Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಂದ್ರನಲ್ಲಿಗೆ ಹೋಗಲು ಟಿಕೆಟ್...

ಚಂದ್ರನಲ್ಲಿಗೆ ಹೋಗಲು ಟಿಕೆಟ್ ಕಾಯ್ದಿರಿಸಿ: ಅಡೂರು ಗೋಪಾಲಕೃಷ್ಣನ್

ಬಿಜೆಪಿ ನಾಯಕನ ಹೇಳಿಕೆಗೆ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ26 July 2019 10:47 PM IST
share
ಚಂದ್ರನಲ್ಲಿಗೆ ಹೋಗಲು ಟಿಕೆಟ್ ಕಾಯ್ದಿರಿಸಿ: ಅಡೂರು ಗೋಪಾಲಕೃಷ್ಣನ್

ತಿರುವನಂತಪುರ, ಜು. 26: ‘ಜೈ ಶ್ರೀರಾಮ್’ ಪಠಣ ಆಲಿಸಲು ಬಯಸದೇ ಇದ್ದರೇ ಚಂದ್ರನಲ್ಲಿಗೆ ಹೋಗಿ ಎಂದು ಬಿಜೆಪಿ ವಕ್ತಾರ ಬಿ. ಗೋಪಾಲಕೃಷ್ಣನ್ ಅವರ ಸಲಹೆಗೆ ಪ್ರತಿಕ್ರಿಯಿಸಿರುವ ಕೇರಳದ ಚಿತ್ರ ನಿರ್ದೇಶಕ ಅಡೂರು ಗೋಪಾಲಕೃಷ್ಣನ್, ಇದು ಉತ್ತಮ ಸಲಹೆ. ಚಂದ್ರನಲ್ಲಿ ಕೊಠಡಿ ಹಾಗೂ ಟಿಕೇಟ್ ಕಾಯ್ದಿರಿಸಿದರೆ ನಾನು ಚಂದ್ರನಲ್ಲಿಗೆ ಹೋಗುತ್ತೇನೆ ಎಂದಿದ್ದಾರೆ.

ಗುಂಪಿನಿಂದ ಥಳಿಸಿ ಹತ್ಯೆ ಹಾಗೂ ಅಸಹಿಷ್ಣುತೆ ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ 49 ಖ್ಯಾತನಾಮರಲ್ಲಿ ಒಬ್ಬರಾಗಿರುವ ಚಿತ್ರನಿರ್ದೇಶಕ ಅಡೂರ್ ಅವರಲ್ಲಿ ‘ಜೈ ಶ್ರೀರಾಮ್’ ಪಠಣ ಆಲಿಸಲು ಸಾಧ್ಯವಾಗದೇ ಇದ್ದರೆ, ಚಂದ್ರನಲ್ಲಿಗೆ ಹೋಗುವಂತೆ ಕೇರಳದ ಬಿಜೆಪಿ ನಾಯಕ ಬಿ. ಗೋಪಾಲಕೃಷ್ಣನ್ ತನ್ನ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದರು. ‘‘ಇದು ರಾಮಾಯಣ ತಿಂಗಳು. ಭಾರತ ಹಾಗೂ ನೆರೆಯ ದೇಶಗಳಲ್ಲಿ ಜೈ ಶ್ರೀರಾಮ್ ಘೋಷಣೆ ಹೊರ ಹೊಮ್ಮುತ್ತಿರುತ್ತದೆ. ನಿಮಗೆ ಇಲ್ಲಿ ಇರಲು ಸಾಧ್ಯವಾಗದೇ ಇದ್ದರೆ, ಶ್ರೀಹರಿಕೋಟದಲ್ಲಿ ಹೆಸರು ನೋಂದಾಯಿಸಿಕೊಳ್ಳಿ ಹಾಗೂ ಚಂದ್ರನಲ್ಲಿಗೆ ಹೋಗಿ’’ ಎಂದು ಗೋಪಾಲಕೃಷ್ಣನ್ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಅಡೂರು ‘‘ನಾನು ಈ ಕೊಡುಗೆ ಬಗ್ಗೆ ಆಕರ್ಷಿತನಾಗಿದ್ದೇನೆ. ನಾನು ಜಗತ್ತಿನಾದ್ಯಂತ ಪ್ರಯಾಣಿಸಿದ್ದೇನೆ. ಚಂದ್ರನ ಬಗ್ಗೆ ಕುತೂಹಲ ಇದೆ. ಚಂದ್ರನನನ್ನು ನೋಡಲು ಬಯಸುತ್ತೇನೆ. ಅವರು ನನಗೆ ಟಿಕೆಟ್ ಹಾಗೂ ಹೊಟೇಲ್ ಕಾಯ್ದಿರಿಸಬಹುದು’’ ಎಂದಿದ್ದಾರೆ. ಪತ್ರ ‘ಜೈ ಶ್ರೀರಾಮ್’ ಎಂದು ಮಂತ್ರ ಪಠಿಸುವ ವಿರುದ್ಧವಲ್ಲ. ಬದಲಾಗಿ ‘ಪಠಣವನ್ನು ಯುದ್ಧದ ಕೂಗು’ ಆಗಿ ಬಳಸುತ್ತಿರುವುದರ ವಿರುದ್ಧ ಎಂದು ಅಡೂರು ಹೇಳಿದ್ದಾರೆ. ನಾನು ವೈಯುಕ್ತಿಕವಾಗಿ ಇಂತಹ ಪ್ರತಿಕ್ರಿಯೆ ನಿರೀಕ್ಷಿಸಿರಲಿಲ್ಲ. ಈ ಪತ್ರ ಬರೆದವರು ರಾಜಕೀಯದಲ್ಲಿ ಯಾವುದೇ ರೀತಿಯಲ್ಲಿ ಭಾಗಿಯಾಗದವರು. ಕಲಾವಿದರು, ಲೇಖಕರು, ಚಿತ್ರ ಕಲಾವಿದರು. ನಮ್ಮ ಸುತ್ತಮುತ್ತ ನಡೆಯುವ ಘಟನೆಗಳ ಬಗ್ಗೆ ನಾವು ಪ್ರಜ್ಞೆ ಹೊಂದಿದ್ದೇವೆ. ರಾಮನ ಶ್ರೇಷ್ಟ ಅಸ್ತ್ತಿತ್ವ ನೋಡುತ್ತಾ ಬೆಳೆದವರು ನಾವು. ಹಿಂಸೆಗೆ ರಾಮನ ಹೆಸರು ಬಳಸಬಾರದು ಎಂದು ನಾವು ಎಲ್ಲರೂ ಸಹಿ ಹಾಕಿ ಪ್ರಧಾನಿ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿದ್ದೇವೆ. ಗುಂಪಿನಿಂದ ಥಳಿಸಿ ಹತ್ಯೆಗೈಯಲು, ಜನರನ್ನು ಕೊಲ್ಲಲು ಇದು ‘ಯುದ್ಧದ ಕೂಗು ಅಲ್ಲ’ ಎಂದು ಅಡೂರ್ ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X