Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮೌಲ್ಯಮಾಪಕರಿಗೆ ಜವಾಬ್ದಾರಿ ಇರಲಿ

ಮೌಲ್ಯಮಾಪಕರಿಗೆ ಜವಾಬ್ದಾರಿ ಇರಲಿ

-ಶಂಶೀರ್ ಬುಡೋಳಿ, ಬಂಟ್ವಾಳ-ಶಂಶೀರ್ ಬುಡೋಳಿ, ಬಂಟ್ವಾಳ26 July 2019 11:43 PM IST
share

ಮಾನ್ಯರೇ,

ವಿದ್ಯಾಭ್ಯಾಸದ ಪ್ರಮುಖ ಹಂತ ಎಸೆಸೆಲ್ಸಿಯಲ್ಲಿ ಅಚ್ಚರಿಯೆಂಬಂತೆ ಪ್ರತಿಭಾನ್ವಿತ ವಿದ್ಯಾರ್ಥಿಗಳು ಅನುತ್ತೀರ್ಣರಾದ ಘಟನೆಗಳು ರಾಜ್ಯದಲ್ಲಿ ನಡೆದಿತ್ತು. ಈ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಕೊನೆಗೂ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಎಚ್ಚೆತ್ತುಕೊಂಡು ‘ಲೋಪ’ದ ಮೂಲವನ್ನು ಪತ್ತೆಹಚ್ಚಿದೆ. ಈಗ ಈ ವರ್ಷದ ಎಸೆಸೆಲ್ಸಿ ಪರೀಕ್ಷೆಯ ಉತ್ತರಪತ್ರಿಕೆ ಮೌಲ್ಯಮಾಪನದ ವೇಳೆ ಬೇಜವಾಬ್ದಾರಿಯಿಂದ ಮೌಲ್ಯಮಾಪನ ಮಾಡಿದ ನೂರಕ್ಕೂ ಹೆಚ್ಚು ಮೌಲ್ಯಮಾಪಕರಿಗೆ ಇಂತಿಷ್ಟು ಸಾವಿರ ದಂಡ ಪಾವತಿಸುವಂತೆ ಆದೇಶಿಸಿರುವುದು ಸೂಕ್ತ ನಿರ್ಧಾರ. ಇಂತಹ ಕಠಿಣ ಕ್ರಮಗಳನ್ನು ನಾವು ಸ್ವಾಗತಿಸಬೇಕಾಗಿದೆ. ಯಾಕೆಂದರೆ ಕಳೆದ ಹಲವಾರು ವರ್ಷಗಳಿಂದ ಎಸೆಸೆಲ್ಸಿ ಫಲಿತಾಂಶ ಪ್ರಕಟದ ವೇಳೆ ಅಚ್ಚರಿ ಫಲಿತಾಂಶ ಕೂಡಾ ಪ್ರಕಟಗೊಂಡಿವೆ. ಉತ್ತೀರ್ಣರಾಗುವ ಅರ್ಹತೆ ಇದ್ದವರೂ ಅನುತ್ತೀರ್ಣರಾದ ಘಟನೆಯೂ ನಡೆದಿತ್ತು. ಕೆಲವು ವಿದ್ಯಾರ್ಥಿಗಳು ಇದರಿಂದ ಬೇಸತ್ತು ಸಾವಿಗೆ ಶರಣರಾಗಿದ್ದರು. ಇನ್ನು ಕೆಲವರು ದೂರು ನೀಡಿದ್ದರು. ಇದಕ್ಕೆಲ್ಲಾ ಉತ್ತರಪತ್ರಿಕೆ ಮೌಲ್ಯಮಾಪಕರ ನಿರ್ಲಕ್ಷ, ಬೇಜವಾಬ್ದಾರಿ ಎಂಬ ಆರೋಪ ಕೇಳಿ ಬಂದಿತ್ತು. ಈ ವರ್ಷ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಆನ್‌ಲೈನ್‌ನಲ್ಲಿ ಅಂಕಗಳನ್ನು ನಮೂದಿಸುವ ಪದ್ಧತಿಯನ್ನು ಪರಿಚಯಿಸಿತ್ತು. ಈ ವೇಳೆ ಮೌಲ್ಯಮಾಪಕರು ಅಂಕಗಳನ್ನು ನಮೂದಿಸುವ ಬದಲು ಒಎಂಆರ್ ಪತ್ರಿಕೆಯ ಪುಟಗಳ ಸಂಖ್ಯೆ ನಮೂದಿಸಿದ್ದರಿಂದ ಫಲಿತಾಂಶ ವ್ಯತಿರಿಕ್ತವಾಗಿ ಪ್ರಕಟಗೊಂಡಿತ್ತು. ಹೀಗಾಗಿ ಮೌಲ್ಯಮಾಪನದ ವೇಳೆ ತಪ್ಪುಎಸಗಿದ ಮೌಲ್ಯಮಾಪಕರಿಗೆ ಹಂತ-ಹಂತವಾಗಿ ಶಿಕ್ಷೆ ನೀಡಲು ಮಂಡಳಿ ತೀರ್ಮಾನಿಸಿದೆ.

ಈ ನಿಯಮ ಪಿಯುಸಿ ಪರೀಕ್ಷೆಯ ಮೌಲ್ಯಮಾಪನಕ್ಕೂ ಅನ್ವಯವಾಗಲಿ. ಜೊತೆಗೆ ಹೊಸ ತಂತ್ರಜ್ಞಾನದ ಅರಿವು ಇಲ್ಲದ ಮೌಲ್ಯಮಾಪಕರಿಗೂ ಇನ್ನಷ್ಟು ತರಬೇತಿ ನೀಡಿ ಫಲಿತಾಂಶದಲ್ಲಿ ಪೂರ್ಣ, ನಿಖರತೆಯನ್ನು ಕಾಪಾಡಬೇಕಾಗಿದೆ. 

share
-ಶಂಶೀರ್ ಬುಡೋಳಿ, ಬಂಟ್ವಾಳ
-ಶಂಶೀರ್ ಬುಡೋಳಿ, ಬಂಟ್ವಾಳ
Next Story
X