Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೈಜ್ಞಾನಿಕ ರೀತಿಯ ಕೃಷಿಯಿಂದ ಮಾತ್ರ ರೈತನ...

ವೈಜ್ಞಾನಿಕ ರೀತಿಯ ಕೃಷಿಯಿಂದ ಮಾತ್ರ ರೈತನ ಅಭಿವೃದ್ಧಿ ಸಾಧ್ಯ: ಶರ್ಮ

ರೈತರಿಗೆ ಕೃಷಿ ಮಾಹಿತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ27 July 2019 8:27 PM IST
share
ವೈಜ್ಞಾನಿಕ ರೀತಿಯ ಕೃಷಿಯಿಂದ ಮಾತ್ರ ರೈತನ ಅಭಿವೃದ್ಧಿ ಸಾಧ್ಯ: ಶರ್ಮ

ಉಡುಪಿ, ಜು.27: ನೂರಕ್ಕೆ ನೂರು ವೈಜ್ಞಾನಿಕ ರೀತಿಯಲ್ಲಿ ಕೃಷಿ ಮಾಡಿದರೆ ಮಾತ್ರ ರೈತನ ಅಭಿವೃದ್ಧಿ ಸಾಧ್ಯವಾಗುತ್ತದೆ. ಆಗ ಮಾತ್ರ ಕೃಷಿ ಲಾಭದಾಯಕ ವಾಗಿರುತ್ತದೆ ಎಂದು ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ಹೇಳಿದ್ದಾರೆ.

ಉಡುಪಿ ಜಿಲ್ಲಾ ಕೃಷಿಕ ಸಂಘ ನಗರದ ಹೊಟೇಲ್ ಉಡುಪಿ ರೆಸಿಡೆನ್ಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಕೃಷಿಕರಿಗೆ ಕೃಷಿ ಮಾಹಿತಿ ಕಾರ್ಯಕ್ರಮದಲ್ಲಿ ಕೃಷಿ ಸಂಘಟನೆಯ ಕುರಿತು ಮಾತನಾಡುತ್ತಾ ಅವರು ಈ ವಿಷಯ ತಿಳಿಸಿದರು.

ಜಿಲ್ಲೆಯ ರೈತರು ಸಂಪದ್ಭರಿತರಾಗಬೇಕೆಂಬ ಕನಸಿನೊಂದಿಗೆ 22 ವರ್ಷಗಳ ಹಿಂದೆ ಜಿಲ್ಲಾ ಕೃಷಿಕ ಸಂಘವನ್ನು ಪ್ರಾರಂಭಿಸಲಾಗಿತ್ತು. ಆದರೆ ಇಂದು ರೈತರ ಪರಿಸ್ಥಿತಿಯನ್ನು ನೋಡಿದಾಗ ಮನಸ್ಸಿಗೆ ತುಂಬಾ ನೋವಾಗುತ್ತದೆ. ವೈಜ್ಞಾನಿಕ ಕೃಷಿ, ಬಲಿಷ್ಠ ಸಂಘಟನೆ ಹಾಗೂ ಹೋರಾಟದ ಮೂಲಕ ಈಗಲೂ ರೈತ ಸ್ವಾವಲಂಬಿ ಹಾಗೂ ಸ್ವಾಭಿಮಾನದಿಂದ ಬದುಕುವಂತೆ ಮಾಡಲು ಸಾಧ್ಯವಿದೆ ಎಂಬುದನ್ನು ಅನುಭವದಿಂದ ತಾನು ಕಂಡುಕೊಂಡಿದ್ದೇನೆ ಎಂದವರು ನುಡಿದರು.

ಈ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡಲೇಬೇಕು. ಇದಕ್ಕಾಗಿ ರೈತ ತನ್ನ ಮನಸ್ಥಿತಿಯಲ್ಲಿ ಸಮಗ್ರ ಬದಲಾವಣೆ ಮಾಡಿಕೊಳ್ಳಬೇಕು. ವೈಜ್ಞಾನಿಕ ಕೃಷಿ, ಸಂಘಟನೆ, ಹೋರಾಟ ಆತನ ಬೀಜಮಂತ್ರಗಳಾಗಬೇಕು. ರೈತರು ಸಂಘಟಿತ ರಾಗಿ ಒಗ್ಗಟ್ಟಿನಿಂದ ಹೋರಾಟಕ್ಕೆ ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.

