Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿ, ಜಾವಡೇಕರ್‌ಗೆ ಹುಲಿಗಳ...

ಪ್ರಧಾನಿ ಮೋದಿ, ಜಾವಡೇಕರ್‌ಗೆ ಹುಲಿಗಳ ಬಹಿರಂಗ ಪತ್ರ!

ವಾರ್ತಾಭಾರತಿವಾರ್ತಾಭಾರತಿ29 July 2019 9:43 AM IST
share
ಪ್ರಧಾನಿ ಮೋದಿ, ಜಾವಡೇಕರ್‌ಗೆ ಹುಲಿಗಳ ಬಹಿರಂಗ ಪತ್ರ!

ಹೊಸದಿಲ್ಲಿ, ಜು.29: ಚಿತ್ರ ನಿರ್ಮಾಪಕರು, ನಟರು, ಇತಿಹಾಸಕಾರರು ಹಾಗೂ ಮತ್ತಿತರರು ಪ್ರಧಾನಿ ನರೇಂದ್ರ ಮೋದಿಯವರಿಗೆ ಬಹಿರಂಗ ಪತ್ರ ಬರೆದ ಬೆನ್ನಲ್ಲೇ, ದೇಶದ 2,600ಕ್ಕೂ ಹೆಚ್ಚು ಹುಲಿಗಳು, "ಕಾಡು ಉಳಿಸಿ- ಹುಲಿ ಉಳಿಸಿ" ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಬಹಿರಂಗಪತ್ರ ಬರೆದಿವೆ.

ಇಬ್ಬರೂ ಮುಖಂಡರಿಗೆ ವಿಶ್ವ ಹುಲಿ ದಿನಾಚರಣೆಯ ಶುಭಾಶಯ ಹೇಳುವ ಮೂಲಕ ಪತ್ರ ಆರಂಭಿಸಿದ್ದು, "ನಮ್ಮ ಗಣತಿ ಸಂಖ್ಯೆಯನ್ನು ಪ್ರಕಟಿಸಿದಾಗಲೆಲ್ಲ, ವಿಶ್ವದಲ್ಲೇ ಅತಿ ಹೆಚ್ಚು ಹುಲಿಗಳು ಇರುವ ದೇಶ ಎಂಬ ಹೆಮ್ಮೆಯ ಪರಂಪರೆಗೆ ದೇಶ ಪಾತ್ರವಾಗುತ್ತಿದೆ. ನಮ್ಮ ವರ್ಗರಹಿತ ಸಮಾಜದಲ್ಲಿ ನಾವು ಗಣನೀಯವಾಗಿ ಪ್ರಗತಿ ಸಾಧಿಸಿದ್ದು ರೋಮಾಂಚನ ತಂದಿದೆ"

"ಇದು ಇಡೀ ದೇಶ ಸಂಭ್ರಮಿಸುವ ವಿಚಾರ; ಇದು ಟಾಂಟಾಂ ಹೊಡೆಯಬಹುದಾದ ಸಾಧನೆ. ಆದರೆ ನಿಮ್ಮ ಸಹ ಮಾನವರು ನಮ್ಮನ್ನು ನಡೆಸಿಕೊಳ್ಳುತ್ತಿರುವ ರೀತಿ ಮಾತ್ರ ಅಮಾನವೀಯ" ಎಂದು ಬಣ್ಣಿಸಲಾಗಿದೆ.

"ಕಳೆದ ವಾರವಷ್ಟೇ ದೇಶದ ಎರಡು ಭಾಗಗಳಿಂದ ಭಯಾನಕ ಸುದ್ದಿ ಬಂದಿದೆ. ಫಿಲಿಬಿಟ್‌ನಲ್ಲಿ ನಮ್ಮಲ್ಲೊಬ್ಬರು ನಿರ್ದಯವಾಗಿ ಹತ್ಯೆಯಾಗಿದ್ದಾರೆ. ಬಂಡೀಪುರದಲ್ಲಿ ಹಿರಿಯ ಹುಲಿಯೊಂದು ಹಿಟ್ ಆ್ಯಂಡ್ ರನ್‌ಗೆ ಬಲಿಯಾಗಿದೆ. ಕೆಲ ವಾರಗಳ ಹಿಂದಷ್ಟೇ, ಕೇಂದ್ರ ಭಾರತದ ಪೆಂಚ್ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿಯುದ್ದಕ್ಕು ಓಡಾಡಿ ಕೊನೆಗೂ ತನ್ನ ಕಥೆ ಹೇಳಲು ಬದುಕಿ ಉಳಿದಿದೆ"

