹಲವಾರು ಆರೋಗ್ಯಲಾಭಗಳನ್ನು ಪಡೆಯಬಹುದು.

►ಮೆಂತ್ಯದ ನೀರು

ಮೆಂತ್ಯದ ನೀರು ರಕ್ತದೊತ್ತಡವನ್ನು ನಿಯಂತ್ರಿಸಲು ನೆರವಾಗುವ ನಾರನ್ನೊಳಗೊಂಡಿರುತ್ತದೆ. ಮೆಂತ್ಯದ ಕಾಳುಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಆ ನೀರನ್ನು ಸೇವಿಸುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಿಸಬಹುದು ಮತ್ತು ಇತರ ಹಲವಾರು ಕಾಯಿಲೆಗಳಿಂದಲೂ ದೂರವಿರಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X