Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕನ್ನಡಿಗರ ಹೆಮ್ಮೆಯಾಗಿ ಕಾರ್ನಾಡ್...

ಕನ್ನಡಿಗರ ಹೆಮ್ಮೆಯಾಗಿ ಕಾರ್ನಾಡ್ ಗುರುತಿಸಿಕೊಳ್ಳಲು ಅನುವಾದ ಕಾರಣ: ಲೇಖಕಿ ವನಮಾಲ ವಿಶ್ವನಾಥ್

‘ಅನುವಾದಕರಾಗಿ ಗಿರೀಶ್ ಕಾರ್ನಾಡ್’ ವಿಚಾರ ಕುರಿತ ಸಂವಾದ

ವಾರ್ತಾಭಾರತಿವಾರ್ತಾಭಾರತಿ26 July 2019 10:00 PM IST
share

ಬೆಂಗಳೂರು, ಜು.26: ರಾಷ್ಟ್ರ ಹಾಗೂ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಕನ್ನಡಿಗರ ಹೆಮ್ಮೆಯಾಗಿ ಗಿರೀಶ್ ಕಾರ್ನಾಡ್ ಗುರುತಿಸಿಕೊಳ್ಳಲು ಅನುವಾದಗಳಿಂದಲೇ ಸಾಧ್ಯವಾಯಿತು ಎಂದು ಲೇಖಕಿ ಹಾಗೂ ಅನುವಾದಕಿ ವನಮಾಲ ವಿಶ್ವನಾಥ್ ಅಭಿಪ್ರಾಯಪಟ್ಟರು.

ಶುಕ್ರವಾರ ನಗರದಲ್ಲಿಂದು ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ‘ಅನುವಾದಕರಾಗಿ ಗಿರೀಶ್ ಕಾರ್ನಾಡ್’ ವಿಚಾರ ಕುರಿತ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕನ್ನಡದ, ಭಾರತದ ಹಾಗೂ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಕನ್ನಡಿಗರ ಐಕಾನ್ ಆಗಿ ಗುರುತಿಸಿಕೊಳ್ಳಲು ಅವರ ನಾಟಕಗಳ ಅನುವಾದಗಳೇ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು.

ಗಿರೀಶ್ ಕಾರ್ನಾಡ್‌ರ ನಾಟಕಗಳ ಮೂಲಕ ಅನುವಾದಕ್ಕೆ ಮಹತ್ತರವಾದ ಕೊಡುಗೆ ನೀಡಿದ್ದಾರೆ. ಅದೇ ರೀತಿ ಅನುವಾದವೂ ಅವರ ಬದುಕಿಗೆ ಅಪಾರವಾದ ಕೊಡುಗೆ ನೀಡಿದೆ ಎಂದ ಅವರು, ಕಾರ್ನಾಡ್ ಅವರ ಎಲ್ಲ ನಾಟಕಗಳನ್ನು ಸ್ವತಃ ಅವರೇ ಅನುವಾದಿಸಿದ್ದಾರೆ. ಬರಹಗಾರರು ಹಾಗೂ ಅನುವಾದಕರ ನಡುವೆ ಮೇಲು-ಕೀಳು ಎಂಬ ಪೂರ್ವಗ್ರಹಗಳಿವೆ. ಹೀಗಾಗಿ, ಅವರೇ ಎಲ್ಲ ಅನುವಾದ ಮಾಡಿರುವುದು ವಿಶೇಷವಾಗಿದೆ ಎಂದರು.

ಕಾರ್ನಾಡ್ ರಂಗಭೂಮಿ, ರಂಗಕ್ರಿಯೆ ಎಲ್ಲವನ್ನೂ ಅರೆದು ಕುಡಿದಿದ್ದಾರೆ. ಅವರ ಅನುವಾದದ ಸಂದರ್ಭದಲ್ಲಿ ಸಾಹಿತ್ಯದ ಕೃತಿಯಾಗಿ ಅಲ್ಲದೆ, ರಂಗದ ಮೇಲೆ ಹೇಗೆ ಪ್ರದರ್ಶಿಸಲು ಸಾಧ್ಯವಾಗುತ್ತದೆ ಎಂಬುದನ್ನು ಅರಿತು ಅನುವಾದ ಮಾಡಿದ್ದಾರೆ. ಇಂಗ್ಲೆಂಡ್‌ಗೆ ಹೋಗಿ ಅಂತರ್‌ರಾಷ್ಟ್ರೀಯ ಮಟ್ಟದ ಕವಿಯಾಗಬೇಕು ಎಂದುಕೊಂಡಿದ್ದರು. ಆದರೆ, ಅವರ ಯಯಾತಿ ನಾಟಕವು ಅವರ ಆಲೋಚನೆಯನ್ನು ಬದಲಿಸಿತು. ಈ ನಾಟಕ ನಾನು ಕನ್ನಡಕ್ಕೆ ಬದ್ಧ ಎಂಬ ಪಾಠ ಕಲಿಸಿತು ಎಂದು ನುಡಿದರು.

