Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಂದ್ರಾಣಿ ಪರಿಶುದ್ಧವಾದರೆ ನಗರದ ಹಲವು...

ಇಂದ್ರಾಣಿ ಪರಿಶುದ್ಧವಾದರೆ ನಗರದ ಹಲವು ಸಮಸ್ಯೆ ಪರಿಹಾರ: ಡಾ.ಶ್ಯಾನುಭಾಗ್

ಇಂದ್ರಾಣಿ ನದಿ ಉಳಿಸಿ ಅಭಿಯಾನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ28 July 2019 8:11 PM IST
share
ಇಂದ್ರಾಣಿ ಪರಿಶುದ್ಧವಾದರೆ ನಗರದ ಹಲವು ಸಮಸ್ಯೆ ಪರಿಹಾರ: ಡಾ.ಶ್ಯಾನುಭಾಗ್

ಉಡುಪಿ, ಜು.28: ಕೆಲವೇ ದಶಕಗಳ ಹಿಂದೆ ಪವಿತ್ರ ಆಗಿದ್ದ ಇಂದ್ರಾಣಿ ನದಿಯ ಈಗಿನ ರೂಪ ಉಡುಪಿಯಂತಹ ಸಾಂಸ್ಕೃತಿಕ ನಗರಕ್ಕೆ ಶೋಭೆ ತರು ವುದಿಲ್ಲ. ಇಂದ್ರಾಣಿ ನದಿ ಪರಿಶುದ್ಧವಾದರೆ ಉಡುಪಿ ನಗರದ ಹಲವು ಸಮಸ್ಯೆಗಳು ಪರಿಹಾರ ಆಗಲಿದೆ ಎಂದು ಉಡುಪಿ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ.ರವೀಂದ್ರನಾಥ್ ಶ್ಯಾನುಭಾಗ್ ಹೇಳಿದ್ದಾರೆ.

ಉಡುಪಿಯ ಪರಿಸರಾಸಕ್ತರು ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಇಂದ್ರಾಣಿ ನದಿ ಉಳಿಸಿ ಅಭಿಯಾನದ ಪ್ರಯುಕ್ತ ಹಮ್ಮಿಕೊಳ್ಳಲಾದ ಬೈಕ್ ರ್ಯಾಲಿಗೆ ಇಂದ್ರಾಳಿ ಮುಖ್ಯಪ್ರಾಣ ದೇವರ ಗುಡಿಯ ಪುಷ್ಕರಣಿ ಬಳಿ ರವಿವಾರ ಚಾಲನೆ ನೀಡಿ ಅವರು ಮಾತನಾಡುತಿದ್ದರು.

ಶುದ್ಧ ಇಂದ್ರಾಣಿ ನದಿಯಿಂದ ನಗರದಲ್ಲಿ ವರ್ಷದುದ್ದಕ್ಕೂ ಕುಡಿಯುವ ನೀರು ಯತೇಚ್ಛವಾಗಿ ದೊರೆಯಲಿದೆ. ಅಲ್ಲದೆ ನದಿಯುದ್ದಕ್ಕೂ ವಾಸ ಮಾಡುವ ನಾಗರಿಕರೆಲ್ಲರು ದುರ್ವಾಸನೆ ಹಾಗೂ ರೋಗ ಮುಕ್ತ ಆಗಲಿದ್ದಾರೆ ಎಂದು ಅವರು ತಿಳಿಸಿದರು.

ಶತಶತಮಾನಗಳಿಂದ ಇಂದ್ರಾಳಿ ಬುಡ್ನಾರಿನಿಂದ ಕಲ್ಮಾಡಿವರೆಗೆ ಹರಿಯುತ್ತಿದ್ದ ಈ ನದಿ ನೂರಾರು ರೈತ ಕುಟುಂಬಗಳ ಜೀವನಾಡಿಯಾಗಿತ್ತು. ಇಂದು ಅಸಮರ್ಪಕ ಚರಂಡಿ ಯೋಜನೆಯಿಂದ ಈ ನದಿ ಕೊಳಕು ನೀರಿನ ಗಟಾರ ಆಗಿದೆ. ಹಲವಾರು ಕಡೆ ನದಿಯ ಇಕ್ಕೆಲಗಳಲ್ಲಿ ಒತ್ತುವರಿ ಮಾಡಲಾಗಿದೆ. ಇದರ ಪರಿಣಾಮವಾಗಿ ಉಡುಪಿ ನಗರವಾಸಿಗಳು ಹಲವು ರೋಗಗಳಿಂದ ಬಳಲುತ್ತಿದ್ದಾರೆ. ಇವಕ್ಕೆಲ್ಲ ಪರಿಹಾರ ಇಂದ್ರಾಣಿಯ ಪುನಶ್ಚೇತನವೇ ಹೊರತು ಅನ್ಯವಾರ್ಗವಿಲ್ಲ ಎಂದು ಅವರು ಹೇಳಿದರು.

