Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್: ಬಾಲಕನ ಥಳಿಸಿ ಹತ್ಯೆ ಪ್ರಕರಣ;...

ಗುಜರಾತ್: ಬಾಲಕನ ಥಳಿಸಿ ಹತ್ಯೆ ಪ್ರಕರಣ; ನಾಲ್ವರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ28 July 2019 10:39 PM IST
share
ಗುಜರಾತ್: ಬಾಲಕನ ಥಳಿಸಿ ಹತ್ಯೆ ಪ್ರಕರಣ; ನಾಲ್ವರು ಆರೋಪಿಗಳ ಬಂಧನ

ಗಾಂಧಿನಗರ, ಜು. 28: ಬುಡಕಟ್ಟು ಬಾಲಕಿಯನ್ನು ಪ್ರೀತಿಸುತ್ತಿದ್ದ ಆರೋಪದಲ್ಲಿ 17 ವರ್ಷದ ಮುಸ್ಲಿಂ ಬಾಲಕನನ್ನು ಗುಂಪೊಂದು ಥಳಿಸಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಶನಿವಾರ ನಾಲ್ವರನ್ನು ಬಂಧಿಸಿದ್ದಾರೆ. ಗುಂಪಿನಿಂದ ಥಳಿತಕ್ಕೊಳಗಾಗಿ ಮೃತಪಟ್ಟ ಬಾಲಕನನ್ನು ಫಯಾಝ್ ಎಂದು ಗುರುತಿಸಲಾಗಿದೆ.

 ‘‘ಝಗಾಡಿಯಾ ತಾಲೂಕಿನಲ್ಲಿ ಜುಲೈ 24ರಂದು ಫಯಾಝ್‌ನನ್ನು ಥಳಿಸಿ ಹತ್ಯೆಗೈಯಲಾಗಿತ್ತು. ಈ ಘಟನೆ ಕುರಿತಂತೆ ಝಗಾಡಿಯಾ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ ದಾಖಲಿಸಲಾಗಿತ್ತು ಹಾಗೂ ತನಿಖೆ ಆರಂಭಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯಾಚರಣೆ ಮುಂದುವರಿದಿದೆ’’ ಎಂದು ಅಂಕ್ಲೇಶ್ವರದ ಉಪ ಎಸ್‌ಪಿ ಎಲ್.ಎ. ಝಾಲಾ ತಿಳಿಸಿದ್ದಾರೆ.

 ‘‘ನನ್ನ ಪುತ್ರ ಆತನ ಐವರು ಗೆಳೆಯರೊಂದಿಗೆ ಅಂಕ್ಲೇಶ್ವರಕ್ಕೆ ತೆರಳಿದ್ದ ಸಂದರ್ಭ ಈ ಘಟನೆ ನಡೆದಿದೆ’’ ಎಂದು ಫಯಾಝ್‌ನ ತಂದೆ ಮುಹಮ್ಮದ್ ಸುಲ್ತಾನ್ ಅಬ್ದುಲ್ ರಹೀಮ್ ಖುರೇಶಿ ಹೇಳಿದ್ದಾರೆ. ‘‘ನನ್ನ ಪತ್ನಿ ಫಯಾಝ್‌ಗೆ ಕರೆ ಮಾಡಿದ್ದಳು. ಆಗ ಆತ, ತನ್ನನ್ನು ಕರೆದೊಯ್ಯಲು ಬೊರಿದ್ರಾಕ್ಕೆ ಆಗಮಿಸುವಂತೆ ತಿಳಿಸಿದ್ದ. ನಾನು ಅಲ್ಲಿಗೆ ಹೋದಾಗ, ಆತ ಕೆಲವು ಜನರಿಂದ ಥಳಿತಕ್ಕೊಳಗಾಗಿ ಮೇಲೇಳಲಾಗದ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದ. ಕೂಡಲೇ ಆತನನ್ನು ಎರಡು ಬೇರೆ ಬೇರೆ ಆಸ್ಪತ್ರೆಗೆ ಕರೆದೊಯ್ದೆ. ಆದರೆ, ಆತನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ’’ ಎಂದು ಖುರೇಶಿ ಹೇಳಿದ್ದಾರೆ.

ಥಳಿತದಿಂದ ಅವನ ಕೈ, ಪಿತ್ತಕೋಶ ಹಾಗೂ ಪಕ್ಕೆಲುಬು ತೀವ್ರವಾಗಿ ಜಖಂಗೊಂಡಿತ್ತು. ಆತ ಬದುಕುವ ಸಾಧ್ಯತೆ ಅತಿ ಕಡಿಮೆ ಎಂದು ವೈದ್ಯರು ನನಗೆ ತಿಳಿಸಿದ್ದರು. ಆದುದರಿಂದ ನಾನು ಆತನನ್ನು ಸೂರತ್‌ನಲ್ಲಿರುವ ಇನ್ನೊಂದು ಆಸ್ಪತ್ರೆಗೆ ಕರೆದೊಯ್ದೆ. ವೈದ್ಯರು ಆತನಿಗೆ ಚಿಕಿತ್ಸೆ ನೀಡಲು ಪ್ರಯತ್ನಿಸಿದರು. ಆದರೆ, ಆತ ಮೃತಪಟ್ಟ’’ ಎಂದು ಅವರು ತಿಳಿಸಿದ್ದಾರೆ.

ನಾನು ನನ್ನ ಪುತ್ರನಿಗೆ ನ್ಯಾಯ ನೀಡುವಂತೆ ಆಗ್ರಹಿಸುತ್ತೇನೆ. ಆತನಿಗೆ ಥಳಿಸಿದ ಗುಂಪಿನಲ್ಲಿ ಎಷ್ಟು ಮಂದಿ ಇದ್ದರು ಎಂದು ನನಗೆ ಗೊತ್ತಿಲ್ಲ. ಆದರೆ, ಅವರು ನನ್ನ ಪುತ್ರನಿಗೆ ವಿವೇಚನಾರಹಿತವಾಗಿ ಥಳಿಸಿದರು. ನಮಗೆ ನ್ಯಾಯ ಬೇಕು. ಆರೋಪಿಗಳಿಗೆ ಶಿಕ್ಷೆ ನೀಡಬೇಕು ಎಂದು ನಾನು ಆಗ್ರಹಿಸುತ್ತೇನೆ. ಪೊಲೀಸ್ ಹಾಗೂ ಸರಕಾರದಿಂದ ನ್ಯಾಯ ಸಿಗುತ್ತದೆ ಎಂದು ನನಗೆ ಭರವಸೆ ಇದೆ ಎಂದು ಖುರೇಶಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X