Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೊಕ್ಸೊ ಪ್ರಕರಣಗಳಲ್ಲಿ ತ್ವರಿತ...

ಪೊಕ್ಸೊ ಪ್ರಕರಣಗಳಲ್ಲಿ ತ್ವರಿತ ನ್ಯಾಯಕ್ಕಾಗಿ ಹೆಚ್ಚುವರಿ ಮಾಹಿತಿಗಾಗಿ ಕಾಯುವುದಿಲ್ಲ:ಸುಪ್ರೀಂ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ26 July 2019 9:47 PM IST
share
ಪೊಕ್ಸೊ ಪ್ರಕರಣಗಳಲ್ಲಿ ತ್ವರಿತ ನ್ಯಾಯಕ್ಕಾಗಿ ಹೆಚ್ಚುವರಿ ಮಾಹಿತಿಗಾಗಿ ಕಾಯುವುದಿಲ್ಲ:ಸುಪ್ರೀಂ ಕೋರ್ಟ್

ಹೊಸದಿಲ್ಲಿ,ಜು.26: ಮಕ್ಕಳ ಅತ್ಯಾಚಾರ ಪ್ರಕರಣಗಳಲ್ಲಿ ತ್ವರಿತ ನ್ಯಾಯದಾನಕ್ಕಾಗಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ(ಪೊಕ್ಸೊ)ಯಡಿ ಪ್ರಕರಣಗಳ ಕುರಿತು ಹೆಚ್ಚುವರಿ ಮಾಹಿತಿಗಳಿಗಾಗಿ ಕಾಯದೇ ಆದೇಶಗಳನ್ನು ಹೊರಡಿಸಬಹುದು ಎಂದು ಸರ್ವೋಚ್ಚ ನ್ಯಾಯಾಲಯವು ಹೇಳಿದೆ.

 ‘ಮುಂದಿನ/ಹೆಚ್ಚುವರಿ ಮಾಹಿತಿಗಳನ್ನು ಪಡೆದುಕೊಳ್ಳಲು ಪ್ರಕರಣದ ವಿಚಾರಣೆಯನ್ನು ಮುಂದೂಡುವ ಬದಲು ಕೆಲವು ನಿರ್ದೇಶನಗಳನ್ನು ಹೊರಡಿಸಲು ನಾವು ಒಲವು ಹೊಂದಿದ್ದೇವೆ ’ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಹಾಗೂ ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ಪೀಠವು ಹೇಳಿತು.

 ಮಕ್ಕಳ ವಿರುದ್ಧ ಅತ್ಯಾಚಾರದ ಘಟನೆಗಳು ಆತಂಕಕಾರಿ ರೀತಿಯಲ್ಲಿ ಹೆಚ್ಚುತ್ತಿರುವ ಬಗ್ಗೆ ತಾನು ಸ್ವಯಂಪ್ರೇರಣೆಯಿಂದ ಕೈಗೆತ್ತಿಕೊಂಡಿರುವ ವಿಷಯದ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯವು ನಡೆಸುತ್ತಿದೆ.

 ದೇಶಾದ್ಯಂತ ಪೊಕ್ಸೊ ಕಾಯ್ದೆಯಡಿ ಬಾಕಿಯಿರುವ ಒಟ್ಟು ಪ್ರಕರಣಗಳ ಬಗ್ಗೆ ಮಾಹಿತಿಯನ್ನು ಕ್ರೋಢೀಕರಿಸುವಂತೆ ಪೀಠದಿಂದ ನಿರ್ದೇಶವನ್ನು ಪಡೆದಿದ್ದ ಸರ್ವೋಚ್ಚ ನ್ಯಾಯಾಲಯದ ರಿಜಿಸ್ಟ್ರಾರ್ ಎಸ್.ಎಸ್.ರಥಿ ಅವರು ಅದಕ್ಕಾಗಿ ಇನ್ನಷ್ಟು ಸಮಯಾವಕಾಶವನ್ನು ಕೋರಿದರಾದರೂ,ನಿರ್ದೇಶಗಳನ್ನು ಹೊರಡಿಸುವ ತನ್ನ ಮಾರ್ಗದಲ್ಲಿ ಅಡ್ಡಿಯಾಗದಂತೆ ಆ ಕೆಲಸವನ್ನು ಮುಂದುವರಿಸಲು ಪೀಠವು ಸೂಚಿಸಿತು.