ಗಿರೀಶ್ ಕಾರ್ನಾಡ್ ನಾಟಕಗಳನ್ನು ಕನ್ನಡದಲ್ಲಿ ಪ್ರಕಟವಾದ ಬಳಿಕ, ಅದಕ್ಕೆ ಬರುತ್ತಿದ್ದ ಪ್ರತಿಕ್ರಿಯೆಗಳನ್ನು ಗಮನದಲ್ಲಿಟ್ಟುಕೊಂಡು ಅನುವಾದ ಮಾಡುತ್ತಿದ್ದರು. ಪ್ರದರ್ಶನದ ಬಳಿಕ ಯಾವುದನ್ನು ತಿದ್ದಬೇಕು, ಸೇರಿಸಬೇಕು, ಬಿಡಬೇಕು ಎಂಬ ಸೂಕ್ಷ್ಮತೆಗಳನ್ನು ಗಮನಿಸುತ್ತಿದ್ದರು. ಕಾರ್ನಾಡ್‌ರ ಅನುವಾದಗಳು ಅನುವಾದ ಕೃತಿಗಳನ್ನು ಯಾವ ರೀತಿ ಗ್ರಹಿಸಬೇಕು ಎಂಬ ಸೂಕ್ಷ್ಮತೆಯನ್ನು ಕಲಿಸಿಕೊಟ್ಟಿವೆ ಎಂದು ಅವರು ಹೇಳಿದರು.

ಕಾರ್ನಾಡ್ ಅವರು ಚರಿತ್ರೆ, ಪುರಾಣ ಹಾಗೂ ಜಾನಪದದಿಂದ ತನಗೆ ಬೇಕಾದ ಕಥೆಗಳನ್ನು ಆರಿಸಿಕೊಂಡು, ತಮ್ಮದೇ ಆದ ಶೈಲಿಯಲ್ಲಿ ವಸ್ತುವಿಗೆ ನವ್ಯತೆಯ ಸೊಗಡು ಹಚ್ಚಿ ನಾಟಕಗಳನ್ನು ಬರೆದಿದ್ದಾರೆ. ಆ ಮೂಲಕ ಇಂದಿನ ಸಮಸ್ಯೆಗಳು, ಸನ್ನಿವೇಶಗಳು ಹಾಗೂ ಸವಾಲುಗಳನ್ನು ತೋರಿಸಿಕೊಟ್ಟಿದ್ದಾರೆ. ಅವರ ಅನುವಾದಗಳು ಗಡಿರೇಖೆ ದಾಟಿ, ಹೊರಗಿನ ಪ್ರಪಂಚಕ್ಕೆ ತಲುಪುವ, ವಿಶಾಲಾತ್ಮಕವಾದ ವಿಷಯಗಳನ್ನು ಮುಖ್ಯ ಮಾಡುವುದನ್ನು ತೋರಿಸಿವೆ ಎಂದು ತಿಳಿಸಿದರು.

ಕನ್ನಡದಲ್ಲಿ ಡಾ.ಚಂದ್ರಶೇಖರ ಕಂಬಾರ, ಲಂಕೇಶ್, ಚಂಪಾ ಸೇರಿದಂತೆ ಅನೇಕರಿದ್ದಾರೆ. ಆದರೆ, ಕಾರ್ನಾಡ್ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡರು. ಲಂಕೇಶರು ಕರ್ನಾಟಕದ ಗಡಿಯನ್ನು ದಾಟಿ ಮುಂದಕ್ಕೆ ಹೋಗಲು ಇಚ್ಛಿಸಿದವರಲ್ಲ ಎಂದ ಅವರು, ಕಾರ್ನಾಡ್‌ರ ಅನುವಾದಗಳು ಹತ್ತಾರು ಸಂಸ್ಕೃತಿಗಳೊಂದಿಗೆ ಸಮ್ಮಿಲನವಾದವು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಭಾಷಾಂತರ ಕೇಂದ್ರದ ಗೌರವ ನಿರ್ದೇಶಕ ಎಸ್.ಆರ್.ವಿಜಯಶಂಕರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X