ಮುಖ್ಯವಾಗಿ ಸರಕಾರ ಮಣಿಪಾಲದಿಂದ ಕುಂಜಿಬೆಟ್ಟುವರೆಗೆ ಒಳಚರಂಡಿ ಯೋಜನೆಯನ್ನು ಕೈಗೆತ್ತಿಕೊಳ್ಳಬೇಕು. ಅದೇ ರೀತಿ ಉಡುಪಿಯ ಅಸಮರ್ಪಕ ಹಾಗೂ ಕಡಿಮೆ ಸಾಮರ್ಥ್ಯದ ಒಳಚರಂಡಿಯ ಜಾಲವನ್ನು ಮೇಲ್ದರ್ಜೆಗೆ ಏರಿಸಬೇಕು. ಇದಕ್ಕೆ ಪೂರಕವಾಗಿ ನದಿಯ ಇಕ್ಕೆಲಗಳಲ್ಲಿ ವಾಸ ಮಾಡುತ್ತಿರುವ ನಾಗರಿಕರು ಸಹಕರಿಸಬೇಕು. ಹೀಗೆ ಜಾಗೃತ ನಾಗರಿಕ ಸಮಾಜದಿಂದ ಮಾತ್ರ ಇಂದ್ರಾಣಿಯ ಪುನಶ್ಚೇತನ ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯ ಪಟ್ಟರು.

ಇಂದ್ರಾಣಿ ಶ್ರೀಪಂಚದುರ್ಗ ಪರಮೇಶ್ವರಿ ದೇವಳದ ಆಡಳಿತ ಮೊಕ್ತೇಸರ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಇಂದ್ರಾಣಿ ನದಿಗೆ ಒಂದು ಸಾವಿರ ವರ್ಷಗಳ ಇತಿಹಾಸವಿದೆ. ಈ ನದಿಯ ನೀರಿನಿಂದಲೇ ಈ ಭಾಗದ ಜನರು ಕೃಷಿ ಮಾಡುತ್ತಿದ್ದರು. ಆದರೆ ಈಗ ಜನರಲ್ಲಿ ಕೃಷಿ ವ್ಯಾಮೋಹವೂ ಕಡಿಮೆ ಆಗಿದೆ. ಇದರಿಂದ ಇಂದು ನದಿ ಕಲುಷಿತಗೊಂಡಿದೆ. ಆದುದರಿಂದ ಜನ ಎಚ್ಚೆತ್ತುಕೊಂಡು ಪ್ರಕೃತಿ ರಕ್ಷಣೆ ಮಾುವ ಕಾರ್ಯ ಮಾಡಬೇಕು ಎಂದರು.

ಪರಿಸರಾಸಕ್ತರಾದ ಪ್ರೇಮಾನಂದ ಕಲ್ಮಾಡಿ, ವಿಜಯ ಕೊಡವೂರು, ಪ್ರಕಾಶ್ ಮಲ್ಪೆ, ಪೂರ್ಣಿಮಾ ಜನಾರ್ದನ್, ಮುಹಮ್ಮದ್ ಮೌಲ, ಎಸ್.ಎ.ಕೃಷ್ಣಯ್ಯ, ಸಂಘಟಕ ಶ್ರೀಕಾಂತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಬಳಿಕ ಇಂದ್ರಾಣಿ ನದಿ ಉಗಮ ಸ್ಥಾನದಿಂದ ಆರಂಭ ಗೊಂಡ ಬೈಕ್ ರ್ಯಾಲಿ ನದಿ ಹರಿಯುವ ಮಾರ್ಗವಾಗಿ ಇಂದ್ರಾಳಿ, ಕಲ್ಸಂಕ, ಗುಂಡಿಬೈಲು, ಅಂಕದಕಟ್ಟೆ ಮೂಲಕ ಮೂಡುಬೆಟ್ಟುವಾಗಿ ಸಾಗಿ ಕೊಡವೂರಿನಲ್ಲಿ ಸಮಾಪ್ತಿಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X