ನಿಲ್ಲಿಸಿದ್ದ ಕಾರಿಗೆ ಆಕಸ್ಮಿಕ ಬೆಂಕಿ
ಸಾಂದರ್ಬಿಕ ಚಿತ್ರ
ಬೆಂಗಳೂರು, ಜು.28: ಇಲ್ಲಿನ ಶಾಸಕರ ಭವನದ ಹಿಂಭಾಗ ನಿಲ್ಲಿಸಿದ್ದ ಕಾರಿಗೆ ರವಿವಾರ ಮುಂಜಾನೆ ಆಕಸ್ಮಿಕ ಬೆಂಕಿ ತಗುಲಿ ಇಡೀ ಕಾರು ಸುಟ್ಟುಹೋಗಿದೆ.
ವಿಧಾನಸೌಧ ಕಡೆಯಿಂದ ಶಾಸಕರ ಭವನ ಪ್ರವೇಶಿಸುವ ದ್ವಾರದ ಬಳಿ ವಿನಯ್ ಎಂಬುವವರು ನಿಲ್ಲಿಸಿದ್ದ ಕಾರಿಗೆ ರವಿವಾರ ಮುಂಜಾನೆ 4:15ರ ವೇಳೆ ಆಕಸ್ಮಿಕ ಬೆಂಕಿ ತಗುಲಿ ಈ ದುರ್ಘಟನೆ ಸಂಭವಿಸಿದ್ದು, ಈ ಸಂಬಂಧ ವಿಧಾನಸೌಧ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Next Story