Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಉದ್ಘಾಟನೆ ಭಾಗ್ಯ ಕಾಣದ ಶತಮಾನ ಕಂಡ...

ಉದ್ಘಾಟನೆ ಭಾಗ್ಯ ಕಾಣದ ಶತಮಾನ ಕಂಡ ಮಲ್ಲೇಶ್ವರಂ ಹಳೆ ಮಾರುಕಟ್ಟೆ

ಪ್ರಕಾಶ್ ಅವರಡ್ಡಿಪ್ರಕಾಶ್ ಅವರಡ್ಡಿ29 July 2019 12:08 AM IST
share
ಉದ್ಘಾಟನೆ ಭಾಗ್ಯ ಕಾಣದ ಶತಮಾನ ಕಂಡ ಮಲ್ಲೇಶ್ವರಂ ಹಳೆ ಮಾರುಕಟ್ಟೆ

ಬೆಂಗಳೂರು, ಜು.28: ಶತಮಾನ ಪೂರೈಸಿರುವ ಮಲ್ಲೇಶ್ವರಂನ ಹಳೆ ಮಾರುಕಟ್ಟೆ (ತರಕಾರಿ ಮಾರುಕಟ್ಟೆ) ನಿರ್ಮಾಣಗೊಂಡು ಒಂದು ವರ್ಷ ಕಳೆದರೂ ಉದ್ಘಾಟನೆ ಭಾಗ್ಯವನ್ನು ಇನ್ನೂ ಕಂಡಿಲ್ಲ.

ನಾಲ್ಕು ವರ್ಷಗಳ ಹಿಂದೆ ಹಳೆ ಮಾರುಕಟ್ಟೆಯನ್ನು ಬಹು ಬೇಗನೆ ಪುನರ್ ನಿರ್ಮಾಣ ಮಾಡುವುದಾಗಿ ಮೊದಲಿದ್ದ ವ್ಯಾಪಾರಸ್ಥರಿಗೆ ಬಿಬಿಎಂಪಿ ಭರವಸೆ ನೀಡಿತ್ತು. ಆದರೆ, ಪುನರ್ ನಿರ್ಮಾಣ ಮಾಡಲು ಮೂರು ವರ್ಷ ತೆಗೆದುಕೊಂಡ ಪಾಲಿಕೆಯೂ ನಿರ್ಮಾಣವಾದ ಮೇಲೂ ಉದ್ಘಾಟನೆಗೊಳಿಸಲು ಮೀನಾಮೇಷ ಎಣಿಸುತ್ತಿರುವುದರಿಂದ ವ್ಯಾಪಾರಸ್ಥರಲ್ಲಿ ಆತಂಕದ ಛಾಯೆ ಮೂಡಿದೆ.

ಹಳೆಯ ತರಕಾರಿ ಮಾರುಕಟ್ಟೆಯಲ್ಲಿ ಸುಮಾರು ನೂರು ವರ್ಷಗಳಿಂದ ವ್ಯಾಪಾರಸ್ಥರು ವ್ಯಾಪಾರ ಮಾಡಿಕೊಂಡು ಬರುತ್ತಿದ್ದರೂ ಪಾಲಿಕೆಯು ನಾಲ್ಕು ವರ್ಷಗಳ ಹಿಂದೆ ಬಂದು ವ್ಯಾಪಾರಸ್ಥರಿಗೆ ಮಾರುಕಟ್ಟೆಯನ್ನು ಪುನರ್ ನಿರ್ಮಾಣ ಮಾಡಿ, ಹೊಸ ಮಳಿಗೆಗಳನ್ನು ತೆರೆದು ಮೊದಲಿದ್ದ ವ್ಯಾಪಾರಸ್ಥರಿಗೆ ನೀಡುವುದಾಗಿ ಭರವಸೆ ನೀಡಿತ್ತು. ಆದರೆ, ನಿರ್ಮಾಣಗೊಂಡಿರುವ 48 ಮಳಿಗೆಗಳೂ ಇನ್ನೂ ವ್ಯಾಪಾರಸ್ಥರ ಹಂಚಿಕೆಯಾಗಿಲ್ಲ. ಉದ್ಘಾಟನೆಯನ್ನೂ ಕಂಡಿಲ್ಲ.

ಹಳೆ ಮಾರುಕಟ್ಟೆ ಇದ್ದಾಗ ವ್ಯಾಪಾರಸ್ಥರು ತಗಡಿನ ಸೀಟುಗಳನ್ನು ಹಾಕಿಕೊಂಡು ಬೆಳಗ್ಗೆಯಿಂದ ರಾತ್ರಿಯವರೆಗೆ ತರಕಾರಿ ವ್ಯಾಪಾರ ಮಾಡುತ್ತಿದ್ದರು. ಮಳೆ ಬಂದರೆ ವ್ಯಾಪಾರಸ್ಥರು ಹಲವು ಸಮಸ್ಯೆಗಳನ್ನು ಅನುಭವಿಸುತ್ತಿದ್ದರು. ಇದರ ಜೊತೆಗೆ ಇಲಿಗಳ ಕಾಟ, ಹೆಗ್ಗಣಗಳ ಕಾಟ, ನೀರಿನ ಸಮಸ್ಯೆಯೂ ಹೆಚ್ಚಾಗಿಯೆ ಇತ್ತು. ಈ ಎಲ್ಲ ಸಮಸ್ಯೆಗಳನ್ನು ಹೋಗಲಾಡಿಸಲು ಭರವಸೆ ನೀಡಿದ್ದ ಬಿಬಿಎಂಪಿಯು ಮಾರುಕಟ್ಟೆಯನ್ನು ಪುನರ್ ನಿರ್ಮಾಣ ಮಾಡಿದರೂ ಒಂದು ವರ್ಷದಿಂದ ಮಳಿಗೆಗಳನ್ನು ವ್ಯಾಪಾರಸ್ಥರಿಗೆ ನೀಡಿಲ್ಲ.

