Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾಂದಲಪಟ್ಟಿ ಪ್ರವೇಶ ನಿಷೇಧಕ್ಕೆ ವಿರೋಧ :...

ಮಾಂದಲಪಟ್ಟಿ ಪ್ರವೇಶ ನಿಷೇಧಕ್ಕೆ ವಿರೋಧ : ಎಸ್ಪಿಯಿಂದ ಸ್ಥಳ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ25 July 2019 11:49 PM IST
share
ಮಾಂದಲಪಟ್ಟಿ ಪ್ರವೇಶ ನಿಷೇಧಕ್ಕೆ ವಿರೋಧ : ಎಸ್ಪಿಯಿಂದ ಸ್ಥಳ ಪರಿಶೀಲನೆ

ಮಡಿಕೇರಿ, ಜು.25: ಮಳೆಯಿಂದ ಎದುರಾಗಬಹುದಾದ ಅನಾಹುತಗಳ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೆಸರುವಾಸಿ ಪ್ರವಾಸಿತಾಣ ಮಾಂದಲಪಟ್ಟಿಗೆ ಜಿಲ್ಲಾಡಳಿತ ಪ್ರವೇಶ ನಿಷೇಧಿಸಿರುವುದನ್ನು ಸ್ಥಳೀಯ ಗ್ರಾಮಸ್ಥರು ಹಾಗೂ ಜೀಪು ಚಾಲಕರು ತೀವ್ರವಾಗಿ ವಿರೋಧಿಸಿದ್ದಾರೆ.

ಜಿಲ್ಲಾಡಳಿತದ ಈ ಕ್ರಮದಿಂದ ಪ್ರವಾಸಿಗರನ್ನೇ ನಂಬಿ ಜೀವನ ಸಾಗಿಸುತ್ತಿರುವ ಜೀಪು ಚಾಲಕರಿಗೆ ಹಾಗೂ ಗ್ರಾಮಸ್ಥರಿಗೆ ಕಷ್ಟ, ನಷ್ಟ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿಯ ಮಳೆಗಾಲದಲ್ಲಿ ಗುಡ್ಡ ಕುಸಿತವಾಗಿ ಉಳಿದಿರುವ ಅಲ್ಪ ಸ್ವಲ್ಪ ಮಣ್ಣು ರಸ್ತೆ ಬದಿಯ ಚರಂಡಿಗೆ ಬೀಳುತ್ತಿದೆಯೇ ಹೊರತು ಯಾವುದೇ ಅನಾಹುತಗಳು ಸಂಭವಿಸುವ ಸಾಧ್ಯತೆ ಇಲ್ಲ.

ಮಾಂದಲಪಟ್ಟಿಗೆ ಹೋಗಲು 3 ರಸ್ತೆಗಳಿರುವುದರಿಂದ ವಾಹನ ಸಂಚಾರಕ್ಕೆ ಯಾವುದೇ ತೊಂದರೆಗಳಿರುವುದಿಲ್ಲ. ಕಳೆದ ಬಾರಿಯ ಮಳೆಯಲ್ಲಿ ಭೂ ಕುಸಿತದಿಂದಾಗಿ ಆಸ್ತಿ, ಪಾಸ್ತಿಗಳನ್ನು ಕಳೆದುಕೊಂಡಿರುವ ಗ್ರಾಮಸ್ಥರಿಗೆ ಪ್ರವಾಸಿಗರ ಆಗಮನವೇ ಆದಾಯವಾಗಿದೆ. ಸುಮಾರು 200ಕ್ಕಿಂತಲೂ ಹೆಚ್ಚಿನ ಕುಟುಂಬಗಳ ಜೀವನ ನಿರ್ವಹಣೆ ಪ್ರವಾಸೋದ್ಯಮದ ಮೂಲಕವೇ ನಡೆಯುತ್ತಿದೆ ಎಂದು ಗ್ರಾಮಸ್ಥರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಈ ವರ್ಷ ದೊಡ್ಡ ಪ್ರಮಾಣದ ಮಳೆಯೂ ಆಗುತ್ತಿಲ್ಲ, ಅನಾಹುತದ ಪರಿಸ್ಥಿತಿ ಎದುರಾದರೆ ನಾವುಗಳೇ ಜವಾಬ್ದಾರಿಯುತವಾಗಿ ವಾಹನಗಳನ್ನು ನಿಲುಗಡೆಗೊಳಿಸುತ್ತೇವೆ ಎಂದು ತಿಳಿಸಿರುವ ಚಾಲಕರು ಮಾನವೀಯ ನೆಲೆಗಟ್ಟಿನಡಿ ಜಿಲ್ಲಾಧಿಕಾರಿ ನಿರ್ಬಂಧವನ್ನು ತೆರವುಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

ಜಿಲ್ಲಾಧಿಕಾರಿ ಪ್ರವೇಶ ನಿಷೇಧಿಸಿರುವ ಹಿನ್ನೆಲೆ ಎಸ್ಪಿ ಸುಮನ್ ಡಿ.ಪನ್ನೇಕರ್ ಮಾಂದಲಪಟ್ಟಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಸ್ಥಳೀಯ ಗ್ರಾಮಸ್ಥರು ಹಾಗೂ ಜೀಪು ಚಾಲಕರು ಎಸ್ಪಿ ಬಳಿ ತಮ್ಮ ಅಳಲನ್ನು ತೋಡಿಕೊಂಡರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್ಪಿ, ಜಿಲ್ಲಾಧಿಕಾರಿ ಕ್ರಮವನ್ನು ಸಮರ್ಥಿಸಿಕೊಂಡರು. ಮಾಂದಲಪಟ್ಟಿಗೆ ತೆರಳುವ ರಸ್ತೆಯ ಬದಿಗಳಲ್ಲಿ ಸಣ್ಣ ಪ್ರಮಾಣಲ್ಲಿ ಮಣ್ಣು ಕುಸಿಯುತ್ತಿದೆ. ಈ ಪ್ರಮಾಣ ಹೆಚ್ಚಾಗಿ ಪ್ರವಾಸಿಗರು ಅಪಾಯಕ್ಕೆ ಸಿಲುಕಬಹುದೆನ್ನುವ ಕಾರಣಕ್ಕಾಗಿ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸ್ಥಳೀಯರಾದರೆ ಅಪಾಯದಿಂದ ಪಾರಾಗಬಹುದು, ಆದರೆ ಹೊರಗಿನಿಂದ ಆಗಮಿಸುವ ಪ್ರವಾಸಿಗರು ಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿದೆ ಎಂದು ಹೇಳಿದರು.

ಮಳೆ ಕಡಿಮೆ ಇರುವುದರಿಂದ ಆದೇಶವನ್ನು ಪುನರ್ ಪರಿಶೀಲಿಸಲು ಅವಕಾಶವಿದ್ದು, ಜಿಲ್ಲಾಧಿಕಾರಿ ನಿರ್ಧಾರವೇ ಅಂತಿಮವೆಂದು ಎಸ್ಪಿ ಸ್ಪಷ್ಟಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X