ಜೈಶ್ರೀರಾಮ್ ಎಂದು ಘೋಷಣೆ ಕೂಗದ ಮುಸ್ಲಿಂ ಬಾಲಕನಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಲಕ್ನೋ, ಜು.29: ಉತ್ತರಪ್ರದೇಶದ ಚಂಚೌಲಿ ಜಿಲ್ಲೆಯಲ್ಲಿ 15 ವರ್ಷದ ಬಾಲಕನಿಗೆ ನಾಲ್ವರು ದುಷ್ಕರ್ಮಿಗಳ ತಂಡ ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ನಡೆದಿದೆ. ಜೈ ಶ್ರೀರಾಮ್ ಎಂಬ ಘೋಷಣೆ ಕೂಗಲು ನಿರಾಕರಿಸಿದ್ದಕ್ಕೆ ಗುಂಪು ನನ್ನ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದೆ ಎಂದು ಬಾಲಕ ಆರೋಪಿಸಿದ್ದಾನೆ.
ಬಾಲಕನನ್ನು ಕಾಶಿಯ ಕಬೀರ್ ಚೌರ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕನ ಸ್ಥಿತಿ ಗಂಭೀರವಾಗಿದ್ದು, ದೇಹದ ಶೇ.60ರಷ್ಟ್ಟು ಸುಟ್ಟಗಾಯವಾಗಿದೆ.
ಗುಂಪೊಂದು ನನ್ನ ಬಳಿ ಜೈಶ್ರೀರಾಮ್ ಘೋಷಣೆ ಕೂಗಲು ಬಲವಂತಪಡಿಸಿತ್ತು. ನಾನು ಘೋಷಣೆ ಕೂಗಲು ನಿರಾಕರಿಸಿದೆ. ಆಗ ಅವರು ನನಗೆ ಥಳಿಸಿದರು. ಬಳಿಕ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದರು ಎಂದು ಬಾಲಕ ದೂರಿದ್ದಾನೆ.
ಬಾಲಕನ ಹೇಳಿಕೆ ಗೊಂದಲಕಾರಿಯಾಗಿದೆ ಎಂದು ಚಂಚೌಲಿ ಪೊಲೀಸರು ಹೇಳಿದ್ದಾರೆ.
ಬಾಲಕನೇ ಸ್ವತಃ ಬೆಂಕಿ ಹಚ್ಚಿಕೊಂಡು ಶೇ.45ರಷ್ಟು ಸುಟ್ಟಿದ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾನೆ. ಆತ ಬೇರೆ ಬೇರೆ ವ್ಯಕ್ತಿಗಳೊಂದಿಗೆ ವಿಭಿನ್ನ ಹೇಳಿಕೆ ಕೊಡುತ್ತಿದ್ದಾನೆ. ಹೀಗಾಗಿ ಇದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಚಂದೌಲಿ ಎಸ್ಪಿ ಸಂತೋಷ್ ಕುಮಾರ್ ಸಿಂಗ್ ತಿಳಿಸಿದ್ದಾರೆ