Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಳೆದ 5 ವರ್ಷದಲ್ಲಿ 1 ಕೋಟಿ ಮರ ಕಡಿಯಲು...

ಕಳೆದ 5 ವರ್ಷದಲ್ಲಿ 1 ಕೋಟಿ ಮರ ಕಡಿಯಲು ಅನುಮತಿ: ಕೇಂದ್ರ ಸರಕಾರ

ವಾರ್ತಾಭಾರತಿವಾರ್ತಾಭಾರತಿ27 July 2019 10:17 PM IST
share
ಕಳೆದ 5 ವರ್ಷದಲ್ಲಿ 1 ಕೋಟಿ ಮರ ಕಡಿಯಲು ಅನುಮತಿ: ಕೇಂದ್ರ ಸರಕಾರ

 ಹೊಸದಿಲ್ಲಿ, ಜು.27: ಅಭಿವೃದ್ಧಿ ಕಾರ್ಯದ ಹಿನ್ನೆಲೆಯಲ್ಲಿ ಕಳೆದ 5 ವರ್ಷದಲ್ಲಿ ಪರಿಸರ ಸಚಿವಾಲಯ 1 ಕೋಟಿಗೂ ಅಧಿಕ ಮರಗಳನ್ನು ಕಡಿಯಲು ಅನುಮತಿ ನೀಡಿದೆ ಎಂದು ಸರಕಾರ ಸಂಸತ್ತಿಗೆ ಮಾಹಿತಿ ನೀಡಿದೆ.

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪರಿಸರ ಸಚಿವಾಲಯದ ಸಹಾಯಕ ಸಚಿವ ಬಾಬುಲ್ ಸುಪ್ರಿಯೊ, 2014ರಿಂದ 2019ರ ಅವಧಿಯಲ್ಲಿ ಅಭಿವೃದ್ಧಿ ಕಾರ್ಯದ ಹಿನ್ನೆಲೆಯಲ್ಲಿ 1.09 ಕೋಟಿ ಮರಗಳನ್ನು ಕಡಿಯಲು ಅನುಮತಿ ನೀಡಲಾಗಿದೆ. ಇದರಲ್ಲಿ 2018-19ರಲ್ಲೇ 26.91 ಲಕ್ಷ ಮರ ಕಡಿಯಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.

ಅಭಿವೃದ್ಧಿ ಕಾರ್ಯ ನಡೆಸಲು , ವಿವಿಧ ಕಾಯ್ದೆಯಡಿ ಸೂಚಿಸಲಾದ ಕಾರ್ಯವಿಧಾನದಂತೆ ಸಂಬಂಧಿತ ಇಲಾಖೆಗಳ ಅನುಮತಿ ಪಡೆದು ಮರಗಳನ್ನು ಕಡಿಯಲಾಗಿದೆ. ಆದರೆ ಕಾಡ್ಗಿಚ್ಚಿನಿಂದ ನಾಶವಾಗಿರುವ ಮರಗಳ ಬಗ್ಗೆ ಯಾವುದೇ ಅಂಕಿ ಅಂಶ ಇಲಾಖೆಯ ಬಳಿಯಿಲ್ಲ ಎಂದು ಸಚಿವರು ಹೇಳಿದರು. 2014-15ರಲ್ಲಿ 23.3 ಲಕ್ಷ ಮರಗಳನ್ನು ಕಡಿಯಲು, 2015-16ರಲ್ಲಿ 16.9 ಲಕ್ಷ ಮರಗಳು, 2016-17ರಲ್ಲಿ 17.01 ಲಕ್ಷ ಮರಗಳು ಹಾಗೂ 2017-18ರಲ್ಲಿ 25.5 ಲಕ್ಷ ಮರಗಳನ್ನು ಕಡಿಯಲು ಅನುಮತಿ ನೀಡಲಾಗಿದೆ. ಹಸಿರು ಭಾರತ ಅಭಿಯಾನದಡಿ ಕಳೆದ ನಾಲ್ಕು ವರ್ಷಗಳಲ್ಲಿ 12 ರಾಜ್ಯಗಳ 87,113.86 ಹೆಕ್ಟೇರ್ ಪ್ರದೇಶದಲ್ಲಿ ಅರಣ್ಯೀಕರಣ ಮತ್ತು ಪರ್ಯಾಯ ಇಂಧನ ಸಾಧನಗಳನ್ನು ಪೂರೈಸಲು 237.07 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು. ರಾಷ್ಟ್ರೀಯ ಅರಣ್ಯೀಕರಣ ಯೋಜನೆಯಡಿ, ಹೊಸದಾಗಿ 94,828 ಹೆಕ್ಟೇರ್ ಪ್ರದೇಶದಲ್ಲಿ ಗಿಡ ನೆಡಲು ಕಳೆದ ನಾಲ್ಕು ವರ್ಷದಲ್ಲಿ ರಾಜ್ಯಗಳಿಗೆ 328.90 ಕೋಟಿ ರೂ. ಬಿಡುಗಡೆಗೊಳಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಬಿಜೆಪಿ ಭವಿಷ್ಯವನ್ನು ನಾಶ ಮಾಡುತ್ತಿದೆ: ಕಾಂಗ್ರೆಸ್

1 ಕೋಟಿಗೂ ಅಧಿಕ ಮರಗಳನ್ನು ಕಡಿಯಲು ಅನುಮತಿ ನೀಡಿರುವುದನ್ನು ಕಾಂಗ್ರೆಸ್ ಖಂಡಿಸಿದ್ದು ಈ ಮೂಲಕ ಬಿಜೆಪಿ ನಮ್ಮ ಭವಿಷ್ಯವನ್ನು ನಾಶಗೊಳಿಸುತ್ತಿದೆಯೇ ಎಂದು ಪ್ರಶ್ನಿಸಿದೆ. ಮರಗಳು ಪರಿಸರವನ್ನು ಸಂರಕ್ಷಿಸುತ್ತವೆ. ಮರಗಳಿಲ್ಲದೆ ಬದುಕಿಲ್ಲ. ಆದರೆ ಮೋದಿ ಸರಕಾರ ಕಳೆದ ಐದು ವರ್ಷದಲ್ಲಿ 1 ಕೋಟಿಗೂ ಹೆಚ್ಚು ಮರಗಳನ್ನು ಅಭಿವೃದ್ಧಿ ಕಾರ್ಯದ ನೆಪದಲ್ಲಿ ಕಡಿದು ಹಾಕಿದೆ ಎಂದು ಕಾಂಗ್ರೆಸ್‌ನ ಪ್ರಧಾನ ವಕ್ತಾರ ರಣದೀಪ್ ಸುರ್ಜೆವಾಲ ಟ್ವೀಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X