Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 8ನೆ ದಕ್ಷಿಣ ಭಾರತದ ಎನ್‌ಜಿಒಗಳ ಸಮಾವೇಶ:...

8ನೆ ದಕ್ಷಿಣ ಭಾರತದ ಎನ್‌ಜಿಒಗಳ ಸಮಾವೇಶ: ಸರಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸಿ- ಎ.ಬಿ.ಇಬ್ರಾಹಿಂ

ವಾರ್ತಾಭಾರತಿವಾರ್ತಾಭಾರತಿ27 July 2019 6:47 PM IST
share
8ನೆ ದಕ್ಷಿಣ ಭಾರತದ ಎನ್‌ಜಿಒಗಳ ಸಮಾವೇಶ: ಸರಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸಿ- ಎ.ಬಿ.ಇಬ್ರಾಹಿಂ

ಬೆಂಗಳೂರು, ಜು.27: ಸರಕಾರಗಳು ಜಾರಿಗೆ ತರುವ ಯೋಜನೆಗಳನ್ನು ಎನ್‌ಜಿಒ ಪ್ರತಿನಿಧಿಗಳು ಸಾರ್ವಜನಿಕರಿಗೆ ಮುಟ್ಟಿಸುವಲ್ಲಿ ಪ್ರಮುಖ ಪಾತ್ರವಹಿಸಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಎ.ಬಿ.ಇಬ್ರಾಹಿಂ ನುಡಿದರು.

ಶನಿವಾರ ಎಂ.ಜಿ.ರಸ್ತೆಯ ನಗರದ ಖಾಸಗಿ ಹೊಟೇಲ್‌ನಲ್ಲಿ ಸಿಗ್ಮಾ ಫೌಂಡೇಶನ್ ಮತ್ತು ಲೀಡ್ ಟ್ರಸ್ಟ್ ಹಮ್ಮಿಕೊಂಡಿರುವ ಎರಡು ದಿನಗಳ ಕಾಲ 8ನೆ ದಕ್ಷಿಣ ಭಾರತದ ಎನ್‌ಜಿಒ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ, ಮೂಲಸೌಕರ್ಯ, ಹಣಕಾಸು ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಆಡಳಿತ ನಡೆಸುವ ಸರಕಾರಗಳು ಜಾರಿಗೆ ತಂದಿವೆ. ಆದರೆ, ಸೂಕ್ತ ರೀತಿಯಲ್ಲಿ ಸಂಪರ್ಕ-ಸಂವಹನ ಇಲ್ಲದ ಕಾರಣ, ಕೆಲ ಯೋಜನೆಗಳು ಜನರಿಗೆ ಮುಟ್ಟುವುದಿಲ್ಲ. ಆದರೆ, ಸ್ವಯಂ ಸೇವಾ ಸಂಸ್ಥೆಗಳು(ಎನ್‌ಜಿಒ) ಪ್ರಮುಖ ಪಾತ್ರವಹಿಸಿ, ಇಂತಹ ಯೋಜನೆಗಳ ಯಶಸ್ವಿಗೆ ಮುಂದಾಗಬಹುದೆಂದು ಅವರು ತಿಳಿಸಿದರು.

ಸಾಮಾಜಿಕ ಅಭಿವೃದ್ದಿಗೆ ಸ್ವಯಂ ಸೇವಾ ಸಂಸ್ಥೆಗಳು ಮುಖ್ಯವಾದ ಪಾತ್ರವನ್ನು ವಹಿಸುತ್ತವೆ. ಆರೋಗ್ಯ, ಶಿಕ್ಷಣ, ಮತ್ತು ಸಾಮಾಜಿಕ ಕಳಕಳಿಗೆ ತಮ್ಮದೇ ಆದ ಕೊಡುಗೆಯನ್ನು ಹತ್ತು ಹಲವು ಸಂಸ್ಥೆಗಳು ನೀಡುತ್ತಾ ಬಂದಿವೆ. ಈ ನಿಟ್ಟಿನಲ್ಲಿ ಇವರ ಕಾರ್ಯ ಶ್ಲಾಘನೀಯ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಶಸ್ತಿ ಪ್ರದಾನ: ಪ್ರಸ್ತುತ ಸಾಲಿನ ಸೋಷಿಯಲ್ ಹೀರೋ ಪ್ರಶಸ್ತಿ ಅನ್ನು ಮೈಸೂರಿನ ಆಯ್ಯುಬ್ ಅಹ್ಮದ್, ಲಖ್ನೋ ಶಿಕ್ಷಣ ಹಕ್ಕು ಸಂಸ್ಥೆಯ ಸಮೀನಾ ಬಾನು, ಕೇರಳ ಸಾಮಾಜಿಕ ಕಾರ್ಯಕರ್ತೆ ಸಿಫೀಯಾ ಹನೀಫ್ ಅವರಿಗೆ ಪ್ರದಾನಿಸಲಾಯಿತು.

ಅದೇ ರೀತಿ, ಯುವ ಸಾಮಾಜಿಕ ಹೀರೋ ಪ್ರಶಸ್ತಿ ಅನ್ನು ಕೋಲ್ಕತಾ ಯುಟ್ಯುಬರ್ ಸಂಸ್ಥಾಪಕ ವಲಿ ರೆಹಮಾನಿ ಅವರಿಗೆ ಪ್ರದಾನಿಸಲಾಯಿತು. ಜೀವಮಾನ ಸಾಧನೆ ಪ್ರಶಸ್ತಿಗೆ ಮುಕ್ಕಮ್ ಮುಸ್ಲಿಂ ಅನಾಥಾಶ್ರಮ ಮಾಜಿ ದಿವಂಗತ ಮುಹಮ್ಮದ್ ಮೊನ್ ಹಾಝೀ ಅವರನ್ನು ಆಯ್ಕೆ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಬೆಂಗಳೂರಿನ ಸಿಲ್ವರ್‌ಲೈನ್ ಗ್ರೂಪ್ ಅಧ್ಯಕ್ಷ ಮುಹಮ್ಮದ್ ಫಾರೂಕ್, ಬಾಜ್-ಎ-ನಿಸ್ವಾನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಹುಸ್ನಾ ಶರೀಫ್, ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ ವಿವಿಯ ಕುಲಪತಿ ನಿಸ್ಸಾರ್ ಅಹ್ಮದ್, ಸಿಗ್ಮಾ ಫೌಂಡೇಶನ್ ಅಧ್ಯಕ್ಷ ಅಮೀನ್ ಮುದಸ್ಸರ್, ಎಂಐಎ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಫೀಝ್, ಲೀಡ್ ಟ್ರಸ್ಟ್ ಅಧ್ಯಕ್ಷ ಪ್ರೊ.ಎಂ.ಅಶ್ರಫ್ ಅಲಿ ಸೇರಿ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X