"ಕೇವಲ ಮನುಷ್ಯಭಾಷೆಯಲ್ಲಿ ಸಂವಾದ ನಡೆಸಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ನಮ್ಮನ್ನು ಭಯಾನಕವಾಗಿ ನಡೆಸಿಕೊಳ್ಳಲಾಗುತ್ತಿದೆ. ನಮ್ಮಲ್ಲೂ ಭಯಾನಕರು ಇದ್ದಾರೆ. ಅವರ ನಡತೆಯನ್ನು ತಿದ್ದಲು ಪ್ರಯತ್ನಿಸುತ್ತಿದ್ದೇವೆ. ಆದಾಗ್ಯೂ ಈ ಘಟನೆಗಳು ನಿಮ್ಮ ವರ್ಗ ಸಮಾಜದ ಲಕ್ಷಣಗಳು ಎಂಬ ಭಾವನೆ ನಮ್ಮಲ್ಲಿ ದಟ್ಟವಾಗಿ ಬೆಳೆಯುತ್ತಿವೆ" ಎಂದು ವಿವರಿಸಲಾಗಿದೆ.

"ನಮಗೆ ಮನುಷ್ಯರ ಬಗ್ಗೆ ಕೆಟ್ಟ ಭಾವನೆಯೇನೂ ಇಲ್ಲ; ಶತಮಾನಗಳಿಂದ ನಾವು ಸಹಬಾಳ್ವೆ ನಡೆಸಿಕೊಂಡು ಬಂದಿದ್ದೇವೆ. ಅಯ್ಯಪ್ಪ ಹಾಗೂ ದುರ್ಗೆಯ ವಾಹನವಾಗಿ ನಮ್ಮ ಪೂರ್ವಜನರನ್ನು ನೀವು ಪೂಜಿಸುತ್ತಿದ್ದ ನಿದರ್ಶನಗಳಿವೆ. ಆದರೆ ಇಂದು ನಾವು ನಿಮ್ಮ ಮರ್ಜಿಯಲ್ಲಿದ್ದೇವೆ ಎಂದು ಕೈಮುಗಿದು ಹೇಳುವ ಪರಿಸ್ಥಿತಿ ನಿರ್ಮಾಣವಾಗಿದೆ"

"ನಮ್ಮ ವಾಸತಾಣಗಳ ಮೂಲಕ ಹಾದುಹೋಗಿರುವ ರಸ್ತೆಗಳನ್ನು ದಾಟುವ ವೇಳೆ ನಮ್ಮ ಕುಟುಂಬದ ಕೆಲವರು ಬೇರ್ಪಡುತ್ತಿದ್ದಾರೆ. ಆಹಾರ ಹಾಗೂ ನೀರಿಗಾಗಿ ನಾವು ಕಾಡಿನಿಂದ ಹೊರಗೆ ಬರುವುದು ಅನಿವಾರ್ಯವಾಗಿದೆ. ಮನುಷ್ಯರು ವಾಸಿಸುವ ಪ್ರದೇಶದಲ್ಲಿ ಮೂರು ಕಿಲೋಮೀಟರ್ ಒಳಗೆವರೆಗೂ ಬರುವುದು ಹಾನಿ ಮಾಡುವ ಉದ್ದೇಶದಿಂದಲ್ಲ. ಹಸಿರಿಗಾಗಿ ಕೃಷಿ ಬೇಲಿ ದಾಟುವಾಗ ವಿದ್ಯುತ್ ಸ್ಪರ್ಶದ ಭಯ ಕಾಡುತ್ತಿದೆ. ಇನ್ನೂ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ"

share
ವಾರ್ತಾಭಾರತಿ
ವಾರ್ತಾಭಾರತಿ
Next Story
X