Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೇಲುಕೀಳು ತೊಲಗಿ, ಸಮಾನತೆ ಮನೋಧರ್ಮ...

ಮೇಲುಕೀಳು ತೊಲಗಿ, ಸಮಾನತೆ ಮನೋಧರ್ಮ ಪಸರಿಸಲಿ: ಜಿ.ರಾಜಶೇಖರ್

‘ಮತ್ತೆ ಕಲ್ಯಾಣ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ28 July 2019 5:10 PM IST
share
ಮೇಲುಕೀಳು ತೊಲಗಿ, ಸಮಾನತೆ ಮನೋಧರ್ಮ ಪಸರಿಸಲಿ: ಜಿ.ರಾಜಶೇಖರ್

ಉಡುಪಿ, ಜು.28: ಇಂದಿನ ಸಂದರ್ಭದಲ್ಲಿ ಬಸವಣ್ಣರ ವಚನಗಳು ಬಹಳ ಪ್ರಸ್ತುತ. ಅರಣ್ಯದಲ್ಲಿ ಬೇಟೆಯಾಡಿದ ಮೊಲಗಿಂತಲೂ ಮನುಷ್ಯನ ಬಾಳು ಇನ್ನೂ ಕಷ್ಟ. ಯಾಕೆಂದರೆ ಮನುಷ್ಯನ ಬದುಕಿಗೆ ಬೆಲೆಯೇ ಇಲ್ಲ ಎಂಬುದಾಗಿ ಬಸವಣ್ಣ ವಚನದಲ್ಲಿ ಹೇಳುತ್ತಾರೆ. ಹಾಗಾಗಿ ಮೇಲುಕೀಳು ಎಂಬ ಭಾವನೆಗೆ ಆಧಾರವೇ ಇಲ್ಲ. ಈ ಸಮಾನತೆ ಮನೋಧರ್ಮವನ್ನು ಎಲ್ಲ ಕಡೆ ಪಸರಿಸಬೇಕು ಹಿರಿಯ ಚಿಂತಕ ಜಿ.ರಾಜಶೇಖರ್ ಹೇಳಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಸಾಣೆಹಳ್ಳಿಯ ಶ್ರೀತರಳಬಾಳು ಜಗದ್ಗುರು ಶಾಖಾ ಮಠದ ಸಹಮತ ವೇದಿಕೆ ಮತ್ತು ಉಡುಪಿ ಬಸವ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಆ.2ರಂದು ಉಡುಪಿಯಲ್ಲಿ ಹಮ್ಮಿಕೊಳ್ಳಲಾಗಿರುವ ಮತ್ತೆ ಕಲ್ಯಾಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ರವಿವಾರ ಉಡುಪಿ ಕಿದಿಯೂರು ಹೊಟೇಲ್ ಸಭಾಂಗಣದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡುತಿದ್ದರು.

ಸಾಣೆಹಳ್ಳಿ ಸ್ವಾಮೀಜಿ ಇಂದು ಕಾಲದ ಪ್ರವಾಹದ ವಿರುದ್ಧ ಈಜಲು ಹೊರಟಿದ್ದಾರೆ. ಅವರಿಗೆ ನಾವೆಲ್ಲ ಬೆಂಬಲ ನೀಡಬೇಕಾಗಿದೆ. 12ನೆ ಶತಮಾನ ದಲ್ಲಿ ಬಸವಣ್ಣ ಕೂಡ ಕಾಲದ ಪ್ರವಾಹ, ಪ್ರವೃತಿ ಹಾಗೂ ಬಹುಜನರ ಸಂಕಲ್ಪದ ವಿರುದ್ಧ ಈಜಿ ಅಸಮಾನತೆಯ ಪರಿಸ್ಥಿತಿಯನ್ನು ಬದಲಾಯಿಸಲು ಪ್ರಯತ್ನಿಸಿ ದರು. ಬಸವಣ್ಣರ ಈ ಸಂದೇಶಗಳನ್ನು ಜನರಿಗೆ ಮುಟ್ಟಿಸಲು ಸಾಣೆಹಳ್ಳಿ ಸ್ವಾಮೀಜಿ ಸಂಕಲ್ಪಿಸಿದ್ದಾರೆ ಎಂದರು.

ದಸಂಸ ಹಿರಿಯ ಮುಖಂಡ ಸುಂದರ್ ಮಾಸ್ತರ್ ಮಾತನಾಡಿ, 18ನೆ ಶತಮಾನದಲ್ಲಿನ ಅಸ್ಪಶ್ಯತೆ, ಜಾತಿಯತೆ, ಅಸಮಾನತೆಯ ಕಾಲದಲ್ಲಿ ಬಸವಣ್ಣ ಪ್ರತಿಪಾದಿಸಿದ ತತ್ವಗಳು ಇಂದಿಗೂ ಪ್ರಸ್ತುತವಾಗಿದೆ. ಬಸವ ತತ್ವ ಮತ್ತು ಆದರ್ಶಗಳು ಎಲ್ಲ ಕಡೆಗಳಿಗೆ ಪ್ರಸಾರವಾಗಲು ರಾಜ್ಯದ ಹಲವಾರು ಮಠಗಳ ಶ್ರಮದಿಂದ ಸಾಧ್ಯವಾಗಿದೆ. ಜನ ಸಾಮಾನ್ಯರಿಗೆ ಧಾರ್ಮಿಕ ವಿಚಾರ ಗಳನ್ನು ಮುಟ್ಟಿಸಿ ಅಸಮಾನತೆಯನ್ನು ಹೊಗಲಾಡಿಸುವ ಕಾರ್ಯ ಮಾಡಬೇಕು ಎಂದು ಅಭಿಪ್ರಾಯಪಟ್ಟರು.