ನಮಗೆ ಹೆಚ್ಚಿನ ಮಾಹಿತಿಗಳ ಅಗತ್ಯವೇನಿದೆ? ನಾವು ನಿರ್ದೇಶಗಳನ್ನು ಹೊರಡಿಸುತ್ತೇವೆ ಎಂದು ಪೀಠವು ತಿಳಿಸಿತು.

ಇದು ನಿಮ್ಮ ಅತ್ಯುನ್ನತ ಆದ್ಯತೆಯಾಗಬೇಕಿರುವ ವಿಷಯವಾಗಿದೆ ಎಂದು ತನಗೆ ನೆರವಾಗುತ್ತಿರುವ ಸಾಲಿಸಿಟರ್ ಜನರಲ್ ತುಷಾರ ಮೆಹ್ತಾ ಅವರಿಗೆ ಪೀಠವು ಹೇಳಿತು.

 ಪೊಕ್ಸೊ ಪ್ರಕರಣಗಳ ವಿಚಾರಣೆಗಾಗಿಯೆ ಕೇಂದ್ರದ ಆರ್ಥಿಕ ನೆರವಿನೊಂದಿಗೆ ಪ್ರತಿ ಜಿಲ್ಲೆಯಲ್ಲಿಯೂ ನಿಯೋಜಿತ ನ್ಯಾಯಾಲಯ ಸ್ಥಾಪನೆಯ ಉಸ್ತುವಾರಿ ಹೊಣೆಯನ್ನು ಹೈಕೋರ್ಟ್ ನ್ಯಾಯಾಧೀಶರೋರ್ವರಿಗೆ ವಹಿಸಬೇಕು ಎಂಬ ಮೆಹತಾ ಅವರ ಸಲಹೆಯನ್ನು ಸರ್ವೋಚ್ಚ ನ್ಯಾಯಾಲಯವು ಒಪ್ಪಿಕೊಳ್ಳಲಿಲ್ಲ. ಹೆಚ್ಚಿನ ಹೈಕೋರ್ಟ್‌ಗಳಲ್ಲಿ ನ್ಯಾಯಾಧೀಶರಿಗೆ ಕೆಲಸದ ಒತ್ತಡವಿರುತ್ತದೆ ಎನ್ನುವುದನ್ನು ಅದು ಬೆಟ್ಟು ಮಾಡಿತು.

ತಾನು ಮಾಹಿತಿಗಾಗಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವನ್ನು ಸಂಪರ್ಕಿಸಿದ್ದೆ,ಆದರೆ ಅದು ಅಂತಹ ಯಾವುದೇ ಮಾಹಿತಿಯನ್ನು ಸಂಗ್ರಹಿಸುತ್ತಿಲ್ಲ. ಹೀಗಾಗಿ ತಾನು ರಾಷ್ಟ್ರೀಯ ಅಪರಾಧ ದಾಖಲೆಗಳ ಘಟಕ ಮತ್ತು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದಂತಹ ಇತರ ಆರು ಮೂಲಗಳಿಂದ ಮಾಹಿತಿಗಳನ್ನು ಸಂಗ್ರಹಿಸಬೇಕಾಗಿದೆ ಎಂದು ರಥಿ ತಿಳಿಸಿದಾಗ,ಅವರೆಲ್ಲ ಈ ಎಲ್ಲ ವರ್ಷಗಳಲ್ಲಿ ಏನು ಮಾಡುತ್ತಿದ್ದರು ಎಂದು ಪೀಠವು ಕಟುವಾಗಿ ಪ್ರಶ್ನಿಸಿತು.

ಪೊಕ್ಸೊ ಕಾಯ್ದೆಯಡಿ ಉತ್ತರ ಪ್ರದೇಶದಲ್ಲಿ ಅತ್ಯಂತ ಹೆಚ್ಚಿನ ಪ್ರಕರಣಗಳು (44,376) ದಾಖಲಾಗಿವೆ. ನಂತರದ ಸ್ಥಾನಗಳಲ್ಲಿ ಮಹಾರಾಷ್ಟ್ರ (19,000ಕ್ಕೂ ಹೆಚ್ಚು) ಮತ್ತು ಮಧ್ಯಪ್ರದೇಶ (9,000ಕ್ಕೂ ಹೆಚ್ಚು) ರಾಜ್ಯಗಳಿವೆ ಎಂದು ರಥಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X