Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಎಂ ಯಡಿಯೂರಪ್ಪರಿಗೆ ವಿಶ್ವಾಸಮತ...

ಸಿಎಂ ಯಡಿಯೂರಪ್ಪರಿಗೆ ವಿಶ್ವಾಸಮತ ಸಾಬೀತಿನ ಸವಾಲು

ಸೋಮವಾರವೇ ಧನವಿನಿಯೋಗ ಮಸೂದೆ ಅಂಗೀಕಾರ ನಿರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ27 July 2019 8:07 PM IST
share
ಸಿಎಂ ಯಡಿಯೂರಪ್ಪರಿಗೆ ವಿಶ್ವಾಸಮತ ಸಾಬೀತಿನ ಸವಾಲು

ಬೆಂಗಳೂರು, ಜು. 27: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪನವರು ಜು.29ರ ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಲು ಸಿದ್ಧತೆಯಲ್ಲಿ ತೊಡಗಿದ್ದು, ಗೆಲುವೋ-ಸೋಲೋ ಎಂಬ ಆತಂಕದ ಮಧ್ಯೆ ಭಾರೀ ಕುತೂಹಲ ಸೃಷ್ಟಿಸಿದೆ.

ಬಹುಮತ ಸಾಬೀತಿಗೆ ರಾಜೀನಾಮೆ ನೀಡಿ ಮುಂಬೈನಲ್ಲಿರುವ ಅತೃಪ್ತ ಶಾಸಕರು ಗೈರು ಹಾಜರಿ ಹಿನ್ನೆಲೆಯಲ್ಲಿ ಗೆಲ್ಲುವ ವಿಶ್ವಾಸದಲ್ಲಿ ಬಿಜೆಪಿ ಮುಖಂಡರಿದ್ದಾರೆ. ಈ ಮಧ್ಯೆ ಆಡಳಿತಾರೂಢ ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದ್ದು, ಸೋಮವಾರವೇ ಧನವಿನಿಯೋಗ ವಿಧೇಯಕಕ್ಕೂ ಅಂಗೀಕಾರ ನಿರೀಕ್ಷೆ ಇದೆ.

ಜು.26ರ ಸಂಜೆ ನೂತನ ಸಿಎಂ ಆಗಿ ಬಿಎಸ್‌ವೈ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ವಜುಭಾಯ್ ವಾಲಾ ಅವರು ಒಂದು ವಾರದೊಳಗೆ ವಿಶ್ವಾಸಮತ ಸಾಬೀತಿಗೆ ಸೂಚನೆ ನೀಡಿದ್ದಾರೆ. ಆದರೆ, ಯಡಿಯೂರಪ್ಪ ಸೋಮವಾರವೇ ಬಹುಮತ ಸಾಬೀತುಪಡಿಸುವ ಉಮೇದಿನಲ್ಲಿದ್ದಾರೆ. ನಾಮನಿರ್ದೇಶಿಕ ಸದಸ್ಯರೊಬ್ಬರು ಸೇರಿ 225 ಸಂಖ್ಯಾಬಲದ ವಿಧಾನಸಭೆ, ಮೂರು ಮಂದಿ ಶಾಸಕರ ಅನರ್ಹತೆ ಹಿನ್ನೆಲೆಯಲ್ಲಿ ಸಂಖ್ಯಾಬಲ 222ಕ್ಕೆ ಕುಸಿದಿದೆ. ಬಹುಮತಕ್ಕೆ 111 ಸಂಖ್ಯಾಬಲ ಅಗತ್ಯವಿದೆ. ಆದರೆ, ಪಕ್ಷೇತರ ಶಾಸಕ ನಾಗೇಶ್ ಸಹಿತ ಬಿಜೆಪಿ ಬಳಿ 106 ಸಂಖ್ಯಾಬಲವಿದೆ. ಬಿಜೆಪಿ ಬಹುಮತ ಸಾಬೀತು ಹೇಗೆ ಮಾಡಲಿದೆ ಎಂಬುದು ಯಕ್ಷಪ್ರಶ್ನೆಯಾಗಿದೆ.

ರಾಜೀನಾಮೆ ನೀಡಿರುವ 13 ಶಾಸಕರು ಹಾಗೂ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಶಾಸಕ ಶ್ರೀಮಂತ ಪಾಟೀಲ್ ಭವಿಷ್ಯ ಇನ್ನೂ ಅತಂತ್ರದಲ್ಲಿದ್ದು, ರಾಜೀನಾಮೆ ನೀಡಿರುವ ಶಾಸಕ ವಿರುದ್ಧ ಸ್ಪೀಕರ್ ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ 99 ಸಂಖ್ಯಾಬಲವಿದೆ. ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಎಸ್ಪಿ ಶಾಸಕ ಎನ್.ಮಹೇಶ್ ಕಳೆದ ಅಧಿವೇಶನದಲ್ಲಿ ತಟಸ್ಥವಾಗಿದ್ದು, ಇದೀಗ ಅವರು ಅದೇ ನಿಲುವಿಗೆ ಅಂಟಿಕೊಳ್ಳುವ ಸಾಧ್ಯತೆಗಳಿವೆ. ಹೀಗಾಗಿ ಯಡಿಯೂರಪ್ಪನವರು ಸೋಮವಾರ ಎದುರಾಗಲಿರುವ ವಿಶ್ವಾಸಮತದ ಅಗ್ನಿ ಪರೀಕ್ಷೆಯಲ್ಲಿ ಯಶಸ್ವಿಯಾಗಲಿದ್ದಾರೆಂದು ವಿಶ್ಲೇಷಿಸಲಾಗುತ್ತಿದೆ. ಆದರೆ, ವಿಪಕ್ಷ ಕಾಂಗ್ರೆಸ್-ಜೆಡಿಎಸ್, ಆಡಳಿತಾರೂಢ ಬಿಜೆಪಿಗೆ ತಿರುಗೇಟು ನೀಡಲು ಯಾವ ರೀತಿಯ ರಣತಂತ್ರ ಅನುಸರಿಸಲಿವೆ ಎಂಬುದು ಎಲ್ಲರನ್ನು ತುದಿಗಾಲ ಮೇಲೆ ನಿಲ್ಲಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X