ಉಡುಪಿ ಬಸವ ಸಮಿತಿಯ ಗೌರವಾಧ್ಯಕ್ಷ ಡಾ.ಜಿ.ಎಸ್.ಚಂದ್ರಶೇಖರ್ ಮಾತನಾಡಿ, ಯಾವುದೇ ಜಾತಿ, ಮತ, ಲಿಂಗ ಬೇಧ ಇಲ್ಲದೆ ಎಲ್ಲರೂ ವಿಶ್ವ ಮಾನವರು ಎಂಬುದನ್ನು ಸಾಧಿಸಲು ಈಗಲೂ ನಮಗೆ ಸಾಧ್ಯವಿದೆ. ಆದುದ ರಿಂದ ಎಲ್ಲರೂ ಒಂದಾಗಿ ಈ ನಿಟ್ಟಿನಲ್ಲಿ ಹೋರಾಟ ಮಾಡಬೇಕಾಗಿದೆ ಎಂದು ತಿಳಿಸಿದರು.

ಹಿರಿಯ ವಿಮರ್ಶಕ ಪ್ರೊ.ಮುರಳೀಧರ ಉಪಾಧ್ಯಾಯ ಮಾತನಾಡಿ, ಅನುಭವ ಮಂಟಪದಲ್ಲಿ ಸೃಜಿಸಿದ ವಚನ ಸಾಹಿತ್ಯ ಕನ್ನಡ ಸಾಹಿತ್ಯದ ಅತ್ಯುತ್ತಮ ಸಾಹಿತ್ಯಗಳಾಗಿವೆ. ಜಗತ್ತಿನ ಸಾಹಿತ್ಯಕ್ಕೆ ನೀಡಿರುವ ಬಹಳ ದೊಡ್ಡ ಕನ್ನಡದ ಕೊಡುಗೆ ಅಂದರೆ ಅದು ವಚನ ಸಾಹಿತ್ಯವಾಗಿದೆ. ವಚನ ಸಾಹಿತ್ಯ ಬೇರೆ ಭಾಷೆಗಳಿಗೆ ಅನುವಾದಗೊಂಡು ಜಗತ್ತಿನ ವಿಶ್ವವಿದ್ಯಾನಿಲಯಗಳಲ್ಲಿ ಅಧ್ಯಯನ ವಸ್ತುವಾಗಿದೆ. ಇಂದು ವಚನ ಸಾಹಿತ್ಯ ಭಾರತದ ಎಲ್ಲ ಭಾಷೆಗಳಿಗೂ ಅನು ವಾದಗೊಂಡಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಕಲ್ಯಾಣ ಅರ್ಥಪೂರ್ಣ ಆಗಿದೆ ಎಂದರು.

ಅಸಮಾನತೆ ವಿರುದ್ಧ 12 ಶತಮಾನದಲ್ಲಿ ಚಳವಳಿ ನಡೆದರೂ ಇದೀಗ 900 ವರ್ಷಗಳ ನಂತರವೂ ಸಮಾಜ ಕೆಲವರು ಹೆಣ್ಣು ಮಕ್ಕಳು ಹಾಗೂ ಅಂತರ್ ಜಾತಿ ವಿವಾಹದ ಬಗ್ಗೆ ಇನ್ನು ಕೆಳಮಟ್ಟದಲ್ಲಿ ಯೋಚನೆ ಮಾಡುತ್ತಿರುವುದು ದುರಂತ. ಅಂತಹ ಮನಸ್ಥಿತಿಯ ವಿರುದ್ಧ ಹೊಸ ತಲೆಮಾರು ಯೋಚಿಸುವಂತೆ ಮಾಡಬೇಕಾಗಿದೆ ಎಂದು ಅವರು ಹೇಳಿದರು.

ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಮತ್ತೆ ಕಲ್ಯಾಣ ಸ್ವಾಗತ ಸಮಿತಿಯ ಅಧ್ಯಕ್ಷ ಯು.ಸಿ.ನಿರಂಜನ್ ವಹಿಸಿದ್ದರು. ಧರ್ಮಗುರು ರೆ.ಫಾ.ವಿಲಿಯಂ ಮಾರ್ಟಿಸ್, ಉಡುಪಿ ಬಸವ ಸಮಿತಿಯ ಅಧ್ಯಕ್ಷ ಜಿ.ಎಂ.ಪಾಟೀಲ, ಉಪಾಧ್ಯಕ್ಷ ಪ್ರೊ.ಸಿದ್ದ ರಾಮಣ್ಣ, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಬ್ದುಲ್ ಅಝೀಝ್ ಉದ್ಯಾವರ, ದಲಿತ ಮುಖಂಡ ಶ್ಯಾಮ್‌ರಾಜ್ ಬಿರ್ತಿ ಉಪಸ್ಥಿತರಿದ್ದರು. ದಿನಕರ ಎಸ್.ಬೆಂಗ್ರೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X