ಕೃಷಿಕ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಗತಿಪರ ಕೃಷಿಕ ಪ್ರಶಸ್ತಿ ವಿಜೇತ ಶ್ರೀನಿವಾಸ ಭಟ್ ಕುದಿ ಅವರು ಸಮಗ್ರ ಕೃಷಿ ಮಾಹಿತಿ ಯನ್ನು ನೀಡಿ, ಜಿಲ್ಲೆಯ ಪ್ರತಿಯೊಬ್ಬ ಕೃಷಿಕರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ತಮ್ಮ ಹೆಸರನ್ನು ನೊಂದಾಯಿಸಿ ಕೊಳ್ಳುವಂತೆ ಸಲಹೆ ನೀಡಿದರು. ಹೆಸರು ನೊಂದಾಯಿಸಿಕೊಂಡ ಮೂರು ತಿಂಗಳಿಗೆ ನಿಮಗೆ ಕೇಂದ್ರ ಸರಕಾರದ 6,000ರೂ.ಗಳಲ್ಲಿ ಮೊದಲ ಕಂತು ಬಾರದೇ ಇದ್ದರೆ, ಮತ್ತೆ ನೊಂದಾಯಿಸಿಕೊಳ್ಳಬೇಕು. ಇದರಿಂದ ವಾರ್ಷಿಕ ನಿಮಗೆ 10,000ರೂ. ಸಿಗುವುದು ಖಂಡಿತ. ಇದಕ್ಕೆ ಬೇಕಾದ ಸಹಾಯವನ್ನು ಸಂಘ ಮಾಡಲಿದೆ ಎಂದರು.

ರೈತರಿಗಾಗಿ ತೋಟಗಾರಿಕಾ ಇಲಾಖೆಯ ಸಾಕಷ್ಟು ಯೋಜನೆಗಳಿದ್ದು, ಅವುಗಳ ಬಗ್ಗೆ ಮಾಹಿತಿ ಪಡೆಯಿರಿ. ಜಮೀನನ್ನು ಹಡೀಲು ಬಿಡಬೇಡಿ. ಆದಷ್ಟು ಬೇಗ ಏನಾದರೂ ಅಲ್ಲಿ ಬೆಳೆಯಿರಿ. ಅನಗತ್ಯವಾಗಿ ಹೊರಗೆ ಸಾಲ ಮಾಡಬೇಡಿ, ಸಹಕಾರಿ ಸಂಘಗಳು ಈಗಲೂ ಬಡ್ಡಿರಹಿತ ಸಾಲ ನೀಡುತ್ತೀವೆ. ಇವುಗಳನ್ನು ಬೇಕಿದ್ದರೆ ಬಳಸಿಕೊಳ್ಳಿ ಎಂದವರು ಸಲಹೆ ನೀಡಿದರು.

ಈಗ ಕೆಲವು ದಿನಗಳಿಂದ ಭಾರೀ ಮಳೆಯಾಗುತಿದ್ದರೂ, ಒಟ್ಟಾರೆಯಾಗಿ ಈ ಬಾರಿ ಕಡಿಮೆ ಮಳೆ ಬಿದ್ದಿದೆ. ಹೀಗಾಗಿ ಸಾಧ್ಯವಿದ್ದಷ್ಟು ಸುಲಭ ಬೆಳೆಗಳತ್ತ ಗಮನ ಹರಿಸಿ, ಅವುಗಳನ್ನು ಸಹಜ ರೀತಿಯಲ್ಲಿ ಮಾಡಿ. ಬೆಳೆಗಳಿಗೆ ಇನ್ನು ಕೀಟ ಬಾಧೆ ಶುರುವಾಗಲಿದ್ದು, ಇಲಾಖೆಯಲ್ಲಿರುವ ಉಚಿತ ಪರಿಹಾರಗಳನ್ನು ಬಳಸಿಕೊಳ್ಳಿ. ಯಂತ್ರೋಪರಣಗಳನ್ನು ಬಳಸಿ, ಅವುಗಳ ನಿರ್ವಹಣೆ ಬಗ್ಗೆಯೂ ನಿಗಾ ವಹಿಸಿ ಎಂದರು.

