Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಂಗ್ರೆಯಲ್ಲಿ ಸಮುದ್ರಪಾಲಾದ ನಾಡದೋಣಿ:...

ಬೆಂಗ್ರೆಯಲ್ಲಿ ಸಮುದ್ರಪಾಲಾದ ನಾಡದೋಣಿ: ಮೂವರ ರಕ್ಷಣೆ

ನಾಡದೋಣಿ ಸಂಪೂರ್ಣ ಜಖಂ

ವಾರ್ತಾಭಾರತಿವಾರ್ತಾಭಾರತಿ28 July 2019 9:16 PM IST
share
ಬೆಂಗ್ರೆಯಲ್ಲಿ ಸಮುದ್ರಪಾಲಾದ ನಾಡದೋಣಿ: ಮೂವರ ರಕ್ಷಣೆ

ಮಂಗಳೂರು: ಬೆಂಗ್ರೆ ಅಳಿವೆ ಬಾಗಿಲುವಿನಲ್ಲಿ ರವಿವಾರ ಸಂಜೆ ಅಲೆಗಳ ಅಬ್ಬರಕ್ಕೆ ನಾಡದೋಣಿಯೊಂದು ಮಗುಚಿಬಿದ್ದಿದ್ದು, ಅಧಿಕಾರಿಗಳು ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿ ಮೂವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಉಳ್ಳಾಲ ಕೋಟೆಪುರ ನಿವಾಸಿಗಳಾದ ಆಸಿಫ್ (43), ಇಮ್ರಾನ್ (19), ಇಸ್ಮಾಯೀಲ್ (45) ಪ್ರಾಣಾಪಾಯದಿಂದ ಪಾರಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರವಿವಾರ ಸಂಜೆ 5:30ರ ವೇಳೆ ಕೋಟೆಪುರದ ಆಸಿಫ್ ಅವರಿಗೆ ಸೇರಿದ ‘ಹಯಾನ್’ ಎಂಬ ಮೀನುಗಾರಿಕೆ ದೋಣಿ ಸುರತ್ಕಲ್ ಸಮೀಪ ಮೀನುಗಾರಿಕೆ ನಡೆಸುತ್ತಿದ್ದಾಗ ಇಂಜಿನ್ ಕೆಟ್ಟು ಹೋಗಿತ್ತು. ಇದರ ಇಂಜಿನ್ ಬದಲು ಮಾಡಲು ಇಕ್ಬಾಲ್ ಎಂಬವರ ಮಾಲಕತ್ವದ ‘ಸೈಯದ್ ಮದನಿ’ ದೋಣಿಯಲ್ಲಿ ಕೋಟೆಪುರದ ಇಕ್ಬಾಲ್, ಆಸಿಫ್, ಇಸ್ಮಾಯೀಲ್ ಕೋಟೆಪುರದಿಂದ ಸುರತ್ಕಲ್‌ಗೆ ತೆರಳಿ ಇಂಜಿನ್ ನೀಡಿದ್ದರು.

ಆ ಬಳಿಕ ಕೋಟೆಪುರದತ್ತ ಮರಳುತ್ತಿದ್ದಾಗ ಅಳಿವೆಬಾಗಿಲಿನ ಬಳಿ ಅಲೆಗಳ ಅಬ್ಬರಕ್ಕೆ ದೋಣಿ ಮಗುಚಿ ಬಿದ್ದಿದೆ. ಈ ಸಂದರ್ಭ ದೋಣಿಯಲ್ಲಿದ್ದ ಮೂವರು ನೀರಿಗೆಸೆಯಲ್ಪಟ್ಟು ಸಮುದ್ರ ಅಲೆಗಳ ರಭಸಕ್ಕೆ ಈಜಲಾಗದೆ ಸಹಾಯಕ್ಕಾಗಿ ಯಾಚಿಸುತ್ತಿದ್ದರು.

ಅಪಾಯವನ್ನು ಅರಿತ ಮಂಗಳೂರು ಕರಾವಳಿ ಕಾವಲು ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ವೈ.ಗಂಗೀರೆಡ್ಡಿ, ಎಸ್ಸೈಗಳಾದ ರೇವಣ್ಣ, ಆನಂದ್, ತಾರಾನಾಥ ಹಾಗೂ ಸಿಬ್ಬಂದಿ ಸುರೇಶ್ ಕುಂದರ್, ನರೇಶ್ ಕೋಟ್ಯಾನ್, ನಾಸಿರ್, ಕರಾವಳಿ ನಿಯಂತ್ರಣ ದಳ (ಕೆಎಲ್‌ಇ) ಸದಸ್ಯರಾದ ಹರ್ಷಿತ್ ಖಾರ್ವಿ, ರಾಜೇಶ್, ತುಕಾರಾಮ್, ಸ್ಥಳೀಯರ ಮೀನುಗಾರರು ಹಾಗೂ ಸೃಳೀಯರ ನಾಗರಿಕರ ಸಹಕಾರದಿಂದ ನೀರಿನಿಂದ ಮೇಲಕ್ಕೆತ್ತಿದ್ದಾರೆ.

ದೋಣಿಯು ಸಮುದ್ರದಲ್ಲಿ ತೇಲುತ್ತಾ ಬಂದು ಅಳಿವೆ ಬಾಗಿಲಿನ ಉತ್ತರ ದಿಕ್ಕಿನ ಬೆಂಗ್ರೆ ಬಳಿಯ ಸಮುದ್ರ ತಡೆಗೋಡೆಗೆ ತಾಗಿದ್ದು ಸಂಪೂರ್ಣ ಜಖಂಗೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X