Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಂಡೀಸ್‌ನಲ್ಲಿ ಸರಣಿ ಗೆಲ್ಲುವುದೇ ನಮ್ಮ...

ವಿಂಡೀಸ್‌ನಲ್ಲಿ ಸರಣಿ ಗೆಲ್ಲುವುದೇ ನಮ್ಮ ಗುರಿ

ತಂಡದಲ್ಲಿ ಒಡಕಿಲ್ಲ, ರೋಹಿತ್ ಜೊತೆ ಮನಸ್ತಾಪವಿಲ್ಲ

ವಾರ್ತಾಭಾರತಿವಾರ್ತಾಭಾರತಿ29 July 2019 11:33 PM IST
share
ವಿಂಡೀಸ್‌ನಲ್ಲಿ ಸರಣಿ ಗೆಲ್ಲುವುದೇ ನಮ್ಮ ಗುರಿ

ಮುಂಬೈ, ಜು.29: ವೆಸ್ಟ್‌ಇಂಡೀಸ್‌ನಲ್ಲಿ ಸರಣಿ ಗೆಲ್ಲುವುದು ಟೀಮ್ ಇಂಡಿಯಾದ ಪ್ರಮುಖ ಗುರಿಯಾಗಿದೆ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ವೆಸ್ಟ್‌ಇಂಡೀಸ್‌ಗೆ ಪ್ರವಾಸ ಕೈಗೊಳ್ಳುವ ಮೊದಲು ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು ತಂಡದಲ್ಲಿ ಒಡಕಿದೆ ಎಂಬ ಆರೋಪವನ್ನು ತಳ್ಳಿ ಹಾಕಿದ್ದಾರೆ. ಉಪನಾಯಕ ರೋಹಿತ್ ಶರ್ಮಾ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ತಮ್ಮ ನಡುವಿನ ಸಂಬಂಧ ಚೆನ್ನಾಗಿದೆ. ಮೈದಾನದಲ್ಲಿ ಎಲ್ಲರೂ ಸಂಘಟಿತರಾಗಿ ಹೋರಾಡುತ್ತಾರೆ ಎಂದು ಹೇಳಿದರು.

‘‘ತಂಡದ ಸಂಬಂಧ ಚೆನ್ನಾಗಿಲ್ಲ ಎಂಬ ಮಾತನ್ನು ಹಲವು ಬಾರಿ ಕೇಳಿದ್ದೇನೆ. ಒಂದು ವೇಳೆ ಅಂತಹ ವಾತಾವರಣ ತಂಡದಲ್ಲಿದ್ದರೆ ಕಳೆದ ಎರಡು -ಮೂರು ವರ್ಷಗಳಿಂದ ಏನನ್ನು ಮಾಡಲು ಸಾಧ್ಯವಾಗುರಲಿಲ್ಲ. ಭಾರತ ಟೆಸ್ಟ್‌ನಲ್ಲಿ ನಂ.7ರಿಂದ ನಂ.1 ಸ್ಥಾನಕ್ಕೇರಿದೆ. ಏಕದಿನ ಕ್ರಿಕೆಟ್‌ನಲ್ಲೂ ನಮ್ಮ ಸಾಧನೆ ಕಡಿಮೆ ಇಲ್ಲ’’ ಎಂದು ಹೇಳಿದರು.

ರೋಹಿತ್ ಶರ್ಮಾ ಜೊತೆ ಸಂಬಂಧ ಚೆನ್ನಾಗಿಲ್ಲ ಎಂಬ ಮಾತುಗಳು ಕೇಳಿ ಬಂದ ಬಳಿಕ ನಿಮಗೆ ಅವರನ್ನು ಭೇಟಿಯಾಗಲು ಸಮಸ್ಯೆ ಆಗಿತ್ತೇ? ಎಂಬ ಪ್ರಶ್ನೆಗೆ ಉತ್ತರಿಸಿದ ಕೊಹ್ಲಿ ನಮ್ಮ ಒಳಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಯಾರು ಈ ರೀತಿ ವದಂತಿಯನ್ನು ಹುಟ್ಟು ಹಾಕುತ್ತಾರೋ ಮತ್ತು ಇದರಿಂದ ಪ್ರಯೋಜನ ಪಡೆಯಲು ಯಾರು ಯತ್ನಿಸುತ್ತಿದ್ದಾರೋ ಗೊತ್ತಿಲ್ಲ. ನಾವು ಟೀಮ್ ಇಂಡಿಯಾವನ್ನು ಅಗ್ರಸ್ಥಾನದಲ್ಲಿರಲು ಬಯಸುತ್ತೇವೆ. ಆದರೆ ಕೆಲವು ವ್ಯಕ್ತಿಗಳು ತಂಡವನ್ನು ಕೆಳಕ್ಕಿಳಿಸಲು ಬಯಿಸಿದ್ದಾರೆ ಎಂದರು.