ಈ ಬಾರಿ ರೈತರು ನೀರಿನ ಕೊರತೆಯಿಂದ ಅತೀ ಹೆಚ್ಚು ತೊಂದರೆಗೊಳ ಗಾಗಿದ್ದಾರೆ. ಹೀಗಾಗಿ ನೀರಿನ ಸಂರಕ್ಷಣೆಗೆ ರೈತರು ಹೆಚ್ಚು ಗಮನ ಹರಿಸಬೇಕು. ಇಲಾಖೆಯ ಸಹಾಯಧನದಿಂದ ಕೃಷಿಹೊಂಡ, ಬಾವಿ ಹಾಗೂ ಕೊಳವೆ ಬಾವಿಗಳಿಗೆ ನೀರಿನ ಇಂಗಿಸುವಿಕೆಗೆ ಆದ್ಯತೆ ಇದೆ. ನೀರಿಗಿಂಸುವಿಕೆಯಿಂದ ಬಾವಿಯಲ್ಲಿ ಎಪ್ರಿಲ್-ಮೇ ತಿಂಗಳಲ್ಲೂ ಖಂಡಿತ ನೀರಿಗೆ ಕೊರತೆಯಾಗದು. ಜಾಸ್ತಿ ಜಮೀನಿದ್ದವರು ಮಾತ್ರ ಕೃಷಿಹೊಂಡ ರಚಿಸಿ ಎಂದರು.

ರೈತರಲ್ಲಿ ಜಲಜಾಗೃತಿ ಮೂಡುವವರೆಗೆ ಕೃಷಿ ಉದ್ಧಾರವಾಗುವುದಿಲ್ಲ ಎಂದ ಕುದಿ ಶ್ರೀನಿವಾಸ ಭಟ್, ಕಾಪಿಟ್ಟ ಕಾಳುಮೆಣಸು, ಅಡಿಕೆ, ತೆಂಗಿನಕಾಯಿಗಳನ್ನು ಮಾರುವ ಮುನ್ನ ಮಾರುಕಟ್ಟೆಯ ಮುನ್ಸೂಚನೆಯನ್ನು ಅರಿತುಕೊಳ್ಳಿ ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ತೋಟಗಾರಿಕಾ ಅಧಿಕಾರಿ ದೀಪಾ ಮಾತನಾಡಿ, ರೈತರು ಮೊದಲು ಬೆಳೆ ವಿಮೆಯನ್ನು ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು. ಅಲ್ಲದೇ ರೈತರಿಗೆ ಹಾಗೂ ಕೃಷಿಗೆ ಇಲಾಖೆಯಲ್ಲಿ ಲಭ್ಯವಿರುವ ಸಹಾಯಧನ, ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಹಿರಿಯ ಕೃಷಿಕ ಕೆ.ಮಂಜುನಾಥ ನಾಯಕ್ ಕರಂಬಳ್ಳಿ ಅವರು ಕಾರ್ಯಕ್ರಮ ವನ್ನು ಉದ್ಘಾಟಿಸಿದರು. ಭಾಸ್ಕರ ಶೆಟ್ಟಿ ಉಚ್ಚಿಲ ಹಾಗೂ ದಿನೇಶ್ ಶೆಟ್ಟಿ ಹೆರ್ಗ ಉಪಸ್ಥಿತರಿದ್ದರು.

ಜಿಲ್ಲಾ ಕೃಷಿಕ ಸಂಘದ ಉಪಾಧ್ಯಕ್ಷ ಶ್ರೀನಿವಾಸ ಬಲ್ಲಾಳ್ ಮಲ್ಲಂಪಳ್ಳಿ ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ರವೀಂದ್ರ ಗುಜ್ಜರಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X