ಈಗ ನಿರ್ಮಾಣಗೊಂಡಿರುವ ಮಳಿಗೆಗಳು ವಿದ್ಯುತ್ ಸೇರಿ ಎಲ್ಲ ಸೌಲಭ್ಯಗಳನ್ನು ಹೊಂದಿದ್ದರೂ ಮಳಿಗೆಗಳು ಸ್ವಲ್ಪ ಎತ್ತರ ಮಟ್ಟದಲ್ಲಿದ್ದು ವ್ಯಾಪಾರಸ್ಥರಿಗೆ ಮಳಿಗೆಗಳ ಒಳಗಡೆ ಹೋಗಲು ಹೊಸದೊಂದು ಬಿದರಿನ ಏಣಿಯನ್ನು ಖರೀದಿಸುವ ಪರಿಸ್ಥಿತಿ ಬಂದಿದೆ. ಬಿಬಿಎಂಪಿ ಅವರ ಸೂಚನೆಯಂತೆ ವ್ಯಾಪಾರದ ಜಾಗವನ್ನು ಖಾಲಿ ಮಾಡಿಕೊಟ್ಟಿದ್ದ ವ್ಯಾಪಾರಸ್ಥರು, ಮಾರುಕಟ್ಟೆಯ ಹತ್ತಿರದಲ್ಲಿಯೆ ಇರುವ ಕೆಲ ಮನೆಗಳ ಮುಂದೆ, ಮಾರುಕಟ್ಟೆಯ ಮುಂದೆ, ಅಂಚೆ ಇಲಾಖೆಯ ಮುಂದೆ ಅಂಗಡಿಗಳನ್ನಿಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ಬಿಬಿಎಂಪಿ ಅವರು ಇಂದಲ್ಲ ನಾಳೆ ಮಳಿಗೆಗಳನ್ನು ಹಂಚಿಕೆ ಮಾಡುತ್ತಾರೆ ಎಂದು ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

ಹಳೆ ಮಾರುಕಟ್ಟೆಯಲ್ಲಿ ಯಾವುದೆ ಮೂಲಭೂತ ಸೌಲಭ್ಯಗಳು ಇಲ್ಲವೆಂದು ಕಡಿಮೆ ಸಂಖ್ಯೆಯಲ್ಲಿ ವ್ಯಾಪಾರಸ್ಥರಿದ್ದರು. ಆದರೆ, ಈಗ 48 ಮಳಿಗೆಗಳು ನಿರ್ಮಾಣಗೊಂಡಿದ್ದು, ವ್ಯಾಪಾರಸ್ಥರ ಸಂಖ್ಯೆಯೂ ಹೆಚ್ಚಾಗಿದೆ. ಮೊದಲು ಅದೇ ಜಾಗದಲ್ಲಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಸ್ಥರು ಪಾಲಿಕೆಯವರು ನಮ್ಮ ಪೋಟೊಗಳನ್ನು ತೆಗೆದುಕೊಂಡು, ಹೆಸರನ್ನು ಬರೆದುಕೊಂಡಿದ್ದಾರೆ. ಹೀಗಾಗಿ, ಮೊದಲು ನಮಗೆ ಮಳಿಗೆಗಳನ್ನು ನೀಡಿ ನಂತರ ಇತರರಿಗೆ ನೀಡುತ್ತಾರೆ ಎಂದು ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. 

ನಮ್ಮ ತಾತ-ಮುತ್ತಾತನ ಕಾಲದಿಂದಲೂ ಮಲ್ಲೇಶ್ವರಂನ ಹಳೆ ಮಾರುಕಟ್ಟೆಯಲ್ಲಿಯೆ ನಾವು ವ್ಯಾಪಾರ ಮಾಡುತ್ತಿದ್ದೇವೆ. ನಮಗೆ ಬೇಗನೆ ಮಳಿಗೆಗಳನ್ನು ಹಂಚಿಕೆ ಮಾಡಿದರೆ ಅನುಕೂಲವಾಗುತ್ತದೆ. ವ್ಯಾಪಾರವೂ ಸ್ವಲ್ಪ ಮಟ್ಟಿಗೆ ಸುಧಾರಿಸಬಹುದು.

-ನಳಿನಿ, ವ್ಯಾಪಾರಸ್ಥೆ

ನಾವು ಮಲ್ಲೇಶ್ವರಂನ ಹಳೆ ಮಾರುಕಟ್ಟೆಯಿಂದ ಹೊರ ಬಂದ ಮೇಲೆ ಮನೆಯೊಂದರ ಮುಂದೆ ಕುಳಿತು ವ್ಯಾಪಾರ ಮಾಡುತ್ತಿದ್ದೇನೆ. ಮಳಿಗೆಗಳು ಹಂಚಿಕೆಯಾದರೆ ಮಳಿಗೆಗಳನ್ನು ಸ್ವಚ್ಛವಾಗಿಟ್ಟುಕೊಂಡು ವ್ಯಾಪಾರ ಮಾಡುತ್ತೇವೆ.

-ಹರೀಶ್, ವ್ಯಾಪಾರಸ್ಥ

share
ಪ್ರಕಾಶ್ ಅವರಡ್ಡಿ
ಪ್ರಕಾಶ್ ಅವರಡ್ಡಿ
Next Story
X