Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೌಲ್ಯಾಂಕನ ಸಮಿತಿಯು ವಿತ್ತ ಸಚಿವಾಲಯ...

ಮೌಲ್ಯಾಂಕನ ಸಮಿತಿಯು ವಿತ್ತ ಸಚಿವಾಲಯ ಮತ್ತು ನೀತಿ ಆಯೋಗದ ಸಲಹೆಗಳನ್ನು ಕಡೆಗಣಿಸಿತ್ತು:ವರದಿ

ವಿಮಾನ ನಿಲ್ದಾಣಗಳ ಖಾಸಗೀಕರಣ

ವಾರ್ತಾಭಾರತಿವಾರ್ತಾಭಾರತಿ28 July 2019 7:47 PM IST
share
ಮೌಲ್ಯಾಂಕನ ಸಮಿತಿಯು ವಿತ್ತ ಸಚಿವಾಲಯ ಮತ್ತು ನೀತಿ ಆಯೋಗದ ಸಲಹೆಗಳನ್ನು ಕಡೆಗಣಿಸಿತ್ತು:ವರದಿ

ಹೊಸದಿಲ್ಲಿ,ಜು.28: ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕಾಗಿ ವಿತ್ತ ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆ ಮತ್ತು ನೀತಿ ಆಯೋಗ ನಿಗದಿಪಡಿಸಿದ್ದ ಮಾರ್ಗಸೂಚಿಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮೌಲ್ಯಾಂಕನ ಸಮಿತಿಯು ಕಡೆಗಣಿಸಿತ್ತು ಮತ್ತು ಇದರಿಂದಾಗಿ ಅದಾನಿ ಎಂಟರ್‌ಪ್ರೈಸಸ್ ಎಲ್ಲ ಆರೂ ವಿಮಾನ ನಿಲ್ದಾಣಗಳ ಟೆಂಡರ್‌ಗಳನ್ನು ಗೆಲ್ಲುವಂತಾಯಿತು ಎಂದು ಆಂಗ್ಲ ದೈನಿಕವೊಂದು ತನ್ನ ವರದಿಯಲ್ಲಿ ಹೇಳಿದೆ.

ಒಬ್ಬ ಬಿಡ್ಡರ್‌ಗೆ ಎರಡಕ್ಕಿಂತ ಹೆಚ್ಚಿನ ವಿಮಾನ ನಿಲ್ದಾಣಗಳನ್ನು ಒಪ್ಪಿಸುವಂತಿಲ್ಲ ಎಂಬ ಶಿಫಾರಸನ್ನು ಮತ್ತು ವಿಮಾನ ನಿಲ್ದಾಣಗಳ ನಿರ್ವಹಣೆಯಲ್ಲಿ ಅನುಭವ ಹೊಂದಿರುವ ಮತ್ತು ಆರ್ಥಿಕ ಕ್ಷಮತೆಯನ್ನು ಹೊಂದಿರುವ ಕಂಪನಿಗಳಿಗೆ ಗುತ್ತಿಗೆಗಳನ್ನು ನೀಡುವ ಅಗತ್ಯವನ್ನು ಸಮಿತಿಯು ಕಡೆಗಣಿಸಿದೆ ಎಂದು ಅದು ಬೆಟ್ಟು ಮಾಡಿದೆ.

ಕೇಂದ್ರ ಸರಕಾರವು 2018 ನವೆಂಬರ್‌ನಲ್ಲಿ ಅಹ್ಮದಾಬಾದ್,ಜೈಪುರ,ಲಕ್ನೋ,ಗುವಾಹಟಿ,ತಿರುವನಂತಪುರ ಮತ್ತು ಮಂಗಳೂರು ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ತನ್ನ ಒಪ್ಪಿಗೆಯನ್ನು ನೀಡಿತ್ತು. ಅಂತಿಮ ಒಪ್ಪಿಗೆಗಾಗಿ ಪ್ರಸ್ತಾವವನ್ನು ಶಿಫಾರಸು ಮಾಡಲು ಮೌಲ್ಯಾಂಕನ ಸಮಿತಿಯು ಡಿ.11ರಂದು ಸಭೆ ಸೇರಿತ್ತು ಮತ್ತು ಮೂರು ದಿನಗಳ ಬಳಿಕ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ(ಎಎಐ)ವು ಟೆಂಡರ್‌ಗಳನ್ನು ಕರೆದಿತ್ತು.