► ಮುಖ್ಯ ಕೋಚ್ ಆಗಿ ರವಿ ಶಾಸ್ತ್ರಿ ಮುಂದುವರಿಕೆ:

ಭಾರತ ಸೆಮಿಫೈನಲ್‌ನಲ್ಲಿ ಸೋತು ನಿರ್ಗಮಿಸಿದ ಹಿನ್ನೆಲೆಯಲ್ಲಿ ಕೋಚ್ ರವಿ ಶಾಸ್ತ್ರಿ ವಿರುದ್ಧ ಕ್ರಿಕೆಟ್ ಅಭಿಮಾನಿಗಳಿಂದ ಆಕ್ರೋಶ ವ್ಯಕ್ತವಾಗಿತ್ತು. ಆದರೆ ರವಿ ಶಾಸ್ತ್ರಿ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಮುಂದುವರಿಯುವುದನ್ನು ನಾನು ಬಯಸಿರುವೆ ಎಂದು ಕೊಹ್ಲಿ ಹೇಳಿದ್ದಾರೆ. ರವಿ ಶಾಸ್ತ್ರಿ , ಬೌಲಿಂಗ್ ಕೋಚ್ ಭರತ್ ಅರುಣ್, ಬ್ಯಾಟಿಂಗ್ ಕೋಚ್ ಮತ್ತು ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಅವರಿಗೆ ತಮ್ಮ ಹುದ್ದೆಗಳಲ್ಲಿ ಇನ್ನು 45 ದಿನಗಳ ಮುಂದುವರಿಯಲು ಅವಕಾಶ ನೀಡಲಾಗಿದೆ.

ಮಾಜಿ ನಾಯಕ ಕಪಿಲ್ ದೇವ್ ನೇತೃತ್ವದ ಕ್ರಿಕೆಟ್ ಸಲಹಾ ಸಮಿತಿ(ಸಿಎಸಿ) ಕೋಚ್ ಆಯ್ಕೆ ಸಂಬಂಧ ತಮ್ಮನ್ನು ಸಂಪರ್ಕಿಸಿಲ್ಲ ಎಂದು ಕೊಹ್ಲಿ ಹೇಳಿದರು.

► ಕೊಹ್ಲಿ ಪತ್ರಿಕಾಗೋಷ್ಠಿ ಅರ್ಧಗಂಟೆ ತಂಡವಾಗಿ ಆರಂಭ:

 ವಿಂಡೀಸ್ ಪ್ರವಾಸ ಸರಣಿಗೆ ಹೊರಡುವ ಮುನ್ನ ನಿಗದಿಯಾಗಿದ್ದ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಪತ್ರಿಕಾಗೋಷ್ಠಿ ಅರ್ಧಗಂಟೆ ತಡವಾಗಿ ಆರಂಭವಾಗಿತ್ತು. ಸಂಜೆ 6 ಗಂಟೆಗೆ ನಿಗದಿಯಾಗಿದ್ದ ಪತ್ರಿಕಾಗೋಷ್ಠಿ 6:30ಕ್ಕೆ ಆರಂಭಗೊಂಡಿತು.

ವಿರಾಟ್ ಕೊಹ್ಲಿ ಪತ್ರಿಕಾಗೋಷ್ಠಿಗೆ ಆಗಮಿಸುತ್ತಿದ್ದಂತೆ ಭಾರೀ ಮಳೆಯಿಂದಾಗಿ ಬರುವುದಕ್ಕೆ ಸ್ವಲ್ಪ ತಡವಾಯಿತು ಎಂದು ತಮ್ಮನ್ನು ಕಾಯುತ್ತಿದ್ದ ಸುದ್ದಿಗಾರರಲ್ಲಿ ಕೊಹ್ಲಿ ಕ್ಷಮೆ ಯಾಚಿಸಿದರು. ಕೊಹ್ಲಿ ತಂಡದ ಮಧ್ಯಮ ಸರದಿಯ ಬ್ಯಾಟಿಂಗ್‌ನ ಬಗ್ಗೆ ಮಾತನಾಡಿದರು. ವೆಸ್ಟ್ ಇಂಡೀಸ್ ಪ್ರವಾಸ ಸರಣಿಯಲ್ಲಿ ಟೆಸ್ಟ್ ತಂಡದಲ್ಲಿ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ದೊರೆಯಲಿದೆ ಎಂದರು.

ಭಾರತ ತಂಡದ ವೆಸ್ಟ್‌ಇಂಡೀಸ್ ಪ್ರವಾಸ ಸರಣಿ ಆಗಸ್ಟ್3ರಿಂದ ಸೆ. 3ರ ತನಕ ನಡೆಯಲಿದೆ.

ಭಾರತ ಪ್ರವಾಸದಲ್ಲಿ 3 ಟ್ವೆಂಟಿ-20, 3 ಏಕದಿನ ಮತ್ತು ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X