ಅದಾನಿ ಎಂಟರ್‌ಪ್ರೈಸಸ್ ಎಲ್ಲ ಆರೂ ವಿಮಾನ ನಿಲ್ದಾಣಗಳನ್ನು ನಿರ್ವಹಿಸಲು ಟೆಂಡರ್‌ಗಳನ್ನು ಗೆದ್ದಿದೆ ಎಂದು ಎಎಐ ಫೆಬ್ರವರಿಯಲ್ಲಿ ತಿಳಿಸಿತ್ತು. ಅಹ್ಮದಾಬಾದ್,ಲಕ್ನೋ ಮತ್ತು ಮಂಗಳೂರು ವಿಮಾನ ನಿಲ್ದಾಣಗಳನ್ನು ಅದಾನಿ ಸಮೂಹಕ್ಕೆ ಲೀಸ್‌ಗೆ ನೀಡುವುದಕ್ಕೆ ಜುಲೈ 3 ರಂದು ಹಸಿರು ನಿಶಾನೆಯನ್ನು ತೋರಿಸಿರುವ ಕೇಂದ್ರ ಸಂಪುಟವು ಇನ್ನುಳಿದ ಮೂರು ವಿಮಾನ ನಿಲ್ದಾಣಗಳ ಲೀಸ್‌ಗೆ ಇನ್ನಷ್ಟೇ ಒಪ್ಪಿಗೆಯನ್ನು ನೀಡಬೇಕಿದೆ.

 ಈ ಆರು ಯೋಜನೆಗಳು ಬಂಡವಾಳ ಪ್ರಧಾನವಾಗಿವೆ ಮತ್ತು ಅವುಗಳನ್ನು ಬೇರೆ ಬೇರೆ ಕಂಪನಿಗಳಿಗೆ ನೀಡಿದರೆ ಸ್ಪರ್ಧಾತ್ಮಕತೆಗೆ ಪೂರಕವಾಗುತ್ತದೆ ಎಂದು ಆರ್ಥಿಕ ವ್ಯವಹಾರಗಳ ಇಲಾಖೆಯು ಸಮಿತಿಗೆ ಸಲ್ಲಿಸಿದ್ದ ಟಪ್ಪಣಿಯಲ್ಲಿ ಸೂಚಿಸಿತ್ತು. ಆದರೆ ಒಂದೇ ಕಂಪನಿಗೆ ಲೀಸ್‌ಗೆ ನೀಡಬಹುದಾದ ವಿಮಾನ ನಿಲ್ದಾಣಗಳ ಸಂಖ್ಯೆಯ ಮೇಲೆ ಮಿತಿಯನ್ನು ಹೇರುವ ಅಗತ್ಯವಿಲ್ಲ ಎಂಬ ಕಾರ್ಯದರ್ಶಿಗಳ ಉನ್ನತಾಧಿಕಾರ ಸಮಿತಿಯು ಕೈಗೊಂಡಿದ್ದ ನಿರ್ಣಯವನ್ನು ವೌಲ್ಯಾಂಕನ ಸಮಿತಿಯು ಉಲ್ಲೇಖಿಸಿತ್ತು. ಇದು ಸಮಿತಿಯ 85ನೇ ಸಭೆಯ ಚರ್ಚೆ ದಾಖಲೆಗಳಲ್ಲಿ ನಮೂದಾಗಿದೆ ಎಂದು ವರದಿಯು ತಿಳಿಸಿದೆ.

ಬಿಡ್ಡರ್‌ಗಳು ವಿಮಾನ ನಿಲ್ದಾಣಗಳನ್ನು ನಿರ್ವಹಿಸಿದ ಅನುಭವ ಹೊಂದಿರಬೇಕು ಎಂದು ನೀತಿ ಆಯೋಗವು ಪ್ರತ್ಯೇಕ ಟಿಪ್ಪಣಿಯಲ್ಲಿ ಸೂಚಿಸಿತ್ತು. ಇದಕ್ಕೂ ಮೌಲ್ಯಾಂಕನ ಸಮಿತಿಯು,ಇಂತಹ ಅನುಭವವನ್ನು ಟೆಂಡರ್‌ಗೆ ಪೂರ್ವಭಾವಿ ಅಥವಾ ನಂತರದ ಅಗತ್ಯವನ್ನಾಗಿಸಬೇಕಿಲ್ಲ ಎಂದ ಉನ್ನತಾಧಿಕಾರ ಸಮಿತಿಯ ಇನ್ನೊಂದು ನಿರ್ಧಾರವನ್ನು ಉಲ್ಲೇಖಿಸಿತ್ತು ಎಂದೂ ವರದಿಯು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X